ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿ ತಾರೆಯರು
ಲೋಕಸಭೆ ಚುನಾವಣೆ 2019ರಲ್ಲಿ ದೇಶದ ಅತಿ ದೊಡ್ಡ ಪಕ್ಷವಾಗಿ ಎನ್.ಡಿ.ಎ ಮೈತ್ರಿಕೂಟ ಹೊರಹೊಮ್ಮಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತು ಮಹಾಘಟಬಂಧನ್ ಮಾಡಿಕೊಂಡಿದ್ದ ತೃತಿಯ ರಂಗಕ್ಕೂ ಭಾರಿ ಹಿನ್ನಡೆಯಾಗಿದೆ.
ಘಟಾನುಘಟಿ ರಾಜಕಾರಣಿಗಳ ಜೊತೆ ಸಿನಿಮಾ ಇಂಡಸ್ಟ್ರಿಯವರು ಕೂಡ ಲೋಕಸಭೆ ಅಖಾಡದಲ್ಲಿದ್ದರು. ಕರ್ನಾಟಕದಿಂದ ಸುಮಲತಾ, ನಿಖಿಲ್ ಕುಮಾರ್, ಪ್ರಕಾಶ್ ರೈ ಸ್ಪರ್ಧಿಸಿದ್ದರು. ದೇಶದ ಇತರೆ ರಾಜ್ಯಗಳಲ್ಲೂ ಸಿನಿಮಾ ಸ್ಟಾರ್ ಗಳು ಸ್ಪರ್ಧೆ ಮಾಡಿದ್ದರು.
ಹೇಮಾ ಮಾಲಿನಿ, ಜಯಪ್ರದಾ, ಶತ್ರುಜ್ಞ ಸಿನ್ಹಾ, ರವಿ ಕಿಶನ್, ಪವನ್ ಕಲ್ಯಾಣ್, ಸನ್ನಿ ಡಿಯೋಲ್, ಸ್ಮೃತಿ ಇರಾನಿ, ಊರ್ಮಿಳಾ, ಬಾಬು ಸುಪ್ರಿಯೋ ಹೀಗೆ ಇನ್ನು ಹಲವರು ಲೋಕ ಅಖಾಡದಲ್ಲಿದ್ದರು. ಹಾಗಿದ್ರೆ, ಇವರುಗಳ ಪೈಕಿ ಯಾರು ಗೆದ್ದರು? ಯಾರು ಸೋತರು? ಮುಂದೆ ಓದಿ.....

ಗೆದ್ದು ನಗೆ ಬೀರಿದ ಸುಮಲತಾ
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದೇ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಸ್ಪರ್ಧಿಸಿದ್ದ ನಟ ಹಾಗೂ ಸಿಎಂ ಪುತ್ರ ನಿಖಿಲ್ ಕುಮಾರ್ ಸೋತಿದ್ದಾರೆ.

ಪ್ರಕಾಶ್ ರೈ ಕಥೆ ಏನಾಯಿತು?
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಕಾಶ್ ರೈ ಠೇವಣಿ ಕಳೆದುಕೊಂಡಿದ್ದಾರೆ. ಬಿಜೆಪಿಯ ಪಿಸಿ ಮೋಹನ್ ಹಾಗೂ ಕಾಂಗ್ರೆಸ್ ರಿಜ್ವಾನ್ ಅರ್ಷಾದ್ ವಿರುದ್ಧ ಭಾರಿ ಹೀನಾಯವಾಗಿ ಸೋಲು ಕಂಡಿದ್ದಾರೆ.

ಎರಡೂ ಕ್ಷೇತ್ರದಲ್ಲಿ ಸೋತ ಪವನ್ ಕಲ್ಯಾಣ್
ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆದಿತ್ತು. ಗಾಜುವಾಕ ಮತ್ತು ಭೀಮಾವರಂ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಪವನ್ ಕಲ್ಯಾಣ್ ಎರಡೂ ಕ್ಷೇತ್ರದಲ್ಲೂ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದ್ದಾರೆ.

ಗೆದ್ದ ಸ್ಮೃತಿ, ಹೇಮಾ ಮಾಲಿನಿ
ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಭರ್ಜರಿ ಜಯಗೊಳಿಸಿದ್ದಾರೆ. ಉತ್ತರ ಪ್ರದೇಶದ ಮಥುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ನಟಿ ಹೇಮಾ ಮಾಲಿನಿ ಕೂಡ ಜಯ ಕಂಡಿದ್ದಾರೆ.

ಸೋತ ಜಯಪ್ರದಾ, ಶತ್ರುಜ್ಞ ಸಿನ್ಹಾ
ಉತ್ತರ ಪ್ರದೇಶದ ರಾಂಪುರ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಟಿ ಜಯಪ್ರದಾ ಸೋಲು ಕಂಡಿದ್ದಾರೆ. ಪಾಟ್ನ ಸಾಹಿಬ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕ ಶತ್ರುಜ್ಞ ಸಿನ್ಹಾ ಕೂಡ ಸೋತಿದ್ದಾರೆ. ಶತ್ರುಜ್ಞ ಸಿನ್ಹಾ ಪತ್ನಿ ಪೂನಂ ಸಿನ್ಹಾ ಸಮಾಜವಾದಿ ಪಕ್ಷದಿಂದ ಲಕ್ನೌ ನಲ್ಲಿ ಸ್ಪರ್ಧೆ ಮಾಡಿದ್ದರು. ಇವರು ಕೂಡ ಸೋತಿದ್ದಾರೆ.

ಗೆದ್ದ ಸನ್ನಿ ಡಿಯೋಲ್, ಸೋತ ಊರ್ಮಿಳಾ
ಪಂಜಾಬ್ ನ ಗುರ್ದಾಸ್ ಪುರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಸನ್ನಿ ಡಿಯೋಲ್ ಗೆಲುವು ಕಂಡಿದ್ದಾರೆ. ಮುಂಬೈ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಟಿ ಊರ್ಮಿಳಾ ಮಾತೊಂಡ್ಕರ್ ಸೋಲು ಕಂಡಿದ್ದಾರೆ. ಗೋರಖ್ ಪುರದಲ್ಲಿ ಭೋಜ್ ಪುರಿ ನಟ ರವಿಕಿಶನ್ ಗೆಲುವು ಸಾಧಿಸಿದ್ದಾರೆ.

ಬಹುಭಾಷೆ ನಟಿ ರೋಜಾ ಗೆಲುವು
ಬಹುಭಾಷೆ ನಟಿ ರೋಜಾ ನಗಾರಿ ವಿಧಾನಸಭೆ ಕ್ಷೇತ್ರದಿಂದ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಜಯ ಸಾಧಿಸಿದ್ದಾರೆ. ಜಗನ್ ಮೋಹನ್ ಸರ್ಕಾರದಲ್ಲಿ ಮಂತ್ರಿಯಾಗುವ ಸಾಧ್ಯತೆಯೂ ಇದೆ. ಮನೋಜ್ ತಿವಾರಿ ಗೆಲುವು ಕಂಡಿದ್ದಾರೆ. ನಟಿ ಮೂನ್ ಮೂನ್ ಸೇನ್ ವಿರುದ್ಧ ಬಬೂಲ್ ಸುಪ್ರಿಯೋ ಗೆಲುವು ಕಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications