'ತಾನು ನಿರ್ಮಿಸಿದ ರಾಕೆಟ್ ಎಲ್ಲಿಗೆ ತಲುಪಬೇಕು ಅಂತ ದೇವರೇ ನಿರ್ಧರಿಸುತ್ತಾನೆ'

"ಮನುಷ್ಯ ಕೂಡಾ ಒಂದು ರಾಕೆಟ್ ಇದ್ದಂತೆ. ಆದರೆ ಆತ ಮನುಷ್ಯ ನಿರ್ಮಿತ ರಾಕೆಟ್ ಅಲ್ಲ. ದೇವರು ನಿರ್ಮಿಸಿದ ರಾಕೆಟ್. ಹೀಗಾಗಿ ಅದು ಇಂಥಲ್ಲೇ ಹೋಗಿ ತಲುಪಬೇಕು ಅಂತಿಲ್ಲ. ಅದು ಎಲ್ಲಿಗೆ ತಲುಪಬೇಕು ಅಂತ ಮೊದಲೇ ನಿರ್ಧಾರವಾಗಿರುತ್ತದೆ. ಹೀಗಾಗಿ ನೀವು ಕೇಳುತ್ತಿರುವ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ" ಅಂತ ಅವರು ಹೇಳಿದ್ದರು. ಅವರ ಹೆಸರು ಅನಂತ್ ಕುಮಾರ್.

ಅವತ್ತು ನಾವು ದೆಹಲಿಯ ಅವರ ಮನೆಯಲ್ಲಿದ್ದೆವು. ಸುಮಾರು ಹನ್ನೆರಡು ವರ್ಷಗಳ ಹಿಂದಿನ ಮಾತಿದು.
ಆ ಸಂದರ್ಭದಲ್ಲಿ ಕೇಂದ್ರದ ಅಧಿಕಾರ ಸೂತ್ರ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಕೈಲಿತ್ತು. ಅನಂತ್ ಕುಮಾರ್ ಸಂಸದರಾಗಿದ್ದರು.

ದೆಹಲಿಗೆ ಪ್ರವಾಸಕ್ಕೆಂದು ಹೋದಾಗ ವಿಷಯ ತಿಳಿದ ಅನಂತ ಕುಮಾರ್, ವಿಠ್ಢಲಮೂರ್ತಿ, ಮನೆಗೆ ಬಂದು ಹೋಗಿ ಎಂದಿದ್ದರು. ಆಗವರು ದಿಲ್ಲಿಯ ತುಘಲಕ್ ಪ್ರೆಸೆಂಟ್ ರಸ್ತೆಯ ಮನೆಯಲ್ಲಿದ್ದರು ಅಂತ ನೆನಪು.
ಮನೆಗೆ ಹೋದರೆ ಅಡುಗೆ ಮಾಡುವವನನ್ನು ಬಿಟ್ಟರೆ ಯಾರೂ ಇರಲಿಲ್ಲ. ಹೋದ ನಮ್ಮನ್ನು ಅನಂತ ಕುಮಾರ್ ಅವರೇ ವಿಶ್ವಾಸದಿಂದ ಸ್ವಾಗತಿಸಿದರು.

ಆ ಹೊತ್ತಿಗಾಗಲೇ ಕರ್ನಾಟಕದಲ್ಲಿ ಬಿಜೆಪಿ ಅತ್ಯಂತ ದೊಡ್ಡ ಶಕ್ತಿಯಾಗಿ ಬೆಳೆದು ನಿಂತಿತ್ತು. 2004ರ ವಿಧಾನಸಭಾ ಚುನಾವಣೆಯಲ್ಲಿ ಅದು ಗಳಿಸಿದ್ದು ಎಪ್ಪತ್ತೊಂಭತ್ತು ಸೀಟು. ಅವತ್ತು ಜೆಡಿಎಸ್ ಮನಸ್ಸು ಮಾಡಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿತ್ತು. ಅನಂತ ಕುಮಾರ್ ಈ ನಾಡಿನ ಮುಖ್ಯಮಂತ್ರಿಯೋ? ಉಪಮುಖ್ಯಮಂತ್ರಿಯೋ ಆಗುತ್ತಿದ್ದರು. ಅವರದಕ್ಕೆ ಅರ್ಹರೂ ಆಗಿದ್ದರು.

ಸರಕಾರ ರಚಿಸಲು ಕಸರತ್ತು ನಡೆಸಿದ್ದ ಅನಂತ್

ಸರಕಾರ ರಚಿಸಲು ಕಸರತ್ತು ನಡೆಸಿದ್ದ ಅನಂತ್

ಯಾಕೆಂದರೆ 2004ರ ಚುನಾವಣೆಯಲ್ಲಿ ಬಿಜೆಪಿಯನ್ನು ಮುನ್ನಡೆಸಿದವರೇ ಅನಂತ ಕುಮಾರ್. ಆ ಸಂದರ್ಭದಲ್ಲಿ ಬಂಗಾರಪ್ಪ, ರಾಜಶೇಖರ ಮೂರ್ತಿ ಸೇರಿದಂತೆ ಅತಿರಥ-ಮಹಾರಥ ನಾಯಕರನ್ನು ಬಿಜೆಪಿಗೆ ಕರೆದುಕೊಂಡು ಬಂದವರೇ ಅನಂತ ಕುಮಾರ್. ಹಾಗಂತಲೇ ಜೆಡಿಎಸ್ ಜತೆ ಸೇರಿ ಮೈತ್ರಿಕೂಟ ರಚಿಸಲು ಅನಂತ ಕುಮಾರ್ ಕಸರತ್ತು ನಡೆಸಿದರು. ಅರುಣ್ ಜೇಟ್ಲಿ ಅವರೊಂದಿಗೆ ಸೇರಿ ದೇವೇಗೌಡರ ಮಗ ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವರ್ಕೌಟ್ ಆಗಲೇ ಇಲ್ಲ

ಬಿಜೆಪಿ-ಜೆಡಿಎಸ್ ಮೈತ್ರಿ ವರ್ಕೌಟ್ ಆಗಲೇ ಇಲ್ಲ

ಅಂದ ಹಾಗೆ ಈ ಮಾತುಕತೆ ನಡೆದಿದ್ದು ಈ ಸಂಜೆ ಪತ್ರಿಕೆಯ ಮಾಲೀಕರಾದ ಟಿ. ವೆಂಕಟೇಶ್ ಅವರ ಮನೆಯಲ್ಲಿ. ಆದರೆ ಮಾತುಕತೆ ವರ್ಕ್ ಔಟ್ ಆಗಲಿಲ್ಲ. ಮುಂದೆ ಬಿಜೆಪಿಯ ರಾಜ್ಯ ನಾಯಕತ್ವಕ್ಕಾಗಿ ಸಂಘರ್ಷ ನಡೆದಾಗ, ಯಡಿಯೂರಪ್ಪ ಇಲ್ಲಿಗೆ, ಅನಂತ ಕುಮಾರ್ ದಿಲ್ಲಿಗೆ ಎಂದು ಕೇಂದ್ರ ನಾಯಕರು ನಿರ್ಧರಿಸಿದರು. ಅದಾದ ನಂತರ ಅನಂತ ಕುಮಾರ್ ದಿಲ್ಲಿಯ ರಾಜಕಾರಣದಲ್ಲೇ ಸೆಟ್ಲಾದರು. ದಿಲ್ಲಿಗೆ ಹೋದ ಮೇಲೆ ಅವರು ಕರ್ನಾಟಕ ರಾಜಕೀಯದಲ್ಲಿ ಅಷ್ಟು ಸಕ್ರೀಯರಾಗಲಿಲ್ಲ ಮತ್ತು ಹೆಚ್ಚು ತಲೆ ಹಾಕಲೂ ಇಲ್ಲ.

ದೇವರು ತಲುಪಿಸಿದ ಗಮ್ಯಕ್ಕೆ ತಲುಪಿದ ಅನಂತ್

ದೇವರು ತಲುಪಿಸಿದ ಗಮ್ಯಕ್ಕೆ ತಲುಪಿದ ಅನಂತ್

ಆದರೆ ಒಂದು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಆಸೆ ಅವರಿಗಿತ್ತು. ಹಾಗಂತಲೇ ದಿಲ್ಲಿಯ ಅವರ ನಿವಾಸಕ್ಕೆ ಹೋದಾಗ ಈ ಕುರಿತು ನಾನವರನ್ನು ಪ್ರಶ್ನಿಸಿದ್ದೆ. ಅದಕ್ಕವರು : ವಿಠ್ಠಲಮೂರ್ತಿ, ಮನುಷ್ಯ ಎಂದರೆ ದೇವರು ನಿರ್ಮಿಸಿದ ರಾಕೆಟ್. ಮನುಷ್ಯನೇ ನಿರ್ಮಿಸಿದ ರಾಕೆಟ್ ಅನ್ನು ಯಾವ ಗಮ್ಯಕ್ಕೆ ಸೇರಿಸಬೇಕು ಎಂದು ನಿರ್ಧರಿಸಲಾಗಿರುತ್ತದೆ. ಆದರೆ ದೇವರು ನಿರ್ಮಿಸಿದ ರಾಕೆಟ್ ನ ಗಮ್ಯವನ್ನು ದೇವರೇ ನಿರ್ಧರಿಸಿರುತ್ತಾನೆ. ಹೀಗಾಗಿ ನಾವು ಇಂಥಲ್ಲಿಗೇ ತಲುಪುತ್ತೇವೆ ಎಂದು ಹೇಳಲಾಗದು. ಬದಲಿಗೆ ಆತ ತಲುಪಿಸಿದಲ್ಲಿಗೆ ಹೋಗಬೇಕು ಅಂತ ಹೇಳಿ ಮೌನವಾದರು.

ಅವರ ಸಾವು ಇಡೀ ದೇಶಕ್ಕಾದ ನಷ್ಟ

ಅವರ ಸಾವು ಇಡೀ ದೇಶಕ್ಕಾದ ನಷ್ಟ

ಮುಂದೆ ನಡೆದ ಹಲ ಮಾತುಕತೆಗಳ ವಿವರ ಈಗ ಅಪ್ರಸ್ತುತ. ನಂತರ ಹಲ ಬಾರಿ ಅನಂತ ಕುಮಾರ್ ಅವರ ಜತೆ ಮಾತನಾಡಿಸಿದ ಆತ್ಮೀಯ ನೆನಪುಗಳಿವೆ. ರಾಜಕೀಯ ಬದುಕಿನ ತಮ್ಮ ಅವಿಸ್ಮರಣೀಯ ಹೋರಾಟಗಳ ನೆನಪುಗಳನ್ನು ಹಂಚಿಕೊಂಡ ವಿವರಗಳಿವೆ. ಅಂತಹ ಅನಂತ ಕುಮಾರ್ ಮತ್ತೆ ಕೇಂದ್ರದಲ್ಲಿ ಸಚಿವರಾದರು. ಈಗ ಇದ್ದಕ್ಕಿದ್ದಂತೆ ತೀರಿಕೊಂಡಿದ್ದಾರೆ. ದೇವರು ತಲುಪಿಸಿದ ಗಮ್ಯಕ್ಕೆ ತಲುಪಿದ್ದಾರೆ. ಅವರ ಸಾವು ರಾಜ್ಯ ಮಾತ್ರವಲ್ಲ, ಇಡೀ ದೇಶಕ್ಕಾದ ನಷ್ಟ. ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಓಡೋಡಿ ಬರುತ್ತಿದ್ದ ಅನಂತ ಕುಮಾರ್ ಇತ್ತೀಚಿನ ದಿನಗಳಲ್ಲಿ ಕಾವೇರಿ ವಿವಾದ ಭುಗಿಲೆದ್ದಾಗ ರಾಜ್ಯದ ಪಾಲಿಗೆ ಆಪತ್ಬಾಂಧವರಂತೆ ದಕ್ಕಿದರು. ಅಂತವರು ಇನ್ನಿಲ್ಲವೆಂದರೆ ನಂಬುವುದು ಕಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+