ಒಟ್ಟು ಆಸ್ತಿ 1107 ಕೋಟಿ ರೂ, ಪಡೆದ ವೋಟು 1556!
ಪಾಟ್ನಾ, ಮೇ 25: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ರಮೇಶ್ ಕುಮಾರ್ ಶರ್ಮಾ ಅವರು ಬಿಹಾರದ ಪಾಟಲಿಪುತ್ರ ಕ್ಷೇತ್ರದಿಂದ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ!
ಪಕ್ಷೇತರ ಅಭ್ಯರ್ಥಿಯಾಗಿದ್ದ ರಮೇಶ್ ಕುಮಾರ್ ಶರ್ಮಾ ಅವರು ಪಡೆ ಒಟ್ಟು ಮತಗಳು ಕೇವಲ 1556! ಆದರೆ ಅವರ ಆಸ್ತಿ ಮೌಲ್ಯ ಎಷ್ಟು ಗೊತ್ತಾ? ಬರೋಬ್ಬರಿ 1107 ಕೋಟಿ ರೂ!
ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಅವರು ನೀಡಿದ್ದ ಅಫಿಡವಿಟ್ ನಲ್ಲಿ ತಮ್ಮ ಆಸ್ತಿ ಮೌಲ್ಯವನ್ನು ಅವರು 1107 ಕೋಟಿ ರೂ. ಎಂದು ತೋರಿಸುವ ಮೂಲಕ ಈ ಬಾರಿಯ ಲೋಕಸಭೆ ಚುನಾವಣೆಯ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರು.
ಹತ್ತು ಶ್ರೀಮಂತ ಅಭ್ಯರ್ಥಿಗಳ ಈ ಪಟ್ಟಿಯಲ್ಲಿ ಆಂಧ್ರಪ್ರದೇಶದ ಮೂವರು, ಮಧ್ಯಪ್ರದೇಶದ ಇಬ್ಬರು, ಬಿಹಾರ, ತಮಿಳುನಾಡು, ಕರ್ನಾಟಕ, ತೆಲಂಗಾಣ ರಾಜ್ಯಗಳಿಂದ ತಲಾ ಒಬ್ಬರು ಇದ್ದರು.

ಠೇವಣಿಯನ್ನೂ ಕಳೆದುಕೊಂಡರು!
ಕೇವಲ 1556 ಮತಗಳನ್ನು ಪಡೆಯುವ ಮೂಲಕ ಠೇವಣಿಯನ್ನೂ ಉಳಿಸಿಕೊಳ್ಳಲಾಗದ ಸ್ಥಿತಿಗೆ ಶರ್ಮಾ ತಲುಪಿದರು. ಹಣವೊಂದೇ ಚುನಾವಣೆ ಎದುರಿಸುವ ಮಾನದಂಡವಲ್ಲ ಎಂಬುದನ್ನು ಜನರು ಈ ಮೂಲಕ ತೋರಿಸಿಕೊಟ್ಟರು.

ಎರಡನೇ ಸ್ಥಾನದಲ್ಲಿ ಕೊಂಡ ವಿಶ್ವೇಶ್ವರ ರೆಡ್ಡಿ
ತೆಲಂಗಾಣದ ಚೆವೆಲ್ಲಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಕೊಂಡ ವಿಶ್ವೇಶ್ವರ ರೆಡ್ಡಿ 895 ಕೋಟಿ ರೂ. ಒಡೆಯ. ಆದರೆ ಅವರನ್ನು ಟಿಆರ್ ಎಸ್ ನ ಜಿ ರಂಜಿತ್ ರೆಡ್ಡಿ ಅವರು 14,317 ಮತಗಳ ಅಂತರದಿಂದ ಸೋಲಿಸಿದರು.

ನಕುಲ್ ನಾಥ್
ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರು ಮೂರನೇ ಶ್ರೀಮಂತ ಅಭ್ಯರ್ಥಿ. ಅವರ ಒಟ್ಟು ಆಸ್ತಿ 660 ಕೋಟಿ ರೂ. ಅವರು ಮಧ್ಯಪ್ರದೇಶದ ಛಿಂದ್ವಾರಾ ಕ್ಷೇತ್ರದಿಂದ 37,536 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪಟ್ಟಿಯಲ್ಲಿರುವ ಇತರರು
ತಮಿಳುನಾಡಿನಕನ್ಯಾಕುಮಾರಿಯ ಕಾಂಗ್ರೆಸ್ ಅಭ್ಯರ್ಥಿ ವಸಂತ ಕುಮಾರ್ ಅವರ ಒಟ್ತು ಆಸ್ತಿ ಮೌಲ್ಯ 417 ಕೋಟಿ ರೂ. ಅವರು 2,59,933 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದರು. ಮಧ್ಯಪ್ರದೇಶದ ಗುನಾ ಕ್ಷೇತ್ರದಿಂದ ಸೋಲನುಭವಿಸಿದ ಕಾಂಗ್ರೆಸ್ ನ ಜ್ಯೋತಿರಾದಿತ್ಯ ಸಿಂದಿಯಾ ಒಟ್ಟು ಆಸ್ತಿ ಮೌಲ್ಯ 475 ಕೋಟಿ ರೂ. ಅವರು ದೇಶದ ಐದನೇ ಶ್ರೀಮಂತ ಅಭ್ಯರ್ಥಿ.
ಆಂಧ್ರಪ್ರದೇಶದ ವಿಜಯವಾಡದಿಂದ ಸ್ಪರ್ಧಿಸಿದ್ದ ವೈಎಸ್ ಆರ್ ಕಾಂಗ್ರೆಸ್ ನ ಪ್ರಸಾದ್ ವೀರ ಪೊಟ್ಲುರಿ 347 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಆದರೆ ಅವರು ಟಿಡಿಪಿ ಅಭ್ಯರ್ಥಿ ವಿರುದ್ಧ 8,726 ಮತಗಳ ಅಂತರದಿಂದ ಸೋಲನುಭವಿಸಿದರು. ಬಿಹಾರದ ಪುರ್ನಿಯಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ್ ಸಿಂಗ್ 2,63,461 ಮತಗಳಿಂದ ಸೋಲನುಭವಿಸದರು. ಅವರ ಒಟ್ಟು ಆಸ್ತಿ ಮೌಲ್ಯ, 341 ಕೋಟಿ ರೂ.

ಎಂಟನೇ ಸ್ಥಾನದಲ್ಲಿ ಡಿಕೆ ಸುರೇಶ್
ಬೆಮಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ದೇಶದ ಎಂಟನೇ ಶ್ರೀಮಂತ ಅಭ್ಯರ್ಥಿ. 2,06,870 ಮತಗಳ ಅಂತರದಿಂದ ಬಿಜೆಪಿಯ ಅಶ್ವತ್ಥನಾರಾಯಣ ಅವರನ್ನು ಸೋಲಿಸಿದ ಅವರ ಒಟ್ತು ಆಸ್ತಿ ಮೌಲ್ಯ 338 ಕೋಟಿ ರೂ. ಆಂಧ್ರಪ್ರದೇಶದ ನಸಾಪುರಂ ಕ್ಷೇತ್ರದಿಂದ 31,909 ಮತಗಳಿಂದ ಗೆದ್ದ ಕಾನುಮುರು ರಘುರಾಮ್ ಕೃಷ್ಣ ರಾಜ ಅವರು ಒಂಭತ್ತನೇ ಶ್ರೀಮಂತ ಅಭ್ಯರ್ಥಿ. ಅವರ ಒಟ್ಟು ಆಸ್ತಿ ಮೌಲ್ಯ 325.ಗುಂಟೂರು ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಗಲ್ಲಾ ಜಯದೇವ್ 4,205 ಮತಗಳಿಂದ ಗೆಲುವು ಕಂಡರು. ಅವರ ಒಟ್ಟು ಆಸ್ತಿ ಮೌಲ್ಯ 305 ಕೋಟಿ ರೂ. ಅವರು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications