Get Updates
Get notified of breaking news, exclusive insights, and must-see stories!

ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಗ್ಗೆ ಯಾರು, ಏನಂದರು?

Recommended Video

      Lok Sabha Elections 2019: ಬಿಜೆಪಿಯಿಂದ ಬಿಡುಗಡೆಯಾದ ಪ್ರಣಾಳಿಕೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ

      ನವದೆಹಲಿ, ಏಪ್ರಿಲ್ 08: ಬಿಜೆಪಿ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಡುಗಡೆಯಾದ ಪ್ರಣಾಳಿಕೆಯನ್ನು ಸಂಕಲ್ಪ ಪತ್ರ ಎಂದು ಕರೆದಿದೆ.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಕಾಂಗ್ರೆಸ್ ಇದನ್ನು ಜುಮ್ಲಾ ಪ್ರಣಾಳಿಕೆ ಎಂದು ಕರೆದಿದೆ. ದೇಶವನ್ನು ಅಭಿವೃದ್ಧಿಶಿಲ ರಾಷ್ಟ್ರದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಬದಲಿಸುವುದೇ ನಮ್ಮ ಮೂಲ ಉದ್ದೇಶ ಎಂದು ಪ್ರಣಾಳಿಕೆ ಬಿಡುಗಡೆಯ ನಂತರ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

      48 ಪುಟಗಳ ಪ್ರಣಾಳಿಕೆಯಲ್ಲಿ ಯಾವುದೇ ಹೊಸ ಘೋಷಣೆ ಇಲ್ಲವಾದರೂ, ಹಳೆಯ ಯೋಜನೆಗಳಲ್ಲೇ ಕೆಲವು ಸುಧಾರಣೆಗಳನ್ನು ಬಿಜೆಪಿ ಮಾಡಿದಂತಿದೆ. ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಿದ್ಧವಾದ ಈ ಪ್ರಣಾಳಿಕೆಯನ್ನು ಪ್ರಧಾನಿ ಮೋದಿ, ಶಾಸನ ಪತ್ರ, ಸಮೃದ್ಧಿಯ ಪತ್ರ, ರಾಷ್ಟ್ರದ ಭದ್ರತೆಯ ಪತ್ರ ಎಂದಿದ್ದಾರೆ. ಈ ಕುರಿತು ನಾಯಕರ ಪ್ರತಿಕ್ರಿಯೆ ಹೇಗಿತ್ತು, ನೋಡಿ...

      Array

      ರಾಜನಾಥ್ ಸಿಂಗ್

      ಭಯೋತ್ಪಾದನೆಯ ಬಗ್ಗೆ ನಾವು ಶೂನ್ಯ ಸಂವೇದನೆಯನ್ನು ಹೊಂದಿದ್ದೇವೆ. ಭಾರತ ಭದ್ರವಾಗಿದ್ದರೆ ಮತ್ತಷ್ಟು ಸಾಧನೆ ಸಾಧ್ಯ. ನಮಗೆ ಎಂದಿಗೂ ದೇಶ ಮೊದಲು- ರಾಜನಾಥ್ ಸಿಂಗ್, ಗೃಹಸಚಿವ, ಬಿಜೆಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ

      Array

      ಸಂಜಯ್ ಝಾ

      ಎಂಥ ವಿಪರ್ಯಾಸ! ಮೂಲಸೌಕರ್ಯಕ್ಕೆ 100 ಕೋಟಿ ರೂ!ಇದು ವೈಬ್ರಂಟ್ ಗುಜರಾತ್ 2.0. ನಾವು ಜೋಕರ್ ಗಳ ಕೈಯಲ್ಲಿ ಸಿಕ್ಕಿ ಒದ್ದಾಡುತ್ತಿದ್ದೇವೆ.

      ಶೋಭಾ ಕರಂದ್ಲಾಜೆ

      ಕರಾವಳಿ ಕರ್ನಾಟಕದ ಮೀನುಗಾರರಿಗೆ ಈ ಪ್ರಣಾಳಿಕೆ ಭರವಸೆ ನೀಡಿದೆ. ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಕರಾವಳಿಯ ಮೀನುಗಾರರಿಗೆ 10,000 ಕೋಟಿ ರೂ.ವರೆಗೆ ಅನುದಾನ ನೀಡಲಿದೆ- ಶೋಭಾ ಕರಂದ್ಲಾಜೆ, ಉಡುಪಿ-ಚಿಕ್ಕಮಗಳೂರು ಸಂಸದೆ.

      ಕರ್ನಾಟಕ ಕಾಂಗ್ರೆಸ್

      ಬಿಜೆಪಿಯ ಇಂದಿನ ಪ್ರಣಾಳಿಕೆಯನ್ನು ಕೇಳಿಸಿಕೊಳ್ಳುತ್ತಿರುವುದು ಬಿಜೆಪಿ ಜನರಿಗೆ ಯಾವ ಹೊಸ ಯೋಜನೆ ಘೋಷಿಸುತ್ತಾರೆ ಎಂಬ ನಿರೀಕ್ಷಿಯಿಂದ ಅಲ್ಲ.

      ಬದಲಿಗೆ ಅವರು ಎಷ್ಟು ಸುಳ್ಳು ಹೇಳುತ್ತಾರೆ ಎಂದು ತಿಳಿದುಕೊಳ್ಳಲು ಇವರ ಮಾತನ್ನು ಕೇಳಿಸಿಕೊಳ್ಳುತ್ತಿದ್ದಾರೆ ಅಷ್ಟೇ- ಕರ್ನಾಟಕ ಕಾಂಗ್ರೆಸ್

      ತೇಜಸ್ವಿ ಸೂರ್ಯ

      ನಾವು ಮುಂದಿನ ಐದು ವರ್ಷಗಳಲ್ಲಿ ಮೆಟ್ರೋ ಸಂಪರ್ಕವನ್ನು ಹೊಂದಿದ ಐವತ್ತು ಸಿಟಿಗಳನ್ನು ಹೊಂದಿರುತ್ತೇವೆ.ಗ್ಯಾಸ್ ಗ್ರಿಡ್, ವಾಟರ್ ಗ್ರಿಡ್, ಐ ವೇಸ್ ಮತ್ತು ಪ್ರಾದೇಶಿಕ ಏರ್ ಪೋರ್ಟ್ ಗಳನ್ನು ನಿರ್ಮಿಸುತ್ತೇವೆ. 2024 ರ ಹೊತ್ತಿಗೆ ಪ್ರತಿ ಮನೆಗೂ ನೀರು ನೀಡುವ ನಳ್ ಸೇ ಜಲ್ ಯೋಜನೆ ಜಾರಿಗೆ ತರುತ್ತೇವೆ. ಬಿಜೆಪಿ ತನ್ನ ಸಂಕಲ್ಪ ಪತ್ರದ ಮೂಲಕ ಹೊಸ ಭಾರತವನ್ನು ಕಟ್ಟಲು ಐತಿಹಾಸಿಕ ಪ್ರಯತ್ನ ಮಾಡಿದೆ- ತೇಜಸ್ವಿ ಸೂರ್ಯ

      ಸಿದ್ದರಾಮಯ್ಯ

      ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ವೈಫಲ್ಯವನ್ನು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಹೂತಿಟ್ಟು, ಅಲ್ಲಿ ನೆಮ್ಮದಿಯಾಗಿದ್ದ ರಾಮನನ್ನು ಕರೆದುಕೊಂಡು ಚುನಾವಣಾ ಪ್ರಚಾರಕ್ಕೆ ಹೊರಟಿದ್ದಾರೆ.

      ನರೇಂದ್ರ ಮೋದಿ ಅವರೇ, ಇನ್ನೆಷ್ಟು ಕಾಲ ಜನರ ಭಾವನೆಗಳನ್ನೇ ಬಂಡವಾಳ ಮಾಡಿಕೊಂಡು ಮೋಸ ಮಾಡುತ್ತೀರ? 5 ವರ್ಷದಲ್ಲಿ ಒಮ್ಮೆಯಾದರೂ ಮಂದಿರ ನೆನಪಾಗಿರಲಿಲ್ಲವೇ?- ಸಿದ್ದರಾಮಯ್ಯ, ಕರ್ನಾಟಕದ ಮಾಜಿ ಮುಖ್ಯಮಂತ್ರಿ

      ಸುರೇಶ್ ಪ್ರಭು

      ಆಧುನಿಕ ತಂತ್ರಜ್ಞಾನದ ಮೂಲಕ ಸೇನೆಯ ಬಲವನ್ನು ಹೆಚ್ಚಿಸುವುದರಿಂದ ರಾಷ್ಟ್ರದ ಭದ್ರತೆಯೂ ಹೆಚ್ಚಾಗಲಿದೆಯಲ್ಲದೆ, ಭಯೋತ್ಪಾದನೆಯ ನಿಯಂತ್ರಣಕ್ಕೆ ಬರಲಿದೆ. ಈಶಾನ್ಯ ರಾಜ್ಯದಿಂದ ಅಕ್ರಮವಾಗಿ ನುಸುಳುವವರನ್ನೂ ತಡೆಯಲು ಪರಿಣಾಮಕಾರಿ ಹಾದಿ ಹುಡಿದ್ದೇವೆ- ಸುರೇಶ್ ಪ್ರಭು, ಬಿಜೆಪಿ ಮುಖಂಡ

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+