Maha Kumbh Mela 2025: ವಸಂತ ಪಂಚಮಿಯ ದಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಗೈದ ಭಕ್ತರ ಸಂಖ್ಯೆ ಎಷ್ಟು?
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ 144 ವರ್ಷಗಳಿಗೊಮ್ಮೆ ಬರುವ ಮಹಾ ಕುಂಭ ಮೇಳ ಅದ್ಧೂರಿಯಾಗಿ ನಡೆಯುತ್ತಿದೆ. ಗಂಗಾ, ಯಮುನಾ ಹಾಗೂ ಸರಸ್ವತಿ ಮಹಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪ್ರತಿ ದಿನ ಕನಿಷ್ಠ ಐವತ್ತು ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ.
2025ರ ಜನವರಿ 13ರಂದು ಮಕರ ಸಂಕ್ರಾಂತಿಯಿಂದ ಪ್ರಾರಂಭವಾದ ಈ ಮಹಾ ಕುಂಭ ಮೇಳ ಫೆಬ್ರವರಿ 26 ಮಹಾ ಶಿವರಾತ್ರಿಯವರೆಗೆ ನಡೆಯಲಿದೆ. ಈ ಬಾರಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಸುಮಾರು 45 ಕೋಟಿ ಭಕ್ತರು ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ.

ಜನವರಿ 14, 2025ರಂದು ಮಕರ ಸಂಕ್ರಾಂತಿಯ ದಿನ ಮೊದಲ ಶಾಹಿ ಸ್ನಾನ ನಡೆದಿದ್ದು, ಜನವರಿ 29ರಂದು ಮೌನಿ ಅಮವಾಸ್ಯೆಯ ದಿನ ಎರಡನೇ ಶಾಹಿ ಸ್ನಾನ ನಡೆದಿದೆ. ಇಂದು ಫೆಬ್ರವರಿ 3ರಂದು ವಸಂತ ಪಂಚಮಿಯ ದಿನದಂದು ಮೂರನೇ ಹಾಗೂ ಕೊನೆಯ ಶಾಹಿ ಸ್ನಾನ ನಡೆದಿದೆ. ವಸಂತ ಪಂಚಮಿ ಈ ಪವಿತ್ರ ದಿನದಂದು ಗಂಗಾ, ಯಮುನಾ ಹಾಗೂ ಸರಸ್ವತಿ ಮಹಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಸುಮಾರು 62 ಲಕ್ಷ ಜನರು ಪವಿತ್ರ ಸ್ನಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಸಂತ ಪಂಚಮಿಯ ಹಿನ್ನೆಲೆಯಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಎಲ್ಲಾ 13 ಅಖಾರರಗಳಲ್ಲಿ ಮಹಾನಿರ್ವಾನಿ ಅಟಲ್, ಜುನಾ ಹಾಗೂ ನಿರಂಜನಿಗಳನ್ನು ಸೇರಿ ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದ್ದು, ಸಾಧು ಮತ್ತು ಸನ್ಯಾಸಿಗಳ ಮೇಲೆ ಪುಷ್ಪವೃಷ್ಟಿಯನ್ನು ಸುರಿಸಲಾಗಿದೆ. ವಸಂತ ಪಂಚಮಿಯಂದು ಅಮೃತ ಸ್ನಾನ ಮಾಡಿದರೆ ಪುಣ್ಯ ಪಾಪ್ತಿಯಾಗುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ.

ಇನ್ನು ಮಹಾ ಕುಂಭ ಮೇಳದಲ್ಲಿ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಉತ್ತರ ಪ್ರದೇಶ ಸರ್ಕಾರ ಕೂಡ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಮೌನಿ ಅಮವಾಸ್ಯೆಯ ದಿನ ದುರಂತ ನಡೆದಿದ್ದು, ಕಾಲ್ತುಳಿತದಿಂದ ಮೂವತ್ತು ಜನ ಅಸುನೀಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಜನದಟ್ಟಣೆ ನಿಯಂತ್ರಿಸಲು ಬಿಗಿ ಭದ್ರತೆ ಮಾಡಿಕೊಂಡಿದ್ದಾರೆ. ಇನ್ನು ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ಹಗಲು ರಾತ್ರಿ ಎನ್ನದೇ ಮಹಾ ಕುಂಭ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications