ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಸ್ತಿ ಘೋಷಣೆ
ಆಲ್ ಇಂಡಿಯಾ ತೃಣಮೂಲ ಪಕ್ಷದ ಅಧ್ಯಕ್ಷೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಸ್ತಿ ವಿವರಗಳನ್ನು ಘೋಷಿಸಲಾಗಿದೆ. ಒಟ್ಟು 16.72 ಲಕ್ಷ ರು ಆಸ್ತಿ ಹೊಂದಿದ್ದೇನೆ ಎಂದು ಚುನಾವಣಾ ಆಯೋಗಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿರುವ ಮಮತಾ ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ನಂದಿಗ್ರಾಮದಲ್ಲಿ ಅವರ ಎದುರಾಳಿ ಮಾಜಿ ಸಚಿವ ಸುವೇಂದು ಅಧಿಕಾರಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಪೂರ್ವ ಮೇದಿನಿಪುರದ ನಂದಿಗ್ರಾಮ ಕ್ಷೇತ್ರದಲ್ಲಿ ಏಪ್ರಿಲ್ 1ರಂದು ಮತದಾನ ನಡೆಯಲಿದ್ದು, ಈ ಬಾರಿ ಬಿರುಸಿನ ಹಣಾಹಣಿ ನಿರೀಕ್ಷಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರ ಬರಲಿದೆ.
ಮಮತಾ ಘೋಷಿತ ಆಸ್ತಿ ವಿವರ:
* ತಮ್ಮ ಹೆಸರಿನಲ್ಲಿ ಯಾವುದೇ ಕಾರು, ನಿವೇಶನ ಹೊಂದಿಲ್ಲ. 66 ವರ್ಷ ವಯಸ್ಸಿನ ಮಮತಾ ಅವರು 2016ರಲ್ಲಿ 30.45 ಲಕ್ಷ ರು ಆಸ್ತಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

* 2019-20ನೇ ಸಾಲಿನಲ್ಲಿ ಆದಾಯ ಗಳಿಕೆ 10,34, 370 ರು ನಷ್ಟಿತ್ತು. 69, 255 ರು ನಗದು ಹೊಂದಿದ್ದಾರೆ.
* ಬ್ಯಾಂಕ್ ಬ್ಯಾಲೆನ್ಸ್: 13.53 ಲಕ್ಷ ರು ಇದ್ದು, ಅದರಲ್ಲಿ 1.51 ಲಕ್ಷ ರು ಚುನಾವಣಾ ಖರ್ಚು ವೆಚ್ಚಕ್ಕೆ ಬಳಕೆಯಾಗುತ್ತಿದೆ.
* ಉಳಿತಾಯ: ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ(NSC) ಖಾತೆಯಲ್ಲಿ 18, 940 ರು ಹೊಂದಿದ್ದಾರೆ. 2019-20 ನೇ ಸಾಲಿನಲ್ಲಿ 1.85 ಲಕ್ಷ ರು ಟಿಡಿಎಸ್ ಕಡಿತಗೊಂಡಿದೆ ಎಂದು ಅಫಿಡವಿಟ್ನಲ್ಲಿ ಹೇಳಿದ್ದಾರೆ.
* ಮಮತಾ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್ ದಾಖಲಾಗಿಲ್ಲ. 43,837 ರು ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ.
1997 ರಲ್ಲಿ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಎರಡು ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ಸಚಿವರಾದರು. ಎನ್ಡಿಎ ಹಾಗೂ ಯುಪಿಎ ಎರಡೂ ಮೈತ್ರಿಕೂಟಗಳ ಸರಕಾರಗಳಲ್ಲಿ ಸಚಿವೆಯಾಗಿದ್ದ ಇವರು ನಂದಿಗ್ರಾಮ ಹಾಗೂ ಸಿಂಗೂರ ಹೋರಾಟಗಳಿಂದ ದೇಶಾದ್ಯಂತ ಹೆಸರುವಾಸಿಯಾದರು. 2011 ರಲ್ಲಿ ಪ್ರಥಮ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾದರು. ನಂತರ 2016 ರಲ್ಲಿ ಮತ್ತೂ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟಕ್ಕೇರಿದರು
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications