ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಆಸ್ತಿ ವಿವರ
Recommended Video

ಬೆಂಗಳೂರು, ಮಾರ್ಚ್ 27: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರು ಮಂಗಳವಾರದಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಆಸ್ತಿ ವಿವರ ಅಫಿಡವಿಟ್ ನಲ್ಲಿರುವ ಮುಖ್ಯಾಂಶಗಳು ಇಲ್ಲಿವೆ
ತಾನು ಯಾವುದೇ ಚಿನ್ನಾಭರಣ ಹೊಂದಿಲ್ಲ ಎಂದು ತಿಳಿಸಿರುವ ಅವರು, ಯಾವುದೇ ಬ್ಯಾಂಕ್, ಸಂಸ್ಥೆಗಳಲ್ಲಿ ಸಾಲ ಕೂಡ ಮಾಡಿಲ್ಲ ಎಂದು ಅಫಿಡವಿಟ್ ನಲ್ಲಿ ಹೇಳಿದ್ದಾರೆ.
ತೇಜಸ್ವಿ ಸೂರ್ಯ ಬಳಿ ಇರುವ ಒಟ್ಟು ಚರಾಸ್ತಿ ಮೌಲ್ಯ 13.46 ಲಕ್ಷ ರೂ. ಮೊತ್ತದ್ದು. ಯಾವುದೇ ಬಗೆಯ ಸ್ಥಿರಾಸ್ತಿ ಹೊಂದಿರದ ತೇಜಸ್ವಿ ಸೂರ್ಯ, 5.12 ಲಕ್ಷ ರೂ ವಾರ್ಷಿಕ ಆದಾಯ ತೋರಿಸಿದ್ದಾರೆ. ತೇಜಸ್ವಿ ಸೂರ್ಯ ಕೈಯಲ್ಲಿರುವ ಹಣ 72 ಸಾವಿರ ರೂ. ಆಗಿದ್ದರೆ, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ, ವಿಮೆ, ಉಳಿತಾಯ ಹೂಡಿಕೆ ಹಣ 13.46 ಲಕ್ಷ ರೂ. ಇದೆ.

ತೇಜಸ್ವಿ ಸೂರ್ಯ ಸ್ವವಿವರ
* ಎಲ್ಎ ಸೂರ್ಯನಾರಾಯಣ ಅವರ ಪುತ್ರ
* ವಯಸ್ಸು 28
* ಬೆಂಗಳೂರಿನ ಗಿರಿನಗರ 1ನೇ ಹಂತದ ನಿವಾಸಿ
* ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.
* ಟ್ವಿಟ್ಟರ್, ಫೇಸ್ ಬುಕ್ ಖಾತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

ಐಟಿರಿಟರ್ನ್ಸ್ ಸಲ್ಲಿಸಿದ್ದಾರೆ
* ಮಾರ್ಚ್ 31ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ 5,13,220 ರು ಆದಾಯ ತೋರಿಸಿ 2017-18ರ ಐಟಿ ರಿಟರ್ನ್ಸ್ ಸಲ್ಲಿಸಿದ್ದಾರೆ.
* ಇವರ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲ.
* ಯಾವುದೇ ಕೃಷಿ ಭೂಮಿ ಹೊಂದಿಲ್ಲ. ಯಾವುದೆ ವಾಣಿಜ್ಯ ನಿವೇಶನ, ಕಟ್ಟಡವನ್ನು ಖರೀದಿಸಿಲ್ಲ.
* ಬ್ಯಾಂಕ್, ಆರ್ಥಿಕ ಸಂಸ್ಥೆಗಳಿಂದ ಯಾವುದೇ ಸಾಲ ಪಡೆದಿಲ್ಲ.

ಚರಾಸ್ಥಿ ವಿವರ
* ನಗದು : 72,000 ರು
* ಗಿರಿನಗರದ ಕೆನರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ಕ್ರಮವಾಗಿ 1,88,510.56 ರು, 9,482 ರು, 5,23,738.02 ರು ಹೊಂದಿದ್ದಾರೆ.
* ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಲ್ಲಿ ಎಫ್ ಡಿ : 71,637 ರು
* ಕೆನರಾ ಬ್ಯಾಂಕಿನ ನಿಶ್ಚಿತ ಠೇವಣಿ (ಎಫ್ ಡಿ) : 82,725 ರು
* ಷೇರು, ಬಾಂಡ್, ಮ್ಯೂಚುವಲ್ ಫಂಡ್ಸ್ ಹೊಂದಿರುವ ಬಗ್ಗೆ ಹೊಂದಿಲ್ಲ
* ಐಸಿಐಸಿಐ ಪ್ರೂಡೆನ್ಶಿಯಲ್ : 2,42,500ರು
* ಕೋಟಕ್ ಲೈಫ್ ವಿಮೆ : 28,000 ರು
* ಓರಿಯೆಂಟಲ್ ವಿಮೆ : 2,00,000
ಒಟ್ಟಾರೆ: 13,46,592.58 ರುಗಳು

ವೃತ್ತಿಯಿಂದ ವಕೀಲ
* ವೃತ್ತಿಯಿಂದ ವಕೀಲನಾಗಿದ್ದು, ವೃತ್ತಿಯಿಂದ ಬರುವ ಆದಾಯ, ಬ್ಯಾಂಕಿನ ಬಡ್ಡಿದರವೇ ಆದಾಯದ ಮೂಲವಾಗಿದೆ.
* 2006ರಲ್ಲಿ ಕುಮಾರನ್ಸ್ ಚಿಲ್ಡ್ರನ್ಸ್ ಹೋಂನಿಂದ ಎಸ್ಎಸ್ಎಲ್ ಸಿ
* 2008ರಲ್ಲಿ ನ್ಯಾಷನಲ್ ಕಾಲೇಜಿನಿಂದ ಪಿಯುಸಿ
* 2013ರಲ್ಲಿ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಬಿಎ, ಎಲ್ಎಲ್ ಬಿ
* ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜಯನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications