ಮಹಾರಾಷ್ಟ್ರ ರಾಜಕೀಯ; ಅಳಿಯ ಸ್ಪೀಕರ್, ಮಾವ ಸಭಾಪತಿ!
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ ಅಸ್ತಿತ್ವಕ್ಕೆ ಬಂದಿದೆ. ಸೋಮವಾರ ಮುಖ್ಯಮಂತ್ರಿಗಳು ವಿಶ್ವಾಸಮತಯಾಚನೆ ಮಾಡಬೇಕಿದೆ. ಭಾನುವಾರ ವಿಧಾನಸಭೆಯ ಸ್ಪೀಕರ್ ಆಯ್ಕೆ ನಡೆದಿದೆ.
ಭಾನುವಾರ ನಡೆದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಆಯ್ಕೆಯಾದರು. ಅಚ್ಚರಿಯ ಸಂಗತಿ ಎಂದರೆ ರಾಹುಲ್ ನಾರ್ವೇಕರ್ ಮಾವ ವಿಧಾನ ಪರಿಷತ್ ಸಭಾಪತಿ.
ಬಿಜೆಪಿಯ ಶಾಸಕ ರಾಹುಲ್ ನಾರ್ವೇಕರ್ 164 ಮತಗಳಿಂದ ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನೆಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದ ರಾಜನ್ ಸಾಲ್ವಿ 107 ಮತಗಳನ್ನು ಪಡೆದರು. ಸ್ಪೀಕರ್ ಚುನಾವಣೆಯಲ್ಲಿಯೂ ಅಡ್ಡ ಮತದಾನವಾಗಿದೆ. ಹಲವು ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಪಕ್ಷದ ಮುಖ್ಯ ಸಚೇತಕರು ಹೇಳಿದ್ದಾರೆ.

ರಾಹುಲ್ ನಾರ್ವೇಕರ್ ಪರಿಚಯ; 45 ವರ್ಷದ ರಾಹುಲ್ ನಾರ್ವೇಕರ್ ದೇಶದ ವಿಧಾನಸಭೆಗಳಲ್ಲಿಯೇ ಅತಿ ಕಿರಿ ವಯಸ್ಸಿನ ಸ್ಪೀಕರ್. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹ ಇದನ್ನು ಖಚಿತ ಪಡಿಸಿದ್ದಾರೆ.
ಮುಂಬೈನ ಕೊಲಬಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಈ ಹಿಂದೆ ಶಿವಸೇನೆ ಮತ್ತು ಎನ್ಸಿಪಿಯಲ್ಲಿದ್ದರು. 2019ರಲ್ಲಿ ಬಿಜೆಪಿ ಸೇರಿದ್ದರು. ಶಿವಸೇನೆಯ ಯುವ ಘಟಕದ ವಕ್ತಾರರಾಗಿ ಹಲವು ವರ್ಷ ಕಾರ್ಯ ನಿರ್ವಹಣೆ ಮಾಡಿದ್ದರು.
2014ರಲ್ಲಿ ಶಿವಸೇನೆ ತೊರೆದ ರಾಹುಲ್ ನಾರ್ವೇಕರ್ ಎನ್ಸಿಪಿ ಸೇರಿದರು. ಮಾವಲ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದು ಶಿವಸೇನೆಯ ಅಭ್ಯರ್ಥಿಯ ಎದುರು ಸೋಲುಕಂಡರು.
2019 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ರಾಹುಲ್ ನಾರ್ವೇಕರ್ ಬಿಜೆಪಿ ಸೇರಿದರು. ಕೊಲಬಾ ಕ್ಷೇತ್ರದಿಂದ ಕಣಕ್ಕಿಳಿದು ಕಾಂಗ್ರೆಸ್ನ ಅಶೋಕ್ ಜಗ್ಪತ್ ಸೋಲಿಸಿ, ವಿಧಾನಸಭೆ ಪ್ರವೇಶಿಸಿದರು.
ಸಾಮಾನ್ಯವಾಗಿ ಹಲವು ಬಾರಿ ಗೆದ್ದಿರುವ ಹಿರಿಯ ಶಾಸಕರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗುತ್ತದೆ. ಆದರೆ ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿ ಸ್ಪೀಕರ್ ಆದ ಮೊದಲ ಶಾಸಕ ರಾಹುಲ್ ನಾರ್ವೇಕರ್.
ಮಾವ, ಅಳಿಯ ಜೋಡಿ; ರಾಹುಲ್ ನಾರ್ವೇಕರ್ ಅಳಿಯ ರಾಮ್ರಾಜೇ ನಾಯಕ್ ಎನ್ಸಿಪಿ ಪಕ್ಷದಲ್ಲಿದ್ದಾರೆ. ಅವರು ವಿಧಾನ ಪರಿಷತ್ ಸಭಾಪತಿಯಾಗಿದ್ದಾರೆ. ಈಗ ಅಳಿಯ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ಎರಡು ಸಂವಿಧಾನಿಕ ಹುದ್ದೆಗಳಿಗೆ ಕುಟುಂಬದ ಇಬ್ಬರು ಆಯ್ಕೆಯಾಗಿರುವುದು ದೇಶದಲ್ಲೇ ಮೊದಲು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications