ಭಾರತದ ನಕ್ಷೆ ಬದಲು, ದೇಶದ ಕೇಂದ್ರಾಡಳಿತ ಪ್ರದೇಶಗಳೆಷ್ಟು?
ನವದೆಹಲಿ, ಆಗಸ್ಟ್ 05: ಸಂವಿಧಾನದ 370ನೇ ಪರಿಚ್ಛೇದ ರದ್ದುಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಿಂದಾಗಿ ಭಾರತ ಭೂಪಟ ಬದಲಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ, ರಾಜ್ಯ ಆಡಳಿತ ಅಧಿಕಾರ ರದ್ದಾಗಿದೆ. ಹೀಗಾಗಿ, ಭಾರತದಲ್ಲಿರುವ ಒಟ್ಟು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಹೊಸ ಲೆಕ್ಕಾಚಾರ ಬದಲಾಗಿದೆ.
ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ಅನುಗುಣವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸಿ, ಲಡಾಕ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.
ಸಂವಿಧಾನದ 370ನೇ ಪರಿಚ್ಛೇದ ಜಾರಿ ಇದ್ದ ಕಾಶ್ಮೀರದಲ್ಲಿ ಪೌರತ್ವ, ನಿರ್ದಿಷ್ಟ ಆಸ್ತಿಯ ಮಾಲೀಕತ್ವ, ಮೂಲಭೂತ ಹಕ್ಕುಗಳ ಅನುಷ್ಠಾನ ಮುಂತಾದ ವಿಚಾರಗಳಲ್ಲಿ ವಿಶೇಷ ಕಾನೂನುಗಳು ಅನುಷ್ಠಾನಗೊಂಡಿತ್ತು. ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಇದರ ಜೊತೆಗೆ ಅರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಒದಗಿಸುವ ವಿಧೇಯಕವನ್ನು ಅಮಿತ್ ಶಾ ಮಂಡಿಸಿ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದ್ದಾರೆ. ಇದಕ್ಕೆ ಸರಳ ಬಹುಮತ ಸಾಕಾಗಿದ್ದು, ರಾಷ್ಟ್ರಪತಿ ಅಂಕಿತ ಬಿದ್ದಿರುವುದರಿಂದ ಹೊಸ ಸೌಲಭ್ಯ ಜಾರಿಗೊಳ್ಳಲು ಯಾವುದೇ ಅಡ್ಡಿ ಆತಂಕವಿಲ್ಲ.

ಕೇಂದ್ರಾಡಳಿತ ಪ್ರದೇಶ ಎಂದರೇನು?:
ಕೇಂದ್ರಾಡಳಿತ ಪ್ರದೇಶ ಎಂಬುದು ಭಾರತ ಗಣರಾಜ್ಯದ ಅವಿಭಾಜ್ಯ ಅಂಗವಾಗಿದೆ. ಕೇಂದ್ರಾಡಳಿತ ಪ್ರದೇಶವು ಕೇಂದ್ರ ಸರ್ಕಾರದ ನೇರ ಆಡಳಿತಕ್ಕೆ ಒಳಪಡುತ್ತದೆ. ಭಾರತದ ಇತರೆ ರಾಜ್ಯಗಳು ಹೊಂದಿರುವಂತೆ ಇವುಗಳು ಪ್ರತ್ಯೇಕ ಸರ್ಕಾರಗಳನ್ನು ಹೊಂದಿರುವುದಿಲ್ಲ. ಆದರೆ ಭಾರತದ ಸಂಸತ್ತು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರಾಡಳಿತ ಪ್ರದೇಶಗಳಿಗೆ ಶಾಸನ ಸಭೆಯ ಸ್ಥಾನ ಕಲ್ಪಿಸಬಹುದು.
ಈ ಪೈಕಿ ದೆಹಲಿ ಹಾಗೂ ಪುದುಚೇರಿಯಲ್ಲಿ ಚುನಾಯಿತ ಸರ್ಕಾರ ಹೊಂದಲು ಅವಕಾಶವಿದೆ. ಈಗ ಜಮ್ಮು ಮತ್ತು ಕಾಶ್ಮೀರದಲ್ಲೂ ಚುನಾವಣೆ ನಡೆಸಿ, ಸರ್ಕಾರ ಹೊಂದಬಹುದು. ವಿಧಾನಸಭೆ ಹೊಂದಬಹುದು. ಆದರೆ, ಲಡಾಕ್ ನಲ್ಲಿ ಈ ಸೌಲಭ್ಯ ಇರುವುದಿಲ್ಲ.
ಭಾರತದ ಕೇಂದ್ರಾಡಳಿತ ಪ್ರದೇಶಗಳು:
* ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು
* ಚಂದಿಗಡ
* ದಾದ್ರ ಮತ್ತು ನಗರ್ ಹವೇಲಿ
* ದಮನ್ ಮತ್ತು ದಿಯು
* ಲಕ್ಷದ್ವೀಪ
* ಲಡಾಕ್
ವಿಧಾನಸಭೆ ಹೊಂದಬಹುದಾದ ಕೇಂದ್ರಾಡಳಿತ ಪ್ರದೇಶಗಳು
* ರಾಷ್ಟ್ರೀಯ ರಾಜಧಾನಿ ಪ್ರದೇಶ ದೆಹಲಿ
* ಪುದುಚೇರಿ
* ಜಮ್ಮು ಮತ್ತು ಕಾಶ್ಮೀರ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications