ಗುಟ್ಕಾ ಉಗಿಯಲು ವಿಮಾನದ ಕಿಟಕಿ ತೆರೆಯುವಂತೆ ಗಗನಸಖಿಗೆ ಹೇಳಿದ ವ್ಯಕ್ತಿ: ವಿಡಿಯೋ ವೈರಲ್- ನೋಡಿ
ಬೆಂಗಳೂರು, ಜನವರಿ 23: ವಿಮಾನಗಳಲ್ಲಿ ಪ್ರಯಾಣಿಕರು ಅಶಿಸ್ತಿನ ವರ್ತನೆಯ ಹಲವಾರು ಘಟನೆಗಳು ವರದಿಯಾದ ಸಮಯದಲ್ಲಿ, ಗುಟ್ಕಾವನ್ನು ಉಗುಳಲು ವಿಮಾನದ ಕಿಟಕಿಯನ್ನು ತೆರೆವಂತೆ ವ್ಯಕ್ತಿಯೊಬ್ಬ ಗಗನಸಖಿಯೊಬ್ಬರಿಗೆ ಕೇಳುವ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯನ್ನು ವಿಕ್ಷೀಸುತ್ತಿದ್ದ ಅನೇಕರು ಬೆಚ್ಚಿಬಿದ್ದಿದ್ದಾರೆ. ಇದು ವೀಡಿಯೊ ಪ್ರಾರಂಭದಲ್ಲಿ ಕಾಣುತ್ತದೆ.
'ನಿಮ್ಮ ಗುಟ್ಕಾ ಪ್ರೇಮಿ ಸ್ನೇಹಿತನನ್ನು ಟ್ಯಾಗ್ ಮಾಡಿ' ಎಂಬ ಶೀರ್ಷಿಕೆಯೊಂದಿಗೆ ಗೋವಿಂದ್ ಶರ್ಮಾ ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಇದನ್ನು ಹಂಚಿಕೊಂಡ ನಂತರ ವೀಡಿಯೊ ವೈರಲ್ ಆಗಿದೆ. ಇಂಡಿಗೋ ವಿಮಾನದಲ್ಲಿ ಈ ತಮಾಷೆಯ ಘಟನೆ ನಡೆದಿದೆ.
ವೀಡಿಯೊದಲ್ಲಿ, ಸೀಟಿನ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರು ತಮ್ಮ ಅಂಗೈಯಲ್ಲಿ ಗುಟ್ಕಾ ಉಜ್ಜುತ್ತಿರುವುದನ್ನು ಕಾಣಬಹುದು. ಅವನು ಇದ್ದಕ್ಕಿದ್ದಂತೆ ತನ್ನ ಬಳಿ ಬರುವ ಗಗನಸಖಿಯನ್ನು ಕರೆಯುತ್ತಾನೆ. 'ನನ್ನನ್ನು ಕ್ಷಮಿಸಿ, ದಯವಿಟ್ಟು ಕಿಡಿಕಿ ತೆಗೆಯುತ್ತೀರಾ, ಗುಟ್ಕಾವನ್ನು ಉಗುಳಬೇಕು' ಎಂದು ಆತ ಹೇಳುವುದನ್ನು ಕೇಳಬಹುದು.

ವ್ಯಕ್ತಿಯ ಮಾತು ಕೇಳಿ ಗಗನಸಖಿ ಹಾಗೂ ಇತರ ಪ್ರಯಾಣಿಕರು ನಕ್ಕಿದ್ದಾರೆ. ವಿಚಿತ್ರವಾದ ವಿನಂತಿಯನ್ನು ಮಾಡಿದ ವ್ಯಕ್ತಿ ಕೂಡ ತಮಾಷೆ ಮಾಡಿದ್ದರಿಂದ ನಗಲು ಪ್ರಾರಂಭಿಸುತ್ತಾನೆ. ಎಲ್ಲರೂ ಅದನ್ನು ತಮಾಷೆಯಾಗಿ ಕಂಡುಕೊಂಡಿದ್ದಾರೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.
ನವೆಂಬರ್ 26 ರಂದು ಏರ್ ಇಂಡಿಯಾದ ಬ್ಯುಸಿನೆಸ್ ವರ್ಗದ ವಿಮಾನದಲ್ಲಿ ತನ್ನ ಮೇಲೆ ಮೂತ್ರ ವಿಸರ್ಜಿಸಿದ್ದಾನೆ ಎಂದು ಮಹಿಳಾ ಪ್ರಯಾಣಿಕರೊಬ್ಬರು ಆರೋಪಿಸಿದ್ದರು. ಇದು ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಈ ವಿಮಾನವು ಅಮೆರಿಕದ ನ್ಯೂಯಾರ್ಕ್ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಬರುತ್ತಿತ್ತು. ಈ ಘಟನೆಯಾದ ಒಂದು ತಿಂಗಳ ಬಳಿಕ ಬೆಳಕಿಗೆ ಬಂದಿತು.
ಏರ್ ಇಂಡಿಯಾ ಸಮೂಹದ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಸಂತ್ರಸ್ತೆ ಪತ್ರ ಬರೆದಿದ್ದರು. ಏರ್ಲೈನ್ನ ಯಾವುದೇ ಕ್ರಮವನ್ನು ಎದುರಿಸದೆ ವ್ಯಕ್ತಿ ಹೊರಟುಹೋದನು ಎಂದು ತಿಳಿಸಿದ್ದರು. ಈ ಬಗ್ಗೆ ಪರಿಶೀಲಿಸಲು ಆಂತರಿಕ ಸಮಿತಿಯನ್ನು ರಚಿಸಲಾಯಿತು. ಈಗ ಆರೋಪಿಗಳಿಗೆ 30 ದಿನಗಳ ಪ್ರಯಾಣವನ್ನು ನಿಷೇಧಿಸಿದ್ದಾರೆ. ಆ ನಂತರ ಪ್ರಕರಣವನ್ನು ಮುಂದಿನ ಕ್ರಮಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ (ಡಿಜಿಸಿಎ) ಕಳುಹಿಸಲಾಯಿತು.

ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್, ವಿಮಾನಯಾನ ಸಂಸ್ಥೆಯು ತನ್ನ ಪ್ರತಿಕ್ರಿಯೆಯನ್ನು ಬೇಗನೇ ನೀಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
'ಅಂತಹ ಅಶಿಸ್ತಿನ ಸ್ವಭಾವದ ಯಾವುದೇ ಘಟನೆಗಳನ್ನು ತಡೆಗಟ್ಟಲು ಅಥವಾ ಪರಿಹರಿಸಲು ನಾವು ಪ್ರತಿ ಪ್ರಕ್ರಿಯೆಯನ್ನು ಪರಿಶೀಲಿಸುತ್ತೇವೆ ಮತ್ತು ಸರಿಪಡಿಸುತ್ತೇವೆ' ಎಂದು ಅವರು ಹೇಳಿದ್ದಾರೆ.
ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಕ್ಯಾಂಪ್ಬೆಲ್ ವಿಲ್ಸನ್ ಸಹ ಈ ಘಟನೆಯನ್ನು ಖಂಡಿಸಿದ್ದರು. ಈ ಬಗ್ಗೆ 'ವಿಷಾದ' ಹಾಗೂ 'ನೋವು' ಇದೆ ಎಂದು ಹೇಳಿದ್ದರು.
ಮಹಿಳೆಯ ಕುಟುಂಬದ ಕೋರಿಕೆಯ ಮೇರೆಗೆ ಏರ್ಲೈನ್ಸ್ ಅಂತಿಮವಾಗಿ ಡಿಸೆಂಬರ್ 28 ರಂದು ಘಟನೆಯ ಬಗ್ಗೆ ಪೊಲೀಸ್ ದೂರು ದಾಖಲಿಸಿದೆ.
-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications