ಸತತ ಮೂರು ಬಾರಿ ಸೋತಿದ್ದ ಈ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವುದೇ?
ಸತತ ಮೂರು ಬಾರಿಯಿಂದಲೂ ಬೆಂಗಳೂರು ನಗರದಲ್ಲಿ ಬಿಜೆಪಿಯು ಗೆಲ್ಲಲಾಗದ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್. ಜೆಡಿಎಸ್ನಿಂದ ಸತತ ಎರಡು ಬಾರಿ ಗೆಲುವು ಸಾಧಿಸಿದ್ದ ಕೆ ಗೋಪಾಲಯ್ಯ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಗೊಂಡಿದ್ದಾರೆ.
ಇದೇ ಗೋಪಾಲಯ್ಯ ವಿರುದ್ಧ 2013ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ನೆ.ಲ. ನರೇಂದ್ರ ಬಾಬು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಹೀನಾಯವಾಗಿ ಸೋತಿದ್ದರು.
2013ಕ್ಕಿಂತಲೂ ಹೆಚ್ಚಿನ ಅಂತರದಲ್ಲಿ ಗೋಪಾಲಯ್ಯ ಗೆದ್ದಿರುವುದು ಗೋಪಾಲಯ್ಯ ಪ್ರಭಾವ ಹೆಚ್ಚಾಗಿರುವುದು ಗೋಚರಿಸುತ್ತದೆ. ಆದಾಗ್ಯೂ ಈ ಬಾರಿಯ ಉಪ ಚುನಾವಣೆಯಲ್ಲಿ ಎಲ್ಲವೂ ಅಭ್ಯರ್ಥಿಗಳ ಆಯ್ಕೆಯ ಮೇಲೆ ನಿರ್ಧಾರವಾಗಲಿದೆ.

ಗೋಪಾಲಯ್ಯ ಸ್ಪರ್ಧೆಗೆ ಸುಪ್ರೀಂಕೋರ್ಟ್ನಿಂದ ಅನುಮತಿ ಸಿಗದಿದ್ದರೆ ಅವರ ಪತ್ನಿ ಹಾಗೂ ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಅವರು ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಆದರೆ ಗೋಪಾಲಯ್ಯ ಅವರ ಸ್ಪರ್ಧೆಗೆ ಅನುಮತಿ ಸಿಗಲಿಲ್ಲವೆಂದಾಕ್ಷಣ ಗೋಪಾಲಯ್ಯ ಅವರ ಪತ್ನಿಗೆ ಟಿಕೆಟ್ ನೀಡಲು ಬಿಜೆಪಿ ಸಮ್ಮತಿಸಲಿದೆಯೇ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಬಿಜೆಪಿಯಿಂದ ನೆ.ಲ. ನರೇಂದ್ರ ಬಾಬು ಅವರಿಗೆ ಟಿಕೆಟ್ ಸಿಗದೆ ಇದ್ದರೆ, ಕಾಂಗ್ರೆಸ್ಗೆ ನೆ.ಲ. ನರೇಂದ್ರ ಬಾಬು ಮರಳಿ ಸ್ಪರ್ಧಿಸಲಿದ್ದಾರೆಯೇ ಎನ್ನುವ ಅನುಮಾನವೂ ಇದೆ.
ಅನರ್ಹ ಶಾಸಕರ ಪತ್ನಿ ಹಾಗೂ ಮಾಜಿ ಉಪ ಮೇಯರ್ ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಹೀಗಾಗಲಿ ನೆ.ಲ ನರೇಂದ್ರಬಾಬು ಮತ್ತೆ ಕಾಂಗ್ರೆಸ್ ಕದ ತಟ್ಟಿದರೂ ಆಶ್ಚರ್ಯವಿಲ್ಲ.
ವಾರ್ಡ್ಗಳು:ನಂದಿನಿ ಲೇಔಟ್, ಮಾರಪ್ಪನಪಾಳ್ಯ, ನಾಗಪುರ, ಮಹಾಲಕ್ಷ್ಮೀಪುರಂ, ಶಕ್ತಿ ಗಣಪತಿ ನಗರ, ಶಂಕರಮಠ, ವೃಷಭಾವತಿ ನಗರ ವಾರ್ಡ್ಗಳು ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 7 ವಾರ್ಡ್ಗಳಲ್ಲಿ 4 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಯಕರು ಜಯಗಳಿಸಿದ್ದಾರೆ.
ಕ್ಷೇತ್ರ ಜಾತಿ ಲೆಕ್ಕಾಚಾರ : ಒಕ್ಕಲಿಗರು 80,000, ಹಿಂದುಳಿದ ವರ್ಗ 50,000, ಎಸ್ಸಿ 30,000, ಲಿಂಗಾಯತ 22,000, ಮುಸ್ಲಿಂ 7000
2018ರ ವಿಧಾನಸಭಾ ಫಲಿತಾಂಶ-ಕೆ.ಗೋಪಾಲಯ್ಯ(ಜೆ)-88,218
ನೆ.ಲ ನರೇಂದ್ರಬಾಬು(ಬಿ)-47,118, ಮಂಜುನಾಥ್ (ಕಾ)-20.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications