ಮಹಾರಾಷ್ಟ್ರ ರಾಜಕೀಯ; ಅಳಿಯ ಸ್ಪೀಕರ್, ಮಾವ ಸಭಾಪತಿ!
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ ಅಸ್ತಿತ್ವಕ್ಕೆ ಬಂದಿದೆ. ಸೋಮವಾರ ಮುಖ್ಯಮಂತ್ರಿಗಳು ವಿಶ್ವಾಸಮತಯಾಚನೆ ಮಾಡಬೇಕಿದೆ. ಭಾನುವಾರ ವಿಧಾನಸಭೆಯ ಸ್ಪೀಕರ್ ಆಯ್ಕೆ ನಡೆದಿದೆ.
ಭಾನುವಾರ ನಡೆದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಸ್ಪೀಕರ್ ಆಗಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಆಯ್ಕೆಯಾದರು. ಅಚ್ಚರಿಯ ಸಂಗತಿ ಎಂದರೆ ರಾಹುಲ್ ನಾರ್ವೇಕರ್ ಮಾವ ವಿಧಾನ ಪರಿಷತ್ ಸಭಾಪತಿ.
ಬಿಜೆಪಿಯ ಶಾಸಕ ರಾಹುಲ್ ನಾರ್ವೇಕರ್ 164 ಮತಗಳಿಂದ ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನೆಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದ ರಾಜನ್ ಸಾಲ್ವಿ 107 ಮತಗಳನ್ನು ಪಡೆದರು. ಸ್ಪೀಕರ್ ಚುನಾವಣೆಯಲ್ಲಿಯೂ ಅಡ್ಡ ಮತದಾನವಾಗಿದೆ. ಹಲವು ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಪಕ್ಷದ ಮುಖ್ಯ ಸಚೇತಕರು ಹೇಳಿದ್ದಾರೆ.

ರಾಹುಲ್ ನಾರ್ವೇಕರ್ ಪರಿಚಯ; 45 ವರ್ಷದ ರಾಹುಲ್ ನಾರ್ವೇಕರ್ ದೇಶದ ವಿಧಾನಸಭೆಗಳಲ್ಲಿಯೇ ಅತಿ ಕಿರಿ ವಯಸ್ಸಿನ ಸ್ಪೀಕರ್. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹ ಇದನ್ನು ಖಚಿತ ಪಡಿಸಿದ್ದಾರೆ.
ಮುಂಬೈನ ಕೊಲಬಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಈ ಹಿಂದೆ ಶಿವಸೇನೆ ಮತ್ತು ಎನ್ಸಿಪಿಯಲ್ಲಿದ್ದರು. 2019ರಲ್ಲಿ ಬಿಜೆಪಿ ಸೇರಿದ್ದರು. ಶಿವಸೇನೆಯ ಯುವ ಘಟಕದ ವಕ್ತಾರರಾಗಿ ಹಲವು ವರ್ಷ ಕಾರ್ಯ ನಿರ್ವಹಣೆ ಮಾಡಿದ್ದರು.
2014ರಲ್ಲಿ ಶಿವಸೇನೆ ತೊರೆದ ರಾಹುಲ್ ನಾರ್ವೇಕರ್ ಎನ್ಸಿಪಿ ಸೇರಿದರು. ಮಾವಲ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದು ಶಿವಸೇನೆಯ ಅಭ್ಯರ್ಥಿಯ ಎದುರು ಸೋಲುಕಂಡರು.
2019 ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ರಾಹುಲ್ ನಾರ್ವೇಕರ್ ಬಿಜೆಪಿ ಸೇರಿದರು. ಕೊಲಬಾ ಕ್ಷೇತ್ರದಿಂದ ಕಣಕ್ಕಿಳಿದು ಕಾಂಗ್ರೆಸ್ನ ಅಶೋಕ್ ಜಗ್ಪತ್ ಸೋಲಿಸಿ, ವಿಧಾನಸಭೆ ಪ್ರವೇಶಿಸಿದರು.
ಸಾಮಾನ್ಯವಾಗಿ ಹಲವು ಬಾರಿ ಗೆದ್ದಿರುವ ಹಿರಿಯ ಶಾಸಕರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಗುತ್ತದೆ. ಆದರೆ ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿ ಸ್ಪೀಕರ್ ಆದ ಮೊದಲ ಶಾಸಕ ರಾಹುಲ್ ನಾರ್ವೇಕರ್.
ಮಾವ, ಅಳಿಯ ಜೋಡಿ; ರಾಹುಲ್ ನಾರ್ವೇಕರ್ ಅಳಿಯ ರಾಮ್ರಾಜೇ ನಾಯಕ್ ಎನ್ಸಿಪಿ ಪಕ್ಷದಲ್ಲಿದ್ದಾರೆ. ಅವರು ವಿಧಾನ ಪರಿಷತ್ ಸಭಾಪತಿಯಾಗಿದ್ದಾರೆ. ಈಗ ಅಳಿಯ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ಎರಡು ಸಂವಿಧಾನಿಕ ಹುದ್ದೆಗಳಿಗೆ ಕುಟುಂಬದ ಇಬ್ಬರು ಆಯ್ಕೆಯಾಗಿರುವುದು ದೇಶದಲ್ಲೇ ಮೊದಲು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications