ಬಿಜೆಪಿ ಚುನಾವಣಾ ಪ್ರಣಾಳಿಕೆ: ವಿದೇಶಾಂಗ ನೀತಿಗೆ ಇನ್ನಷ್ಟು ಬಲ
ನವದೆಹಲಿ, ಏಪ್ರಿಲ್ 8: 'ಜಗತ್ತಿನಲ್ಲಿ ಭಾರತದ ಸಮಯ ಬಂದಿದೆ ಎಂದು ನಾವು ನಂಬುತ್ತೇವೆ. ಆಕೆ ಶಕ್ತಿಯಾಗಿ ಹೊರಹೊಮ್ಮುತ್ತಿದ್ದಾಳೆ ಮತ್ತು ಬಹು ಧ್ರುವದ ವಿಶ್ವದಲ್ಲಿ ದೇಶಗಳೊಂದಿಗೆ ಸಂಪರ್ಕ ಸಾಧಿಸಲಾಗುತ್ತಿದೆ. ಭಾರತದ ಉದಯ ಹೊಸ ವಾಸ್ತವ ಮತ್ತು 21ನೇ ಶತಮಾನದಲ್ಲಿ ಜಾಗತಿಕ ಕಾರ್ಯಸೂಚಿಯನ್ನು ರೂಪಿಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬಹುದಾಗಿದೆ'
ಇದು ಬಿಜೆಪಿ ಸೋಮವಾರ ಬಿಡುಗಡೆ ಮಾಡಿದ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿದೇಶಾಂಗ ನೀತಿಗಳ ಕುರಿತಾಗಿ ನೀಡಿದ ಹೇಳಿಕೆ. ಈ ಪ್ರಣಾಳಿಕೆಯಲ್ಲಿ ವಿದೇಶಗಳೊಂದಿಗೆ ಯಾವ ರೀತಿ ಬಾಂಧವ್ಯ ಮುಂದುವರಿಸಲಿದೆ ಎಂಬ ಬಗ್ಗೆ ವಿವರಿಸಲಾಗಿದೆ.
* 'ವಸುದೈವ ಕುಟುಂಬಕಂ' ಎಂಬ ಪ್ರಾಚೀನ ಭಾರತದ ದೃಷ್ಟಿಕೋನದಂತೆ ರಾಷ್ಟ್ರೀಯ ಅಭಿವೃದ್ಧಿ ಮತ್ತು ಭದ್ರತಾ ಹಿತಾಸಕ್ತಿಗಳನ್ನು ಸಾಧಿಸುವಾಗ, ಸ್ನೇಹಿ ದೇಶಗಳು ಮತ್ತು ನೆರೆಹೊರೆಯವರೊಂದಿಗೆ ಪ್ರಗತಿ, ಸಮೃದ್ಧಿ, ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ಜಾಗತಿಕ ಸಹಕಾರ ಬೆಳೆಸಲಾಗುವುದು. ನೈಸರ್ಗಿಕ ಅವಘಡಗಳ ಪರಿಹಾರ ಮತ್ತು ಮಾನವೀಯ ನೆರವಿಗಾಗಿ ಮೊದಲ ಸ್ಪಂದನೆ ಮಾಡಲಾಗುವುದು.

* ನಮ್ಮ ರಾಜತಾಂತ್ರಿಕ ಸಂಬಂಧದವನ್ನು ಮುಖ್ಯವಾಗಿ ಗಮನದಲ್ಲಿ ಇರಿಸಿಕೊಂಡು ಎಲ್ಲ ದೇಶಗಳ ಅಭಿವೃದ್ಧಿಗಾಗಿ ತಂತ್ರಜ್ಞಾನದ ವರ್ಗಾವಣೆ ಮತ್ತು ಜ್ಞಾನದ ವಿನಿಮಯ ಮಾಡಿಕೊಳ್ಳಲಾಗುವುದು. ಬಾಹ್ಯಾಕಾಶ ತಂತ್ರಜ್ಞಾನದ ಲಾಭ ಎಲ್ಲ ದೇಶಗಳಿಗೂ, ಮುಖ್ಯವಾಗಿ ಸಣ್ಣ ರಾಷ್ಟ್ರಗಳಿಗೂ ದೊರಕುವಂತೆ ಮಾಡಲು ಬಾಹ್ಯಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಸಹಕಾರ ಮತ್ತು ಉತ್ತಮ ಸಂಯೋಜನೆಗಾಗಿ 'ಅಂತಾರಾಷ್ಟ್ರೀಯ ಬಾಹ್ಯಾಕಾಶ ತಂತ್ರಜ್ಞಾನ ಮೈತ್ರಿ' ಮಾಡಿಕೊಳ್ಳಲಾಗುವುದು.
* ಭಾರತೀಯ ಸಮುದಾಯದೊಂದಿಗೆ ಸಂವಾದವನ್ನು ಹೆಚ್ಚಿಸಲು 'ಭಾರತ್ ಗೌರವ್' ಆಂದೋಲನವನ್ನು ಏಕಕಾಲದಲ್ಲಿ ಆರಂಭಿಸಲಾಗುವುದು.
* ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳು ಮತ್ತು ಸಂಘಟನೆಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಠಿಣ ಹೆಜ್ಜೆ ತೆಗೆದುಕೊಳ್ಳಲಾಗುವುದು. ಅಂತಹ ದೇಶಗಳು ಮತ್ತು ಸಂಘಟನೆಗಳನ್ನು ಪ್ರತ್ಯೇಕಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ 'ಅಂತಾರಾಷ್ಟ್ರೀಯ ಭಯೋತ್ಪಾದನೆ ವಿರುದ್ಧ ರಾಷ್ಟ್ರಗಳ ಸಮಿತಿ' ಎಂಬ ಸ್ವಯಂ ಪ್ರೇರಿತ ಬಹು ರಾಷ್ಟ್ರೀಯ ಒಕ್ಕೂಟ ರಚಿಸಲು ಪ್ರಯತ್ನಿಸಲಾಗುವುದು.
* ವಿಶ್ವಸಂಸ್ಥೆ, ಜಿ20, ಬ್ರಿಕ್ಸ್, ಎಸ್ಸಿಒ, ಕಾಮನ್ವೆಲ್ತ್ ಮುಂತಾದ ವೇದಿಕೆಗಳ ಮೂಲಕ ಜಾಗತಿಕ ವಿಪತ್ತುಗಳ ವಿರುದ್ಧ ಸಹಕಾರಯುತ ಹೋರಾಟ ನಡೆಸಲಾಗುವುದು. ರಷ್ಯಾ-ಭಾರತ-ಚೀನಾ ಮತ್ತು ಜಪಾನ್-ಅಮೆರಿಕ-ಭಾರತದಂತಹ ಪ್ರಮುಖ ಒಕ್ಕೂಟ ಬಾಂಧವ್ಯವನ್ನು ಬಲಗೊಳಿಸಲಾಗುವುದು. 'ನೆರೆಹೊರೆಯವರು ಮೊದಲು' ನೀತಿಯಲ್ಲಿ ಪ್ರಾದೇಶಿಕ ಸಂಯೋಜನೆ ಮತ್ತು ಆರ್ಥಿಕ ಸಹಕಾರವನ್ನು ವೃದ್ಧಿಸಲಾಗುವುದು.
* ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆದುಕೊಳ್ಳಲು ನಾವು ಬದ್ಧರಾಗಿದ್ದೇವೆ.
* ಜಾಗತಿಕವಾಗಿ ಭಾರತದ ತೊಡಗಿಕೊಳ್ಳುವಿಕೆ ಮತ್ತು ಚಟುವಟಿಕೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜತಾಂತ್ರಿಕ ಮತ್ತು ಅದರ ಅಧೀನ ಕೇಂದ್ರಗಳನ್ನು ಬಲಗೊಳಿಸಲಾಗುವುದು. ವಿದೇಶಾಂಗ ನೀತಿ ಪರಿಣತರ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗುವುದು. ವಿದೇಶಾಂಗ ನೀತಿಗಾಗಿಯೇ ಮೀಸಲಾದ ವಿಶ್ವವಿದ್ಯಾಲಯ ಆರಂಭಿಸಲಾಗುವುದು. ಶೈಕ್ಷಣಿಕ ಅಧ್ಯಯನ ಮತ್ತು ವಿದೇಶಾಂಗ ನೀತಿಗಳು ಸಂಶೋಧನೆಗೆ ಆದ್ಯತೆ ನೀಡಲಾಗುವುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications