ಕೇರಳದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನ ಬದಲು; ಸ್ಟಾರ್ ನಟನಿಗೆ ಮಣೆ?
ಕೊಚ್ಚಿ, ಸೆಪ್ಟೆಂಬರ್ 24: ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೇಲೆ ಸಾಲು ಸಾಲು ಆರೋಪಗಳು ಕೇಳಿ ಬಂದಿವೆ. ಹೀಗಾಗಿ, ರಾಜ್ಯಾಧ್ಯಕ್ಷರ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಮುಂದಾಗಿರುವ ಸುದ್ದಿ ಬಂದಿದೆ. ನಟ ಕಮ್ ಸಂಸದ ಸುರೇಶ್ ಗೋಪಿಗೆ ರಾಜ್ಯಾಧ್ಯಕ್ಷ ಪಟ್ಟ ಸಿಗುವ ಸಾಧ್ಯತೆ ದಟ್ಟವಾಗಿದೆ.
ಇದಲ್ಲದೆ, ಬೂತ್ ಮಟ್ಟದಿಂದ ಅಮೂಲಾಗ್ರ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ ಬಿಜೆಪಿ ಹೇಗಾದರೂ ಮಾಡಿ ಕೇರಳದಲ್ಲಿ ಕೇಸರಿ ಬಾವುಟ ಹಾರಿಸಲು ಪಣ ತೊಟ್ಟಿದೆ. ಚುನಾವಣೆ ಸೋಲಿನ ಬಗ್ಗೆ ಸುರೇಂದ್ರನ್ ನೀಡಿದ್ದ ವರದಿಯಿಂದ ಬಿಜೆಪಿ ವರಿಷ್ಠರು ಸಂತುಷ್ಟರಾಗಿಲ್ಲ. ಹೀಗಾಗಿ ಭಾರಿ ಬದಲಾವಣೆ ನಿರೀಕ್ಷಿಸಬಹುದು ಎಂಬ ಸುದ್ದಿ ಬಂದಿದೆ.
ಆದರೆ, ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಇದೆಲ್ಲ ಗಾಳಿ ಸುದ್ದಿ ಎಂದು ಹಾಲಿ ಅಧ್ಯಕ್ಷ ಸುರೇಂದ್ರನ್ ಪ್ರತಿಕ್ರಿಯಿಸಿದ್ದಾರೆ. 2016ರಿಂದ ಬಿಜೆಪಿಯಲ್ಲಿರುವ ಸುರೇಶ್ ಗೋಪಿಗೆ ಸ್ಥಾನ ನೀಡುವ ಬಗ್ಗೆ ಬಗ್ಗೆ ಕೇಂದ್ರ ನಾಯಕರಿಗೂ ಒಲವಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ತಿಕ್ಕಾಟವನ್ನು ಬಗೆಹರಿಸಿಕೊಳ್ಳಬೇಕಿದೆ.

ಕೇಂದ್ರ ನಾಯಕರಿಗೂ ಒಲವಿದೆ
ಈ ಹಿಂದೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕರೂ, ಗೋಪಿ ಅವರು ಬಿಜೆಪಿ ಆಫರ್ ತಿರಸ್ಕರಿಸಿದ್ದರು. ಸ್ಟಾರ್ ಪ್ರಚಾರಕರಾಗಿ ಕಾರ್ಯ ನಿರ್ವಹಿಸಿದ್ದರು. 2016ರಲ್ಲಿ ರಾಜ್ಯಸಭಾ ಸದಸ್ಯರಾದರು. ಲೋಕಸಭಾ ಚುನಾವಣೆಯಲ್ಲಿ ತ್ರಿಸ್ಸೂರ್ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು.
ಸ್ಟಾರ್ ನಟ ಸುರೇಶ್ ಗೋಪಿ ಅವರನ್ನು ತಿಶ್ಶೂರ್ ಅಥವಾ ತಿರುವನಂತಪುರಂ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಬಯಸಿದ್ದರು. ಆದರೆ, ಗೋಪಿ ಕಣಕ್ಕಿಳಿಯಲಿಲ್ಲ.

ಮಲೆಯಾಳಂ ಚಿತ್ರರಂಗದ ಟಾಪ್ ನಟ
ಮಲೆಯಾಳಂ ಚಿತ್ರರಂಗದ ಟಾಪ್ ನಟರಾದ ಮಮ್ಮೂಟಿ, ಮೋಹನ್ ಲಾಲ್, ದಿಲೀಪ್ ಸಮಾನಾಂತರವಾಗಿ ಸುರೇಶ್ ಗೋಪಿ ಕೇರಳದಲ್ಲಿ ಪ್ರಭಾವ ಹೊಂದಿದ್ದಾರೆ. ನಾಯರ್ ಕುಟುಂಬದ ಗೋಪಿ ಅವರು ಈ ಹಿಂದೆ ಬಿಜೆಪಿ ಸೇರಿಸಿಕೊಳ್ಳುವ ಯತ್ನ ಹಲವು ಬಾರಿ ಸಫಲವಾಗಿರಲಿಲ್ಲ. ಆದರೆ, ಮೋದಿ ಅವರನ್ನು ಭೇಟಿ ಮಾಡಿದ ಮೇಲೆ ಅವರ ತಾರಾ ಮೌಲ್ಯ ಹೆಚ್ಚಿತ್ತು. 'ಕೋಟ್ಯಧಿಪತಿ' ಕಾರ್ಯಕ್ರಮದ ಮಲೆಯಾಳಂ ಆವೃತ್ತಿಯ ನಿರೂಪಕರಾಗಿ ಮನೆ ಮಾತಾಗಿದ್ದಾರೆ ಕೂಡಾ. ಕನ್ನಡಿಗರಿಗೆ ನ್ಯೂಡೆಲ್ಲಿ ಚಿತ್ರದ ಮೂಲಕ ಪರಿಚಯ.

ಅಭಿವೃದ್ಧಿ ಪರ ದನಿಯೆತ್ತಿದ್ದ ಗೋಪಿ
ವಿಳಿಂಜಾಮ್ ಬಂದರು ಯೋಜನೆ, ತ್ರಿವೇಂಡ್ರಮ್ ನ ಹೈಕೋರ್ಟ್ ಬೆಂಚ್, ರೈಲ್ವೆ ಜಾಲ ನವೀಕರಣ ಮುಂತಾದ ಅಭಿವೃದ್ಧಿ ಪರ ವಿಷಯಗಳ ಬಗ್ಗೆ ಮೋದಿ ಜತೆ ಗೋಪಿ ಗಂಭೀರವಾದ ಚರ್ಚೆ ನಡೆಸಿದ್ದರು. ಮೊದಲ ಭೇಟಿ ನಂತರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲೂ ಗೋಪಿ ಹಾಜರಿದ್ದರು. ಹೀಗಾಗಿ ಬಿಜೆಪಿ ಪರ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ, ಕೇರಳದಲ್ಲಿ ಮಿತ್ರಪಕ್ಷ ಭಾರತ್ ಧರ್ಮ ಜನ ಸೇನಾ ಪಕ್ಷದ ಮೂಲಕ ಬಿಜೆಪಿ ಪರ ದನಿಯಾಗಿದ್ದರು.

ಕೆ ಸುರೇಂದ್ರನ್ ಸೋಲು
ಇನ್ನೊಂದೆಡೆ, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ ಸುರೇಂದ್ರನ್ ಸ್ಪರ್ಧಿಸಿದ್ದರು. ತಮ್ಮ ಎದುರಾಳಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳಲು ಪ್ರಭಾವ ಬೀರಿ, ಲಂಚ ನೀಡಿದ ಆರೋಪ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮೇಲಿದೆ. ಕಾಸರಗೋಡು ಪೊಲೀಸರು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
2016 ರಲ್ಲಿ ಕೆ ಸುರೇಂದ್ರನ್ ಕೇವಲ 89 ಮತಗಳಿಂದ ಸೋಲು ಕಂಡಿದ್ದರು. ಈ ಬಾರಿ ಕೂಡಾ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದಾರೆ. ತಮ್ಮ ಹೆಸರಿಗೆ ಸಾಮ್ಯತೆ ಇರುವ ಇತರೆ ಸ್ಪರ್ಧಿಗಳಿಗೆ ಆಮಿಷವೊಡ್ಡಿ ಸ್ಪರ್ಧಾಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ ಎಂದು ಇತರೆ ಪಕ್ಷಗಳು ಆರೋಪಿಸಿವೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications