4ನೇ ಹಂತದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿ ಆಸ್ತಿ ಮೌಲ್ಯ ಕೇವಲ 500 ರು
ನವದೆಹಲಿ, ಏಪ್ರಿಲ್ 25: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಚುನಾವಣೆ ಏಪ್ರಿಲ್ 29ರಂದು ನಡೆಯಲಿದೆ. 4ನೇ ಹಂತದಲ್ಲಿ 9 ರಾಜ್ಯಗಳ 71 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.ಈ ಹಂತದಲ್ಲಿ ಅತ್ಯಂತ ಕಡಿಮೆ ಆಸ್ತಿ ಘೋಷಿಸಿಕೊಂಡ ಅಭ್ಯರ್ಥಿಗಳ ಪೈಕಿ ಪ್ರಿನ್ಸ್ ಕುಮಾರ್ ಕೂಡಾ ಒಬ್ಬರು.
4ನೇ ಹಂತದಲ್ಲಿರುವ ಎಲ್ಲಾ ಅಭ್ಯರ್ಥಿಗಳ ಆಸ್ತಿ ಸರಾಸರಿ 4.53 ಕೋಟಿ ರು ನಷ್ಟಿದೆ ಎಂದು ವರದಿ ಹೇಳಿದೆ. ಶೂನ್ಯ ಸಂಪಾದನೆ ಉಳ್ಳ ಮೂವರು ಪಕ್ಷೇತರರ ಅಭ್ಯರ್ಥಿಗಳನ್ನು ಹೊರತುಪಡಿಸಿದರೆ, 500 ರು ಆಸ್ತಿ ಘೋಷಿಸಿಕೊಂಡಿರುವ ರಾಜಸ್ಥಾನದ ಪ್ರಿನ್ಸ್ ಕುಮಾರ್ ಅವರು ಅತ್ಯಂತ ಕಡಿಮೆ ಆಸ್ತಿವಂತ ಎಂದು ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾರ್ಮ್ಸ್ ವರದಿ ಹೇಳಿದೆ.
ರಾಜಸ್ಥಾನದ ಝಲವಾರ್ ಭವನ್ ಕ್ಷೇತ್ರದಿಂದ ಪ್ರಿನ್ಸ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಅತ್ಯಂತ ಕಡಿಮೆ ಆಸ್ತಿ ಘೋಷಿಸಿಕೊಂಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ರಾಜಸ್ಥಾನದ ಚಿತ್ತೋರ್ ಗಢದಿಂದ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಷಂಶುದ್ದೀನ್ ಇದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಉತ್ತರ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಪಾನ್ ಸೊಪಾನ್ ಥೊಕೆ ಅವರಿದ್ದು, ಅವರು ಚರಾಸ್ತಿ ಮೌಲ್ಯ 1,100 ರು ಎಂದು ಘೋಷಿಸಿಕೊಂಡಿದ್ದು, ಚರಾಸ್ತಿ ಇಲ್ಲ ಎಂದು ಘೋಷಿಸಿದ್ದಾರೆ.

ಇನ್ನಿತರ ಆಸಕ್ತಿಗಳ ಸಂಗತಿಗಳು:
* ಒಟ್ಟು 1 ಕೋಟಿ ರು ಆಸ್ತಿ ಹೊಂದಿದವರು: 303(33%)
ಪಕ್ಷವಾರು ವಿವರ:
* ಕಾಂಗ್ರೆಸ್ಸಿನ 57 ಅಭ್ಯರ್ಥಿಗಳ ಪೈಕಿ 50(88%)
* ಬಿಜೆಪಿಯ 57 ಅಭ್ಯರ್ಥಿಗಳ ಪೈಕಿ (88%)
* ಬಿಎಸ್ಪಿಯ 54 ಅಭ್ಯರ್ಥಿಗಳ ಪೈಕಿ 20(37%)
* ಎಸ್ಎಚ್ಎಸ್ ನ 21 ಅಭ್ಯರ್ಥಿಗಳ ಪೈಕಿ 13(62%)
* ಎಸ್ಪಿಯ 10 ಅಭ್ಯರ್ಥಿಗಳ ಪೈಕಿ 8(80%)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications