Maha Kumbh Mela 2025: 27 ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಮಹಾ ಕುಂಭಮೇಳದಲ್ಲಿ ಪತ್ತೆ
ಉತ್ತರ ಪ್ರದೇಶದ ಪ್ರಯಾಗ್ ರಾಜ್ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಅನೇಕ ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ಮಹಾ ಕುಂಭಮೇಳದ ಅಂತ್ಯದಲ್ಲಿ ನೆಲವತ್ತು ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಈಗಾಗಲೇ ಇಪ್ಪತೈದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ. ಪ್ರಯಾಗ್ ರಾಜ್ಗೆ ಸಾವಿರಾರು ಸಾಧು-ಸಂತರು ನಾಗಸಾಧುಗಳು, ಕೋಟ್ಯಂತರ ಭಕ್ತರು, ವಿದೇಶಿ ಭಕ್ತರು ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ.
ಮಹಾ ಕುಂಭಮೇಳದಲ್ಲಿ ಸಾವಿರಾರು ನಾಗಸಾಧುಗಳು ಭಾಗಿಯಾಗುತ್ತಿದ್ದು, ಒಬ್ಬೊಬ್ಬರ ಕಥೆ ವಿಭಿನ್ನವಾಗಿದೆ. ಈ ಪೈಕಿ ಸುಮಾರು 27 ವರ್ಷಗಳ ಹಿಂದೆ ತನ್ನವರನೆಲ್ಲಾ ಕಳೆದುಕೊಂಡಿದ್ದ ನಾಗಸಾಧು ಒಬ್ಬರಿಗೆ ತನ್ನ ಕುಟುಂಬ ಮತ್ತೆ ಮರಳಿ ಸಿಕ್ಕಿದೆ. ಆದರೆ ಈಗಾಗಲೇ ಆತ ಸನ್ಯಾಸತ್ವವನ್ನು ಸ್ವೀಕರಿಸಿದ್ದು, ಕುಟುಂಬಸ್ಥರನ್ನು ಮತ್ತೆ ಒಪ್ಪಿಕೊಳ್ಳಲು ಹಾಗೂ ಅವರ ಜೊತೆ ಹೋಗಲು ನಿರಾಕರಿಸಿದ್ದಾನೆ.

ಜಾರ್ಖಂಡ್ ಮೂಲದ ಕುಟುಂಬದ ಸದಸ್ಯನೊಬ್ಬ 27 ವರ್ಷಗಳ ಹಿಂದೆ ತನ್ನ ಮನೆಯನ್ನು ತೊರೆದು ಹೋಗಿದ್ದು, ಈವರೆಗೂ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಈ ಬಾರಿಯ ಮಹಾ ಕುಂಭಮೇಳದಲ್ಲಿ ದಿಢೀರ್ ಕಾಣಿಸಿಕೊಂಡಿದ್ದಾರೆ. ಗಂಗಾ ಸಾಗರ್ ಯಾದವ ಎನ್ನುವವರು 1998ರಲ್ಲಿ ಜಾರ್ಖಂಡ್ನ ಧನ್ಬಾದ್ನಿಂದ ಕಾಣೆಯಾಗಿದ್ದರು. ತಮ್ಮನ ಮದುವೆಗೆ ಸೀರೆ ತರುತ್ತೇನೆ ಎಂದು ಊರು ಬಿಟ್ಟವರು ಈವರೆಗೂ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದರೂ ಸಹ ಪ್ರಯೋಜನವಾಗಿರಲಿಲ್ಲ.
ಕೊನೆಗೆ 27 ವರ್ಷಗಳ ನಂತರ ಪ್ರಯಾಗ್ ರಾಜ್ನ ಮಹಾ ಕುಂಭಮೇಳದಲ್ಲಿ ಗಂಗಾ ಸಾಗರ್ ಯಾದವ ಕಂಡು ಬಂದಿದ್ದಾರೆ. ಕುಟುಂಬಸ್ಥರು ಕೂಡಲೇ ಪ್ರಯಾಗ್ ರಾಜ್ಗೆ ಬಂದು ಭೇಟಿಯಾಗಿದ್ದಾರೆ. ಆದರೆ ಗಂಗಾ ಸಾಗರ್, ಬಾಬಾ ರಾಜಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದು, ನಾನು ವಾರಣಾಸಿಯವನು ನನಗೂ ನಿಮಗೂ ಸಂಬಂಧ ಇಲ್ಲ ಎಂದು ಅವರನ್ನು ಮಾತನಾಡಿಸಲು ಅವರೊಂದಿಗೆ ಹೋಗಲು ನಿರಾಕರಿಸಿದ್ದಾರೆ.
ಕುಟುಂಬಸ್ಥರು ಬಾಬಾ ರಾಜಕುಮಾರ್ ಬಳಿ ಬೇಡಿಕೊಂಡಿದ್ದು, ಕೊನೆಗೆ ಸ್ಥಳೀಯ ಪೊಲೀಸರು ಕೂಡ ಈ ಪ್ರಕರಣಕ್ಕೆ ಎಂಟ್ರಿಯಾಗಿದ್ದಾರೆ. ಈ ವೇಳೆ ಕುಟುಂಬಸ್ಥರು ದೇಹದ ಗುರುತುಗಳನ್ನು ಹೇಳಿದ್ದಾರೆ. ಅಲ್ಲದೇ ಪೊಲೀಸರ ಬಳಿ ಡಿಎನ್ಎ ಟೆಸ್ಟ್ ಮಾಡಿಸಲು ಹೇಳಿದ್ದು, ಮಹಾ ಕುಂಭಮೇಳ ಮುಗಿಯುವರೆಗೂ ಕಾದು ಅವರ ಮನವೊಲಿಸುತ್ತೇವೆ. ಒಂದು ವೇಳೆ ಡಿಎನ್ಎ ಟೆಸ್ಟ್ ವರದಿಯಲ್ಲಿ ಮ್ಯಾಚ್ ಆಗದೇ ಇದ್ದರೆ ಬಾಬಾ ರಾಜಕುಮಾರ್ ಅವರ ಬಳಿ ಕ್ಷಮೆ ಕೇಳಿ ವಾಪಸ್ ಊರಿಗೆ ಹೋಗುತ್ತೇವೆ ಎಂದು ಗಂಗಾ ಸಾಗರ್ ಕುಟುಂಬ ಕಾಯುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications