ಮುಂದಿನ ಕುಂಭ ಮೇಳ ಎಲ್ಲಿ..ಯಾವಾಗ..ನಡೆಯಲಿದೆ? ಇಲ್ಲಿದೆ ವಿವರ
ಭಾರತ ಮಾತ್ರವಲ್ಲದೇ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವ ಎಂದರೆ ಅದು ಕುಂಭ ಮೇಳ. ಈ ಬಾರಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳ ಅದ್ಧೂರಿಯಾಗಿ ನಡೆದು ಸಂಪನ್ನಗೊಂಡಿದೆ. ಈ ವರ್ಷದ ಮಕರ ಸಂಕ್ರಾತಿಯ ಹಿಂದಿನ ದಿನ ಅಂದರೆ ಜನವರಿ 13ರಂದು ಆರಂಭವಾದ ಈ ಮಹಾ ಕುಂಭಮೇಳವು 45 ದಿನಗಳನ್ನು ಯಶಸ್ವಿಯಾಗಿ ಮುಗಿಸಿ, ಇಂದು ಮಹಾ ಶಿವರಾತ್ರಿಯ ದಿನ ಅಮೃತ ಸ್ನಾನದೊಂದಿಗೆ ಕೊನೆಗೊಳ್ಳಲಿದೆ. ಇಂದು ರಾತ್ರಿಯವರೆಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಇರಲಿದೆ.
ಈ ಬಾರಿಯ ಮಹಾ ಕುಂಭಮೇಳದಲ್ಲಿ 45 ಕೋಟಿ ಭಕ್ತರು ಭಾಗಿಯಾಗುವ ನಿರೀಕ್ಷೆ ಇತ್ತು. ಆದರೆ ಆಯೋಜಕರ ನಿರೀಕ್ಷೆಗೂ ಮೀರಿ ಭಕ್ತ ಸಾಗರ ಹರಿದು ಬಂದಿದ್ದು, ಭಾರತದ ಮೂಲೆ ಮೂಲೆಯಿಂದ ಮಾತ್ರವಲ್ಲದೇ ವಿದೇಶದಿಂದಲೂ ಭಕ್ತರು ಹಾಗೂ ಗಣ್ಯರು ಆಗಮಿಸಿದ್ದು ಸುಮಾರು ಅವರವತ್ತು ಕೋಟಿ ಭಕ್ತರು ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ.

ಈ ಬಾರಿಯ ಮಹಾ ಕುಂಭ ಮೇಳ ಯಶಸ್ವಿಯಾದ ಬೆನ್ನಲ್ಲೇ ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಪ್ರಶ್ನೆ ಈಗಾಗಲೇ ಉದ್ಭವಗೊಂಡಿದೆ. ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಮೊದಲು ಕುಂಭ ಮೇಳದ ಬಗ್ಗೆ ಕೆಲವು ವಿಚಾರಗಳನ್ನು ಈ ಕೆಳಗೆ ನೀಡಲಾಗಿದೆ.
ಕುಂಭ ಮೇಳದ ವಿಧಗಳೇನು?
700 ವರ್ಷಗಳ ಇತಿಹಾಸ ಇರುವ ಈ ಕುಂಭ ಮೇಳವನ್ನು ವರ್ಷಗಳಿಗೆ ಅನುಗುಣವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಸಾಮಾನ್ಯವಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿರುವ ಸರಸ್ವತಿ, ಗಂಗಾ ಹಾಗೂ ಯಮುನಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಕುಂಭ ಮೇಳವನ್ನು ನಡೆಸಲಾಗುತ್ತದೆ. ಇನ್ನು ಆರು ವರ್ಷಗಳಿಗೊಮ್ಮೆ ಅರ್ಧ ಕುಂಭ ಮೇಳ ನಡೆಸಲಾಗುತ್ತದೆ. ಹಾಗೂ ಸಂಪೂರ್ಣ ಹನ್ನೆರಡು ವರ್ಷಗಳಿಗೊಮ್ಮೆ ಪೂರ್ಣ ಕುಂಭ ಮೇಳ ಎಂದು ಕರೆಯಲಾಗುತ್ತದೆ.
ಎಲ್ಲೆಲ್ಲಿ ಕುಂಭ ಮೇಳ ನಡೆಯುತ್ತದೆ?
ಉತ್ತರಾಖಂಡದ ಗಂಗಾ ನದಿಯ ದಡದಲ್ಲಿರುವ ಹರಿದ್ವಾರದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಮಹಾ ಕುಂಭಮೇಳವನ್ನು ನಡೆಸಲಾಗುತ್ತದೆ. ಅಲ್ಲದೇ ಕೆಲವೊಂದು ಬಾರಿ ಇದೇ ಪ್ರದೇಶದಲ್ಲಿ ಪ್ರತಿ ಆರು ವರ್ಷಗಳಿಗೊಮ್ಮೆ ಅರ್ಧ ಕುಂಭ ಮೇಳವನ್ನು ಸಹ ಆಯೋಜಿಲಾಗುತ್ತದೆ. ಮಹಾರಾಷ್ಟ್ರದ ಗೋದಾವರಿ ನದಿಯ ದಡದಲ್ಲಿರುವ ನಾಸಿಕ್ನಲ್ಲಿ ಹಾಗೂ ಮಧ್ಯಪ್ರದೇಶದ ಶಿಪ್ರಾ ನದಿಯ ದಡದಲ್ಲಿರುವ ಉಜ್ಜಯಿನಿಯಲ್ಲಿ ಕುಂಭಮೇಳ ನಡೆಯುತ್ತವೆ.

ಹೀಗಾಗಿ ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಪ್ರಶ್ನೆಗೆ ಈಗಾಗಲೇ ಉತ್ತರ ಸಿಕ್ಕಿದೆ. ಹೌದು ಮುಂದಿನ ಪೂರ್ಣ ಕುಂಭ ಮೇಳ ಮಹಾರಾಷ್ಟ್ರದ ನಾಸಿಕ್ನಲ್ಲಿ 2027ರಂದು ನಡೆಯಲಿದೆ. ಮುಂಬರುವ ಪೂರ್ಣ ಕುಂಭ ಮೇಳ ಗೋದಾವರಿ ನದಿ ತೀರದಲ್ಲಿ ನಡಯಲಿದೆ. ಇದನ್ನು ಸಿಂಹ ಹಸ್ತ ಕುಂಭಮೇಳ ಎಂದು ಸಹ ಕರೆಯಲಾಗುತ್ತದೆ. ಸುಮಾರು 17ನೇ ಶತಮಾನದಿಂದಲೂ ಕೂಡ ನಾಸಿಕ್ನಲ್ಲಿ ಈ ಕುಂಭ ಮೇಳವನ್ನು ನಡೆಸಿಕೊಂಡು ಬರಲಾಗುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications