ಯೋಧರ ಕಾಲಿಗೆ ನಮಸ್ಕರಿಸಿದ ಪುಟ್ಟ ಕಂದಮ್ಮ: ವಿಡಿಯೋ ವೈರಲ್
ದೇಶ ಕಾಯುವ ಯೋಧರು ದೇವರಿಗೆ ಸಮ. ಹಗಲು ಇರುಳು ಎನ್ನದೇ ದೇಶಕ್ಕಾಗಿ, ದೇಶದ ಜನರಿಗಾಗಿ ದುಡಿಯುವ ಇವರು ನಮ್ಮ ದೇಶದ ರಕ್ಷಕರು. ದೇಶ ಸೇವೆಯೇ ಈಶ ಸೇವೆ ಎಂದು ದೇಶದ ಹಿತಕ್ಕಾಗಿ ದೇಹ ಸವೆಸುವ ಇವರು ಜೀವ, ಬದುಕಿನ ಹಂಗು ತೊರೆದು ದೇಶ ಸೇವೆಯಲ್ಲಿ ನಿರತರಾಗಿರುತ್ತಾರೆ.
ದೇಶ ಸೇವೆಯೇ ಉಸಿರೆಂದು ಬದುಕುತ್ತಿರುವ ಯೋಧರನ್ನು ಕಂಡಾಗ ನಮ್ಮಲ್ಲಿ ಒಂದು ಗೌರವ ಹುಟ್ಟುತ್ತದೆ. ಕೆಲವರು ಅವರನ್ನು ಕಂಡೊಂಡನೆ ಕೈ ಕುಲುಕುವುದು, ಅಭಿನಂದಿಸುವುದು ಮಾಡುತ್ತೇವೆ. ಆದರೆ ಇಲ್ಲೊಂದು ಮಗು ನಿಂತಿದ್ದ ಯೋಧರ ಬಳಿ ಹೋಗಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದೆ.
ಕಪ್ಪು ಬಣ್ಣದ ಫ್ರಾಕ್ ತೊಟ್ಟ ಮುದ್ದಾದ ಮಗು ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಓಡುತ್ತಾ ಸೈನಿಕರ ಬಳಿಗೆ ಹೋಗಿ ನಿಲ್ಲುತ್ತದೆ. ಆಗ ಅಲ್ಲಿಯೇ ತಮ್ಮ ಇನ್ನೊಬ್ಬರ ಸೈನಿಕರ ಜೊತೆ ಮಾತನಾಡುತ್ತಾ ನಿಂತಿದ್ದ ಸೈನಿಕ ಮಗುವನ್ನು ಕಂಡಾಕ್ಷಣ ಗಲ್ಲ ಹಿಡಿದು ಮಾತನಾಡಿಸುತ್ತಾರೆ. ಸೈನಿಕರ ಮುಖವನ್ನೇ ನೋಡುತ್ತಿದ್ದ ಮಗು ಸೈನಿಕರ ಕಾಲಿಗೆ ನಮಸ್ಕರಿಸುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹರ್ಷವರ್ಧನ್ ಮುಪ್ಪವರಪು ಎಂಬುವವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಸಂಸ್ಕಾರದ ಆತ್ಮವನ್ನು ಕಲುಕುವ ಕ್ರಿಯೆ ಎಂದು ವ್ಯಾಖ್ಯಾನಿಸಿದ್ದಾರೆ.
ಇವರ ಈ ವಿಡಿಯೋಗೆ ಹಲವರು ಪ್ರತಿಕ್ರಿಯಿಸಿದ್ದು, ಕಂದನಿಗೆ ಸೈನಿಕರು ದೇವರಂತೆ ಕಂಡಾಗ, ಸೈನಿಕರೂ ಆ ಕಂದನನ್ನು ದೇವರಂತೆ ಕಂಡಿರುತ್ತಾರೆ! ಮುಗ್ಧ ಪ್ರೀತಿಯ ದೇವರು ಮತ್ತು ರಕ್ಷಣೆ ನೀಡುವ ದೇವರು ಭೇಟಿಯಾದ ಕ್ಷಣ ಎಂದು ಸುದರ್ಶನ್ ಹಾರ್ನಳ್ಳಿ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಸಾಫ್ಟ್ ವೇರ್ ಇಂಜಿನಿಯರ್ ಪುನೀತ್ ಎಂಬುವವರು ಒಂದು ಕ್ಯೂಟ್ನೆಸ್ ಮತ್ತು ಇನ್ನೊಂದು ಶಕ್ತಿ ಎರಡೂ ನಮ್ಮ ರಾಷ್ಟ್ರದ ಶಕ್ತಿ ಎಂದು ಹೇಳಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications