ಬಿಜೆಪಿ ಚುನಾವಣಾ ಪ್ರಣಾಳಿಕೆ: ರಸ್ತೆ, ರೈಲು ಅಭಿವೃದ್ಧಿಗೆ ಭರಪೂರ ಘೋಷಣೆ
ನವದೆಹಲಿ, ಏಪ್ರಿಲ್ 8: ಬಿಜೆಪಿ ಸೋಮವಾರ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮೂಲಸೌಕರ್ಯಕ್ಕೆ ಸಾಕಷ್ಟು ಒತ್ತು ನೀಡಲಾಗಿದೆ. ಅದರಲ್ಲಿಯೂ ರಸ್ತೆ ಮತ್ತು ರೈಲ್ವೆ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಕೈಗೊಳ್ಳುವ ಭರವಸೆ ನೀಡಲಾಗಿದೆ.
ಹೊಸ ಹೆದ್ದಾರಿಗಳ ನಿರ್ಮಾಣ, ರಸ್ತೆಗಳ ಸಂಪರ್ಕ, ಬ್ರಾಡ್ಗೇಜ್ಗಳ ವಿಸ್ತರಣೆ, ನಿಲ್ದಾಣಗಳನ್ನು ಮತ್ತು ರೈಲ್ವೆ ಬೋಗಿಗಳನ್ನು ಮೇಲ್ದರ್ಜೆಗೇರಿಸುವುದು ಮುಂತಾದ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
* ಮುಂದಿನ ಐದು ವರ್ಷಗಳಲ್ಲಿ 60,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುವುದು.
* 2022ರ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳ ಉದ್ದವನ್ನು ದ್ವಿಗುಣಗೊಳಿಸಲಾಗುವುದು.

* ಭಾರತಮಾಲಾ ಯೋಜನೆಯ ಮೊದಲ ಹಂತವನ್ನು ಬೇಗನೆ ಪೂರ್ಣಗೊಳಿಸಲಾಗುವುದು. ಜತೆಗೆ ಮುಖ್ಯ ರಸ್ತೆಗಳಿಗೆ ಒಳ ರಸ್ತೆಗಳನ್ನು ಜೋಡಿಸಲು ರಾಜ್ಯ ರಸ್ತೆ ಸಂಪರ್ಕ ಜಾಲವನ್ನು ಅಭಿವೃದ್ಧಿಪಡಿಸುವ ಭಾರತ್ ಮಾಲಾ 2.0 ಯೋಜನೆಯನ್ನು ಆರಂಭಿಸಲಾಗುವುದು.
* ರಸ್ತೆ ನಿರ್ಮಾಣ, ನಿರ್ವಹಣೆ ಮತ್ತು ಕಾರ್ಯಾಚರಣೆಗಳಲ್ಲಿ ಹೊಸ ತಂತ್ರಜ್ಞಾನ ಮತ್ತು ವಿನ್ಯಾಸಗಳನ್ನು ತರಲಾಗುವುದು.
* ಶುದ್ಧ ಇಂಧನ ಮತ್ತು ಬ್ಯಾಟರಿ ಚಾಲಿತ ವಾಹನಗಳಿಗೆ ಉತ್ತೇಜನ ಕೊಡುವ ಇ-ಮೊಬಿಲಿಟಿಯನ್ನು ವಿಸ್ತರಿಸಲಾಗುವುದು.
ರೈಲ್ವೆ ಯೋಜನೆ
* 2022ರ ವೇಳೆಗೆ ಎಲ್ಲ ರೈಲ್ವೆ ಹಳಿಗಳನ್ನು ಬ್ರಾಡ್ಗೇಜ್ಗೆ ಪರಿವರ್ತಿಸಲಾಗುವುದು.
* 2022ರ ವೇಳೆಗೆ ಎಲ್ಲ ರೈಲ್ವೆ ಹಳಿಗಳನ್ನು ವಿದ್ಯುದೀಕರಿಸಲು ಸರ್ವ ಪ್ರಯತ್ನ ಮಾಡಲಾಗುವುದು.
* 2022ರ ವೇಳೆಗೆ ಸರಕು ಸಾಗಾಡ ಕಾರಿಡಾರ್ ಅನ್ನು ಪೂರ್ಣಗೊಳಿಸಲಾಗುವುದು.
* 2022ರ ಅವಧಿಗೆ ಎಲ್ಲ ಮುಖ್ಯ ರೈಲ್ವೆ ನಿಲ್ದಾಣಗಳಲ್ಲಿ ವೈಫೈ ಸೌಲಭ್ಯ ಸಿಗುವಂತೆ ಮಾಡಲಾಗುವುದು.
ಹೊಸ ವಿಮಾನ ನಿಲ್ದಾಣಗಳು
2014ರ ಅವಧಿಯಲ್ಲಿ ದೇಶದಲ್ಲಿ 65 ವಿಮಾನ ನಿಲ್ದಾಣಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಇಂದು 101 ವಿಮಾನ ನಿಲ್ದಾಣಗಳು ಕಾರ್ಯಾಚರಣೆ ನಡೆಸುತ್ತಿವೆ. ಮುಂದಿನ ಐದು ವರ್ಷಗಳಲ್ಲಿ ಕಾರ್ಯನಿರತ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು ದುಪ್ಪಟ್ಟು ಮಾಡಲಾಗುವುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications