Maha Kumbh Mela 2025: ನಾಳೆ ಪ್ರಯಾಗ್ರಾಜ್ನಲ್ಲಿ ನೋ ವೆಹಿಹಲ್ ಝೋನ್ ನಿಯಮ ಜಾರಿ
ನಮ್ಮ ದೇಶ ಮಾತ್ರವಲ್ಲದೇ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವಾಗಿರುವ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಆಯೋಜಕ ನಿರೀಕ್ಷೆಗೂ ಮೀರಿದ ಜನದಟ್ಟಣೆಯಾಗುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸುಮಾರು 45 ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆಯಿತ್ತು. ಆದರೆ ಈಗಿನ ಭಕ್ತರ ಸಂಖ್ಯೆಯನ್ನು ನೋಡಿದರೆ ಇನ್ನೂ ಹದಿನೈದು ದಿನಗಳ ಕಾಲ ನಡೆಯುವ ಈ ಮಹಾ ಕುಂಭ ಮೇಳದಲ್ಲಿ ಐವತ್ತರಿಂದ ಅರವತ್ತು ಕೋಟಿ ಭಕ್ತರು ಭಾಗಿಯಾಗಬಹುದು ಎಂದು ಅಂದಾಜಿಸಲಾಗುತ್ತಿದೆ.
ಮಹಾ ಕುಂಭಮೇಳ ಆರಂಭವಾದ ಒಂದು ತಿಂಗಳಲ್ಲಿಯೇ 45 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ, ಜನವರಿ 29, 2025ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಶಾಹಿ ಸ್ನಾನ, ಫೆಬ್ರವರಿ 3, 2025ರಂದು ವಸಂತ ಪಂಚಮಿಯ ದಿನ ಮೂರನೇ ಶಾಹಿ ಸ್ನಾನ ಈಗಾಗಲೇ ನಡೆದಿದ್ದು, ಕೋಟ್ಯಂತರ ಭಕ್ತರು ಭಾಗಿಯಾಗಿದ್ದಾರೆ. ನಾಳೆ ಅಂದರೆ ಫೆಬ್ರವರಿ 12 ಮತ್ತೊಂದು ವಿಶೇಷ ದಿನವಾಗಿದ್ದು, ನಾಳೆ ಇನ್ನಷ್ಟು ಭಕ್ತರು ಭಾಗಿಯಾಗಲಿದ್ದಾರೆ.

ಫೆಬ್ರವರಿ 12, 2025ರಂದು ಮಾಘಿ ಪೂರ್ಣಿಮೆಯ ದಿನ 10 ಲಕ್ಷಕ್ಕೂ ಅಧಿಕ ಭಕ್ತರು ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಭಕ್ತರು ಈಗಾಗಲೇ ಒಂದು ತಿಂಗಳಿನಿಂದ ಕಲ್ಪವಾಸದಲ್ಲಿದ್ದು, ನಾಳೆ ಅವರ ಮಾಘಿ ಪೂರ್ಣಿಮೆ ಪುಣ್ಯಸ್ನಾನದೊಂದಿಗೆ ಕಲ್ಪವಾಸ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಪ್ರಯಾಗ್ ರಾಜ್ನಲ್ಲಿ ನೋ ವೆಹಿಕಲ್ ಝೋನ್ ಘೋಷಣೆ ಮಾಡಲಾಗಿದೆ. ಖಾಸಗಿ ಮಾತ್ರವಲ್ಲದೇ ಸರ್ಕಾರಿ ವಾಹನಗಳಿಗೂ ಕೂಡ ಪ್ರವೇಶ ನಿರ್ಭಂಧ ಹೇರಲಾಗಿದೆ. ಮಹಾ ಕುಂಭಮೇಳಕ್ಕೆ ಆಗಮಿಸುವವರು ನಗರದ ಹೊರಗಿನ ಪಾರ್ಕಿಂಗ್ ಸ್ಥಳಗಳಲ್ಲಿಯೇ ವಾಹನ ನಿಲ್ಲಿಸಿ ನಡೆದುಕೊಂಡು ಹೋಗಬೇಕಿದೆ. ನಾಳೆ ಮುಂಜಾನೆಯಿಂದಲೇ ನೋ ವೆಹಿಹಲ್ ಝೋನ್ ನಿಯಮ ಜಾರಿಯಾಗಲಿದ್ದು, ಮಹಾ ಕುಂಭಮೇಳಕ್ಕೆ ತೆರಳುವ ಭಕ್ತರು ಗಮನಿಸಬೇಕಿದೆ.

ಇನ್ನು ಉತ್ತರ ಪ್ರದೇಶದ ಸರ್ಕಾರ ಮಹಾ ಕುಂಭ ಮೇಳದ ಯಶಸ್ಸಿಗಾಗಿ 7,000 ಕೋಟಿ ಅನುದಾನ ಘೋಷಿಸಿ ಸಕಲ ವ್ಯವಸ್ಥೆ ಕೈಗೊಂಡಿತ್ತು. 10,000 ಹೆಕ್ಟೇರ್ಗಳ ವಿಶಾಲವಾದ ಪ್ರದೇಶದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಕ್ತರಿಗಾಗಿ ವಿಶಾಲವಾದ ಪ್ರದೇಶದಲ್ಲಿ 1.5 ಲಕ್ಷ ಟೆಂಟ್ಗಳನ್ನು 1.5 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿತ್ತು. ಅಲ್ಲದೇ 30 ಕಿರು ಸೇತುವೆಗಳನ್ನು ನಿರ್ಮಾಣ, 400 ಕಿಲೋ ಮೀಟರ್ಗೂ ಹೆಚ್ಚು ತಾತ್ಕಾಲಿಕ ರಸ್ತೆಗಳನ್ನು ರಚಿಸಲಾಗಿತ್ತು. ಹೀಗಿದ್ದರೂ ಕೂಡ ಮಹಾ ಕುಂಭ ಮೇಳಕ್ಕೆ ಆಗಮಿಸುವ ಜನದಟ್ಟಣೆ ನಿಯಂತ್ರಣಕ್ಕೆ ಸಿಗದಂತಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications