Kumbh Mela: ಕುಂಭ ಸ್ನಾನದ ವೇಳೆ ಭಕ್ತನ ಕಾಲಿಗೆ ತಾಕಿದ ಆಮೆ: ಮುಂದೆ ನಡೆದಿದ್ದೇನು?
ನಮ್ಮ ದೇಶ ಮಾತ್ರವಲ್ಲದೇ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವಾಗಿರುವ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಆಯೋಜಕ ನಿರೀಕ್ಷೆಗೂ ಮೀರಿದ ಜನದಟ್ಟಣೆಯಾಗುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸುಮಾರು 45 ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆಯಿತ್ತು. ಆದರೆ ಈಗಿನ ಭಕ್ತರ ಸಂಖ್ಯೆಯನ್ನು ನೋಡಿದರೆ ಮುಗಿಯವ ವೇಳೆಗೆ ಈ ಮಹಾ ಕುಂಭ ಮೇಳದಲ್ಲಿ ಐವತ್ತರಿಂದ ಅರವತ್ತು ಕೋಟಿ ಭಕ್ತರು ಭಾಗಿಯಾಗಬಹುದು ಎಂದು ಅಂದಾಜಿಸಲಾಗುತ್ತಿದೆ.
ಜಗತ್ತಿನಾದ್ಯಂತ ಸುದ್ದಿಯಲ್ಲಿರುವ ಮಹಾ ಕುಂಭಮೇಳವು ಅನೇಕ ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ಕೋಟ್ಯಂತರ ಭಕ್ತರು ಉತ್ತರ ಪ್ರದೇಶದ ಪ್ರಯಾಗ್ ರಾಜ್ಗೆ ತೆರಳಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರಾ ಸ್ನಾನ ಕೈಗೊಳ್ಳುತ್ತಿದ್ದಾರೆ. ಕುಂಭ ಸ್ನಾನದ ಬಳಿಕ ಒಬೊಬ್ಬರಿಗೆ ಒಂದೊಂದು ಅನುಭವವಾಗಿದ್ದು, ಇಲ್ಲೊಬ್ಬ ವ್ಯಕ್ತಿಗೆ ವಿಚಿತ್ರ ಅನುಭವವಾಗಿದೆ.

ಎಲ್ಲ ಭಕ್ತರಂತೆ ಬಿಹಾರದ ದಶರಥ್ ಯಾದವ್ ಎನ್ನುವವರು ಕೂಡ ಮಹಾ ಕುಂಭಮೇಳಕ್ಕೆ ತೆರಳಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಈ ವೇಳೆ ಗಂಗಾ ನದಿಯ ನೀರಿನಲ್ಲಿ ಮುಳುಗಿದಾದ ಅವರಿಗೆ ಅಚ್ಚರಿಯೊಂದು ಕಾದಿತ್ತು. ದಶರಥ್ ಯಾದವ್ ಮೊದಲು ಎರಡು ಮುಳುಗು ಹಾಕಿದ್ದರು. ಕೊನೆಯಲ್ಲಿ ಮೂರನೇ ಮುಳುಗು ಹಾಕುವ ವೇಳೆ ಏನೋ ಕಾಲಿ ಬಳಿ ಸ್ಪರ್ಶಿಸಿದಂತಾಗಿದೆಯಂತೆ. ಈ ವೇಳೆ ಏನದು ಎಂದು ದಶರಥ್ ಯಾದವ್ ನೋಡಿದಾಗ ನೋಡಲು ವಿಶೇಷವಾಗಿದ್ದ ಆಮೆಯೊಂದು ದಶರಥ್ ಯಾದವ್ ಕಾಲ ಬಳಿ ಬಂದಿದೆ.
ಇದನ್ನು ನೋಡಿದ ಕೂಡಲೇ ದಶರಥ್ ಕಾಲಿನ ಬಳಿಯಿಂದ ತೆಗೆದು ಕಣ್ಣಿಗೆ ಒತ್ತಿಕೊಂಡು ದಡಕ್ಕೆ ತಂದಿದ್ದಾರೆ. ನೋಡಲು ಬಹಳ ವಿಶೇಷವಾಗಿ ಕಾಣುತ್ತಿದ್ದ ಆ ಆಮೆ ಈಗ ದಶರಥ್ ಯಾದವ್ ಅವರ ಬಳಿಯೇ ಇದೆ ಎನ್ನಲಾಗಿದೆ. ಈ ಆಮೆಯ ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದು, ಜನರು ಸಾಕ್ಷಾತ್ ಮಹಾವಿಷ್ಣು ಅಮೃತ ಮಂಥನಕ್ಕಾಗಿ ಕೂರ್ಮಾವತಾರ ಎತ್ತಿದ ಆಮೆ ಎಂದು ದಶರಥ್ ಯಾದವ್ ಅವರನ್ನು ಹುಡುಕಿ ಬಂದು ಆಮೆಯ ದರ್ಶನ ಪಡೆದು ನಮಸ್ಕರಿಸುತ್ತಿದ್ದಾರೆ. ಈ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯೇ ಶುರುವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications