ಲೋಕಸಭೆ ಚುನಾವಣೆ 2019: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪರಿಚಯ
Recommended Video

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ, ತೇಜಸ್ವಿನಿ ರಮೆಶ್, ಸಿಪಿ ಯೋಗೇಶ್ವರ, ಡಿಕೆ ಸುರೇಶ್ ರಂಥ ಘಟನಾಘಟಿ ರಾಜಕಾರಣಿಗಳು ಸ್ಪರ್ಧಿಸಿದಂಥ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಕ್ಷೇತ್ರ. ಈ ಹಿಂದಿನ ಕನಕಪುರ ಕ್ಷೇತ್ರ ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿ ಬದಲಾಗಿದೆ.
2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ನಿರ್ಮಾಣವಾಯಿತು. ಕನಕಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಸಾತನೂರು, ಉತ್ತರಹಳ್ಳಿ ಕ್ಷೇತ್ರಗಳು ರದ್ದಾಗಿ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ ಕ್ಷೇತ್ರಗಳು ರಚನೆಯಾದವು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಮೂರು ಜಿಲ್ಲೆಗಳಲ್ಲಿ ವ್ಯಾಪಿಸಿದೆ. ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್, ತುಮಕೂರು ಜಿಲ್ಲೆಯ ಕುಣಿಗಲ್, ರಾಮನಗರ ಜಿಲ್ಲೆಯ ರಾಮನಗರ, ಮಾಗಡಿ, ಚನ್ನಪಟ್ಟಣ, ಕನಕಪುರ ಕ್ಷೇತ್ರಗಳು ಸೇರಿವೆ.

ಕುಣಿಗಲ್, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ,ರಾಮನಗರ, ಕನಕಪುರ, ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಪೈಕಿ ಕುಣಿಗಲ್, ರಾಜರಾಜೇಶ್ವರಿ ನಗರ,ಆನೇಕಲ್, ಕನಕಪುರ ಗಳಲ್ಲಿ ಕಾಂಗ್ರೆಸ್, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ, ಮಾಗಡಿ, ರಾಮನಗರ, ಚೆನ್ನಪಟ್ಟಣದಲ್ಲಿ ಜೆಡಿಎಸ್ ವಶದಲ್ಲಿದೆ.
ಕ್ಷೇತ್ರದ ಇತಿಹಾಸ:
ಮೈಸೂರು ರಾಜ್ಯದಲ್ಲಿದ್ದಾಗ ಕಾಂಗ್ರೆಸ್ಸಿನ ಎಂವಿ ರಾಜಶೇಖರನ್ ಅವರು 1967ರಲ್ಲಿ ಗೆಲುವು ಸಾಧಿಸಿ, ಕ್ಷೇತ್ರದ ಮೊದಲ ಸಂಸದರೆನಿಸಿದರು. ಕರ್ನಾಟಕ ರಾಜ್ಯ ಉದಯವಾದ ಬಳಿಕ ಕಾಂಗ್ರೆಸ್ಸಿನ ಎಂವಿ ಚಂದ್ರಶೇಖರಮೂರ್ತಿ ಅವರು 1977ರಲ್ಲಿ ಜಯ ದಾಖಲಿಸಿದರು. ಎಂ ಶ್ರೀನಿವಾಸ್ ಅವರು ಇಲ್ಲಿ ತನಕ ಇಲ್ಲಿ ಜಯ ದಾಖಲಿಸಿರುವ ಏಕೈಕ ಬಿಜೆಪಿ ಸಂಸದ. ಎಚ್ ಡಿ ದೇವೇಗೌಡ, ತೇಜಸ್ವಿನಿ ಅವರು ಕೂಡಾ ಒಮ್ಮೆ ಈ ಕ್ಷೇತ್ರದಿಂದ ಜಯ ದಾಖಲಿಸಿದ್ದಾರೆ.

ಕಳೆದ ಜನ ಗಣತಿಯಂತೆ ಕ್ಷೇತ್ರದಲ್ಲಿ ಒಟ್ಟು 27,56,259 ಮಂದಿ ಇದ್ದು, ಶೇ 48.56ರಷ್ಟು ಮಂದಿ ಗ್ರಾಮೀಣ ಭಾಗದಲ್ಲಿದ್ದರೆ, ಶೇ 51.44ರಷ್ಟು ಮಂದಿ ನಗರವಾಸಿಗಳಾಗಿದ್ದಾರೆ. ಶೇ 15.96ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ 2.15ರಷ್ಟು ಪರಿಶಿಷ್ಟ ಪಂಗಡದವರಿದ್ದಾರೆ.
ಈ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯಕ, ಉಳಿದಂತೆ ಲಿಂಗಾಯತ, ಕುರುಬ, ಅಲ್ಪ ಸಂಖ್ಯಾತ, ಬೆಸ್ತ, ತಿಗಳ ಮುಂತಾದ ಮತಗಳು ಎಣಿಕೆಗೆ ಬರಲಿವೆ.
ಒಟ್ಟು 21,90,397 ಮತದಾರರಿದ್ದು, ಈ ಪೈಕಿ 11,35,845 ಪುರುಷ ಮತದಾರರು, 10,54,552 ಮಹಿಳಾ ಮತದಾರರಿದ್ದಾರೆ.

2009ರಿಂದ ಇಲ್ಲಿ ತನಕ ಕಾಂಗ್ರೆಸ್ ಒಮ್ಮೆ ಹಾಗೂ ಜೆಡಿಎಸ್ ಒಮ್ಮೆ ಗೆಲುವು ಸಾಧಿಸಿ ತಲಾ ಶೇ 50ರಷ್ಟು ಗೆಲುವಿನ ಸರಾಸರಿ ಹೊಂದಿವೆ.
ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (51) ಅವರು ಸಂಸತ್ತಿನಲ್ಲಿ ಶೇ 86ರಷ್ಟು ಹಾಜರಾತಿ ಹೊಂದಿದ್ದು, 607ಪ್ರಶ್ನೆಗಳನ್ನು ಎತ್ತಿದ್ದಾರೆ, 88 ಚರ್ಚೆಗಳಲ್ಲಿ ಪಾಲ್ಗೊಂಡಿದ್ದಾರೆ.

2014ರಲ್ಲಿ ಶೇ 66ರಷ್ಟು ಮತದಾನವಾಗಿತ್ತು. 14,55,244 ಮತಗಳ ಪೈಕಿ 7,58,619 ಪುರುಷರು ಹಾಗೂ 6,96,625 ಮಹಿಳೆಯರ ಮತಗಳು ದಾಖಲಾಗಿತ್ತು. ಕಾಂಗ್ರೆಸ್ಸಿನ ಡಿಕೆ ಶಿವಕುಮಾರ್ (6,52,723 ಮತಗಳು ) ಅವರು ಬಿಜೆಪಿಯ ಮುನಿರಾಜು ಗೌಡ (4,21,243 ಮತಗಳು) ಅವರನ್ನು ಸೋಲಿಸಿದ್ದರು.
ಕ್ಷೇತ್ರದ ಸಮಸ್ಯೆ:
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಮೂರು ಜಿಲ್ಲೆಗಳಲ್ಲಿ ವ್ಯಾಪಿಸಿರುವುದು ಅನುಕೂಲವೂ ಹೌದು, ಸಮಸ್ಯೆಯೂ ಹೌದು. ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್ ಭಾಗಗಳಲ್ಲಿ, ತುಮಕೂರು ಜಿಲ್ಲೆಯ ಕುಣಿಗಲ್, ರಾಮನಗರ ಜಿಲ್ಲೆಯ ರಾಮನಗರ, ಮಾಗಡಿ, ಚನ್ನಪಟ್ಟಣ, ಕನಕಪುರ ಕ್ಷೇತ್ರಗಳು ಸೇರಿವೆ.
ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ, ಆನೇಕಲ್, ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್, ಮಿಕ್ಕ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಧಿಕಾರದಲ್ಲಿದೆ. ಹಾಲಿ ಸಂಸದರು ರಾಮನಗರ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ ಎಂಬ ಅಪವಾದವಿದೆ. ರಾಮನಗರ ಜಿಲ್ಲೆಯಲ್ಲಿನ ಕಲ್ಲು, ಮರಳು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿದೆ. ಕ್ಷೇತ್ರದಲ್ಲಿ ನಗರ ಪ್ರದೇಶ ಅಧಿಕವಾಗಿದ್ದರೂ ಐತಿಹಾಸಿಕ, ಪ್ರವಾಸಿ ತಾಣಗಳನ್ನು ಹೊಂದಿದೆ.
ಹತ್ತು ಹಲವು ಸಾರಿಗೆ ಸಂಪರ್ಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಬ್ಬು, ರೇಷ್ಮೆ ಬೆಳೆಗಾರರಿಗೆ ಬೆಂಬಲ ಬೆಲೆ ಒದಗಿಸುವಲ್ಲಿ ಸಂಸದರ ಪಾತ್ರ ಇನ್ನಷ್ಟು ಚುರುಕಾಗಬೇಕಿದೆ. ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್, ಎಗ್ಗಿಲ್ಲದೆ ವಿಸ್ತರಣೆಗೊಳ್ಳುತ್ತಿರುವ ಅಪಾರ್ಟ್ಮೆಂಟ್ ಗಳು, ಕೆರೆಗಳು ವಸತಿ ಸಮುಚ್ಚಯಗಳಾಗಿ ಬದಲಾಗುತ್ತಿರುವುದು ದುರಂತವಾಗಿದೆ. ಈ ಪೈಕಿ ಕುಣಿಗಲ್, ರಾಜರಾಜೇಶ್ವರಿ ನಗರ,ಆನೇಕಲ್, ಕನಕಪುರ ಗಳಲ್ಲಿ ಕಾಂಗ್ರೆಸ್, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ, ಮಾಗಡಿ, ರಾಮನಗರ, ಚೆನ್ನಪಟ್ಟಣದಲ್ಲಿ ಜೆಡಿಎಸ್ ವಶದಲ್ಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications