Lunar Eclipse 2021 : ಮೇ 26ರಂದು ಒಂದೇ ದಿನ ಚಂದ್ರಗ್ರಹಣ, ಬ್ಲಡ್ ಮೂನ್, ಸೂಪರ್ ಮೂನ್, ಎಲ್ಲೆಲ್ಲಿ ಗೋಚರ?
ನವದೆಹಲಿ, ಮೇ 25: ಈ ವರ್ಷದ ಮೊದಲ ಚಂದ್ರಗ್ರಹಣ ಮೇ 26ಕ್ಕೆ ಘಟಿಸಲಿದ್ದು, ಅದೇ ದಿನ ಸೂಪರ್ ಮೂನ್, ಬ್ಲಡ್ ಮೂನ್ ಎರಡೂ ವಿದ್ಯಾಮಾನವೂ ಗೋಚರವಾಗಲಿದೆ.
ಭಾರತದ ಈಶಾನ್ಯ ಭಾಗಗಳು (ಸಿಕ್ಕಿಂ ಹೊರತುಪಡಿಸಿ), ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಒಡಿಶಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 26 ರಂದು ಭಾಗಶಃ ಚಂದ್ರ ಗ್ರಹಣ ಗೋಚರಿಸುತ್ತದೆ ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.
ದಕ್ಷಿಣ ಅಮೆರಿಕಾ, ಉತ್ತರ ಅಮೆರಿಕಾ, ಏಷ್ಯಾ, ಆಸ್ಟ್ರೇಲಿಯಾ, ಅಂಟಾರ್ಟಿಕಾ, ಪೆಸಿಫಿಕ್ ಮಹಾಸಾಗರ ಮತ್ತು ಹಿಂದೂ ಮಹಾಸಾಗರವನ್ನು ಒಳಗೊಂಡ ಪ್ರದೇಶದಲ್ಲಿ ಇದು ಗೋಚರಿಸುತ್ತದೆ.
ಹುಣ್ಣಿಮೆಯ ದಿನದಂದು ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬಂದಾಗ ಮತ್ತು ಎಲ್ಲಾ ಮೂರು ವಸ್ತುಗಳನ್ನು ಜೋಡಿಸಿದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಇಡೀ ಚಂದ್ರನು ಭೂಮಿಯ ನೆರಳಿನಲ್ಲಿ ಬಂದಾಗ ಮತ್ತು ಚಂದ್ರನ ಒಂದು ಭಾಗ ಮಾತ್ರ ಭೂಮಿಯ ನೆರಳಿನಲ್ಲಿ ಬಂದಾಗ ಭಾಗಶಃ ಚಂದ್ರ ಗ್ರಹಣ ಸಂಭವಿಸುತ್ತದೆ.
ಸೂಪರ್ ಮೂನ್ ಈ ವರ್ಷದ ಅತಿ ಸಮೀಪದ ಸೂಪರ್ ಮೂನ್. ಈ ದಿನ ಚಂದ್ರ ಭೂಮಿಗೆ ಸುಮಾರು 3,57,462 ಕಿ.ಮೀ. ಹತ್ತಿರ ಬರಲಿದ್ದಾನೆ. (ಸರಾಸರಿ ದೂರ 3,84,000 ಕಿ.ಮೀ.).

ಸೂಪರ್ ಮೂನ್ ಕುರಿತು ಮಾಹಿತಿ
ಭೂಮಿಯ ಸನಿಹಕ್ಕೆ ಚಂದ್ರ ಬಂದಿ ಎಂದಿಗಿಂತ ದೊಡ್ಡದಾಗಿ ಕಾಣುವುದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಇದು ಹುಣ್ಣಿಮೆಯ ದಿನ ಘಟಿಸುತ್ತದೆ. ಭೂಮಿಯ ನೆರಳು ಹುಣ್ಣಿಮೆಯ ದಿನ ಚಂದ್ರನ ಏಲೆ ಬಿದ್ದಾಗ ಚಂದ್ರ ಮರೆಯಾಗುತ್ತಾನೆ, ಇದನ್ನು ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ಭೂಮಿಯ ಸಂಪೂರ್ಣ ನೆರಳಿನಿಂದ ಚಂದ್ರ ಆವೃತ್ತವಾಗಿ ಕೆಂಪುಬಣ್ಣ ಗೋಚರವಾದರೆ ಅದನ್ನು ಬ್ಲಡ್ ಮೂನ್ ಎಂದು ಕರೆಯುತ್ತಾರೆ.

ಗ್ರಹಣ ಕಾಲ
ಗ್ರಹಣದ ಭಾಗಶಃ ಹಂತವು ಮಧ್ಯಾಹ್ನ 3.15 ರ ಸುಮಾರಿಗೆ ಪ್ರಾರಂಭವಾಗುತ್ತದೆ ಮತ್ತು 6.23ರವರೆಗೆ ಇರಲಿದೆ ಎಂದು ಸಚಿವಾಲಯ ತಿಳಿಸಿದೆ. ಸಂಜೆ 5.38ರಿಂದ ಪೋರ್ಟ್ ಬ್ಲೇರ್ನಿಂದ 45 ನಿಮಿಷಗಳ ಕಾಲ ಗ್ರಹಣ ವೀಕ್ಷಿಸಬಹುದು, ಸಂಜೆ 6.21ರಿಂದ ಪುರಿ ಮತ್ತು ಮಾಲ್ಡಾದಿಂದ ನೋಡಬಹುದು, ಆದರೆ ಎರಡು ನಿಮಿಷ ಮಾತ್ರ ಕಾಣಿಸುತ್ತದೆ. ಸಂಪೂರ್ಣ ಚಂದ್ರಗ್ರಹಣ ಸಂಜೆ 4.39ಕ್ಕೆ ಪ್ರಾರಂಭವಾಗಿ ಸಂಜೆ 4.58ಕ್ಕೆ ಕೊನೆಗೊಳ್ಳಲಿದೆ.0

ಎಲ್ಲೆಲ್ಲಿ ಚಂದ್ರಗ್ರಹಣ ಗೋಚರ?
ಫೆಸಿಫಿಕ್ ಸಾಗರದ ಮಧ್ಯಭಾಗ, ಆಸ್ಟ್ರೇಲಿಯಾ, ಏಷ್ಯಾದ ಪೂರ್ವ ಕರಾವಳಿ, ಅಮೆರಿಕದ ಪಶ್ಚಿಮ ಕರಾವಳಿ, ಈಶಾನ್ಯ ಭಾರತದಲ್ಲಿ ಚಂದ್ರಗ್ರಹಣ, ಸೂಪರ್ ಮೂನ್, ರೆಡ್ ಬ್ಲಡ್ ಮೂನ್ ಕಾಣಿಸಲಿದೆ.
Recommended Video

ಮುಂದಿನ ಚಂದ್ರಗ್ರಹಣ
ಮುಂದಿನ ಚಂದ್ರಗ್ರಹಣವು ನವೆಂಬರ್ 19 ರಂದು ಭಾರತದಿಂದ ಗೋಚರಿಸುತ್ತದೆ ಮತ್ತು ಇದು ಭಾಗಶಃ ಚಂದ್ರ ಗ್ರಹಣವಾಗಿರುತ್ತದೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನ ಈಶಾನ್ಯ ಭಾಗಗಳಿಂದ ಚಂದ್ರೋದಯದ ನಂತರ ಭಾಗಶಃ ಹಂತದ ಅಂತ್ಯವು ಬಹಳ ಕಡಿಮೆ ಅವಧಿಗೆ ಗೋಚರಿಸುತ್ತದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications