ನ್ಯೂಸ್ ಎಕ್ಸ್ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗಿಲ್ಲ ನಿರೀಕ್ಷಿತ ಗೆಲುವು
Recommended Video
ಬೆಂಗಳೂರು, ಮೇ 19: ನ್ಯೂಸ್ ಎಕ್ಸ್ ಮತ್ತು ನೇತಾ ಒಟ್ಟಾಗಿ ನಡೆಸಿರುವ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗಲಿದೆ, ಕಾಂಗ್ರೆಸ್ ಜೆಡಿಎಸ್ ಒಟ್ಟಾಗಿ ಕೇವಲ 12 ಸ್ಥಾನಗಳಲ್ಲಿ ಗೆಲ್ಲಲಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಯು 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಕಾಂಗ್ರೆಸ್ 10 ರಲ್ಲಿ ಗೆದ್ದರೆ ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಪಕ್ಷೇತರರು ಒಂದು ಸ್ಥಾನದಲ್ಲಿ ಗೆಲುವು ಸಾಧಿಸಲಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಆದರೆ ಈ ಬಾರಿ 15 ಸ್ಥಾನಗಳಲ್ಲಿ ಅಷ್ಟೆ ಗೆಲುವು ಸಾಧಿಸಲಿದೆ ಎಂದು ನ್ಯೂಸ್ ಎಕ್ಸ್ ಮತ್ತು ನೇತಾ ಸಮೀಕ್ಷೆ ಹೆಳುತ್ತಿದೆ.

ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿಕೊಂಡಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನವನ್ನು ಸ್ವಲ್ಪ ಉತ್ತಮಪಡಿಸಿಕೊಂಡು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಜೆಡಿಎಸ್ ಪಕ್ಷಕ್ಕೆ ಆಘಾತಕಾರಿ ಫಲಿತಾಂಶ ದೊರೆಯಲಿದ್ದು ಅದು ಕೇವಲ ಎರಡು ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಸಮೀಕ್ಷೆ.

ಜೆಡಿಎಸ್ಗೆ ಆಘಾತಕಾರಿ ಫಲಿತಾಂಶ
ಕಳೆದ ಲೋಕಸಭೆ ಚುನಾವಣೆಗೆ ಹೋಲಿಸಿಕೊಂಡಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸ್ಥಾನವನ್ನು ಸ್ವಲ್ಪ ಉತ್ತಮಪಡಿಸಿಕೊಂಡು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಜೆಡಿಎಸ್ ಪಕ್ಷಕ್ಕೆ ಆಘಾತಕಾರಿ ಫಲಿತಾಂಶ ದೊರೆಯಲಿದ್ದು ಅದು ಕೇವಲ ಎರಡು ಸ್ಥಾನಗಳಲ್ಲಿ ಮಾತ್ರವೇ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಸಮೀಕ್ಷೆ.

ನಿಖಿಲ್ ಕುಮಾರಸ್ವಾಮಿಗೆ ಸೋಲು?
ಜೆಡಿಎಸ್ ನ ದೇವೇಗೌಡ, ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಅವರುಗಳಲ್ಲಿ ಇಬ್ಬರು ಮಾತ್ರವೇ ಗೆಲವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳುತ್ತಿದೆ, ಒಂದು ಕ್ಷೇತ್ರ ಪಕ್ಷೇತರರ ಪಾಲಾಗಲಿದೆ ಎಂದು ಹೇಳಿರುವುದು ನೋಡಿದರೆ ನಿಖಿಲ್ ಕುಮಾರಸ್ವಾಮಿ ಸೋಲಲಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಎನ್ಡಿಎಗೆ ಇಲ್ಲ ಪೂರ್ಣ ಬಹುಮತ
ನ್ಯೂಸ್ ಎಕ್ಸ್, ನೇತಾ ಸಮೀಕ್ಷೆ ಪ್ರಕಾರ ಎನ್ಡಿಎಗೂ ಪೂರ್ಣ ಬಹುಮತ ಸಿಗುತ್ತಿಲ್ಲ, ಎನ್ಡಿಎಗೆ 242 ಸೀಟುಗಳು ಮಾತ್ರವೇ ಸಿಗುತ್ತಿದೆ. ಯುಪಿಎಗೆ 162, ಇತರೆ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ.

ಕಳೆದ ಬಾರಿಗಿಂತ ಕಡಿಮೆ ಸ್ಥಾನ
ಇತರ ಬಹುತೇಕ ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ದೊರೆಯುತ್ತಿದೆ, ನ್ಯೂಸ್ ಎಕ್ಸ್, ನೇತಾ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗಿಂತಲೂ ಹೆಚ್ಚು ಸ್ಥಾನ ನೀಡಿದೆಯಾದರೂ ಕಳೆದ ಲೋಕಸಭೆ ಚುನಾವಣೆಗಿಂತಲೂ ಕಡಿಮೆ ಸ್ಥಾನ ಗಳಿಸಲಿದೆ ಎನ್ನಲಾಗುತ್ತಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications