ಭಾರತದ ನಕ್ಷೆ ಬದಲು, ದೇಶದ ಕೇಂದ್ರಾಡಳಿತ ಪ್ರದೇಶಗಳೆಷ್ಟು?
ನವದೆಹಲಿ, ಆಗಸ್ಟ್ 05: ಸಂವಿಧಾನದ 370ನೇ ಪರಿಚ್ಛೇದ ರದ್ದುಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಿಂದಾಗಿ ಭಾರತ ಭೂಪಟ ಬದಲಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ, ರಾಜ್ಯ ಆಡಳಿತ ಅಧಿಕಾರ ರದ್ದಾಗಿದೆ. ಹೀಗಾಗಿ, ಭಾರತದಲ್ಲಿರುವ ಒಟ್ಟು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಹೊಸ ಲೆಕ್ಕಾಚಾರ ಬದಲಾಗಿದೆ.
ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ಅನುಗುಣವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸಿ, ಲಡಾಕ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.
ಸಂವಿಧಾನದ 370ನೇ ಪರಿಚ್ಛೇದ ಜಾರಿ ಇದ್ದ ಕಾಶ್ಮೀರದಲ್ಲಿ ಪೌರತ್ವ, ನಿರ್ದಿಷ್ಟ ಆಸ್ತಿಯ ಮಾಲೀಕತ್ವ, ಮೂಲಭೂತ ಹಕ್ಕುಗಳ ಅನುಷ್ಠಾನ ಮುಂತಾದ ವಿಚಾರಗಳಲ್ಲಿ ವಿಶೇಷ ಕಾನೂನುಗಳು ಅನುಷ್ಠಾನಗೊಂಡಿತ್ತು. ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಇದರ ಜೊತೆಗೆ ಅರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಒದಗಿಸುವ ವಿಧೇಯಕವನ್ನು ಅಮಿತ್ ಶಾ ಮಂಡಿಸಿ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದ್ದಾರೆ. ಇದಕ್ಕೆ ಸರಳ ಬಹುಮತ ಸಾಕಾಗಿದ್ದು, ರಾಷ್ಟ್ರಪತಿ ಅಂಕಿತ ಬಿದ್ದಿರುವುದರಿಂದ ಹೊಸ ಸೌಲಭ್ಯ ಜಾರಿಗೊಳ್ಳಲು ಯಾವುದೇ ಅಡ್ಡಿ ಆತಂಕವಿಲ್ಲ.

ಕೇಂದ್ರಾಡಳಿತ ಪ್ರದೇಶ ಎಂದರೇನು?:
ಕೇಂದ್ರಾಡಳಿತ ಪ್ರದೇಶ ಎಂಬುದು ಭಾರತ ಗಣರಾಜ್ಯದ ಅವಿಭಾಜ್ಯ ಅಂಗವಾಗಿದೆ. ಕೇಂದ್ರಾಡಳಿತ ಪ್ರದೇಶವು ಕೇಂದ್ರ ಸರ್ಕಾರದ ನೇರ ಆಡಳಿತಕ್ಕೆ ಒಳಪಡುತ್ತದೆ. ಭಾರತದ ಇತರೆ ರಾಜ್ಯಗಳು ಹೊಂದಿರುವಂತೆ ಇವುಗಳು ಪ್ರತ್ಯೇಕ ಸರ್ಕಾರಗಳನ್ನು ಹೊಂದಿರುವುದಿಲ್ಲ. ಆದರೆ ಭಾರತದ ಸಂಸತ್ತು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರಾಡಳಿತ ಪ್ರದೇಶಗಳಿಗೆ ಶಾಸನ ಸಭೆಯ ಸ್ಥಾನ ಕಲ್ಪಿಸಬಹುದು.
ಈ ಪೈಕಿ ದೆಹಲಿ ಹಾಗೂ ಪುದುಚೇರಿಯಲ್ಲಿ ಚುನಾಯಿತ ಸರ್ಕಾರ ಹೊಂದಲು ಅವಕಾಶವಿದೆ. ಈಗ ಜಮ್ಮು ಮತ್ತು ಕಾಶ್ಮೀರದಲ್ಲೂ ಚುನಾವಣೆ ನಡೆಸಿ, ಸರ್ಕಾರ ಹೊಂದಬಹುದು. ವಿಧಾನಸಭೆ ಹೊಂದಬಹುದು. ಆದರೆ, ಲಡಾಕ್ ನಲ್ಲಿ ಈ ಸೌಲಭ್ಯ ಇರುವುದಿಲ್ಲ.
ಭಾರತದ ಕೇಂದ್ರಾಡಳಿತ ಪ್ರದೇಶಗಳು:
* ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು
* ಚಂದಿಗಡ
* ದಾದ್ರ ಮತ್ತು ನಗರ್ ಹವೇಲಿ
* ದಮನ್ ಮತ್ತು ದಿಯು
* ಲಕ್ಷದ್ವೀಪ
* ಲಡಾಕ್
ವಿಧಾನಸಭೆ ಹೊಂದಬಹುದಾದ ಕೇಂದ್ರಾಡಳಿತ ಪ್ರದೇಶಗಳು
* ರಾಷ್ಟ್ರೀಯ ರಾಜಧಾನಿ ಪ್ರದೇಶ ದೆಹಲಿ
* ಪುದುಚೇರಿ
* ಜಮ್ಮು ಮತ್ತು ಕಾಶ್ಮೀರ
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications