ಫಲಿತಾಂಶಕ್ಕೆ ಒಂದೇ ದಿನ ಬಾಕಿ, ವಿಪಕ್ಷಗಳಿಂದ ಕೊನೆಯ ಪ್ರಯತ್ನ!
ಹೈದರಾಬಾದ್, ಮೇ 22: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದೇ ಒಂದು ದಿನ ಬಾಕಿ ಇರುವಾಗ ವಿಪಕ್ಷಗಳಿಂದ ಕೊನೆಯ ಪ್ರಯತ್ನ ಎಂಬಂತೆ ಬಿರುಸಿನ ಚಟುವಟಿಕೆ ಆರಂಭವಾಗಿದೆ.
ಎನ್ ಸಿಪಿ ನಾಯಕ ಶರದ್ ಪವಾರ್ ಅವರು ಅಖಾಡಕ್ಕಿಳಿದಿದ್ದು, ವಿರೋಧ ಪಕ್ಷಗಳೆಲ್ಲವನ್ನೂ ಒಂದೆಡೆ ತರುವ ಪ್ರಯತ್ನದಲ್ಲಿದ್ದಾರೆ. ಮುಖ್ಯವಾಗಿ ತೆಲಂಗಾಣ ರಾಷ್ಟ್ರ ಸಮಿತಿಯ ಚಂದ್ರಶೇಖರ್ ರಾವ್ ಮತ್ತು ವೈಎಸ್ ಆರ್ ಕಾಂಗ್ರೆಸ್ ನ ಜಗನ್ಮೋಹನ್ ರೆಡ್ಡಿ ಅವರನ್ನು ಸೆಳೆಯುವುದು ಮಹಾಘಟಬಂಧನಕ್ಕೆ ಭಾರೀ ದೊಡ್ಡ ಸವಾಲಾಗಿದೆ.
ಚುನಾವಣೋತ್ತರ ಸಮೀಕ್ಷೆ ಫಲಿತಾಂಶವು ಎನ್ ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದಿದ್ದು ವಿಪಕ್ಷಗಳೆಲ್ಲವನ್ನೂ ಒಂದಾಗಿಸಿದೆ. ಕಾಂಗ್ರೆಸ್ ಜೊತೆಗೆ ಕೈಜೋಡಿಸುವುದಕ್ಕೆ ಒಲ್ಲೆ ಎಂದಿದ್ದ ಬಿಎಸ್ಪಿ ನಾಯಕಿ ಮಾಯಾವತಿ, ಟಿಎಂಸಿ ಮಮಮತಾ ಬ್ಯಾನರ್ಜಿ ಮುಂತಾದವರೂ ಇದೀಗ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಬೆಂಬಲ ನೀಡುವುದು ಅನಿವಾರ್ಯವಾಗಿದೆ.

ಆದರೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ವೈಎಸ್ ಆರ್ ಕಾಂಗ್ರೆಸ್ ಮುಖಂಡ ಜಗನ್ಮೋಹನ್ ರೆಡ್ಡಿ ಅವರು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶದ ನಂತರ ತಟಸ್ಥವಾಗಿದ್ದಾರೆ. ತೃತೀಯ ರಂಗದ ಓಡಾಟವನ್ನೂ ಕೆಸಿಆರ್ ಸದ್ಯಕ್ಕೆ ನಿಲ್ಲಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯಿಂದಾಗಿ ಕೊನೆಯ ಕ್ಷಣದಲ್ಲಿ ಕೆಸಿಆರ್ ಮತ್ತು ವೈಎಸ್ ಆರ್ ಕಾಂಗ್ರೆಸ್ ತಮ್ಮ ಬೆಂಬಲವನ್ನು ಎನ್ ಡಿಎ ಗೆ ಘೋಷಿಸುವ ಸಾಧ್ಯತೆಯೂ ಇರುವುದರಿಂದ ಮಹಾಘಟಬಂಧನದ ನಾಯಕರು ಆತಂಕಗೊಂಡಿದ್ದಾರೆ.
ಆದರೆ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆಯೇ ಎನ್ ಡಿಎ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ವಿಪಕ್ಷಗಳ ಯಾವ ಸ್ಟ್ರಾಟಜಿಯೂ ಫಲ ನೀಡುವುದಿಲ್ಲ. ಆದರೆ ಎನ್ ಡಿಎ ಅಲ್ಪ ಮತಕ್ಕೇನಾದರೂ ಕುಸಿದರೆ ಆಗ ಮಹಾಘಟಬಂಧನಕ್ಕೆ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರೂ ಬೆಂಬಲ ನೀಡಿದರೆ ಅಚ್ಚರಿಯೇನಿಲ್ಲ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications