Low BP & Heart Attack: ಕಡಿಮೆ ರಕ್ತದೊತ್ತಡ ಲಕ್ಷಣಗಳು, ನಿವಾರಣೆ
ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಡಿಮೆ ರಕ್ತದೊತ್ತಡ (Low BP)ದ ಪರಿಣಾಮ ಹೃದಯಾಘಾತ ಆಗಿದೆ ಎಂದು ಪ್ರಾಥಮಿಕ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆ ಸ್ಪಷ್ಟ ಮಾಹಿತಿ ಸಿಗಲಿದೆ. ಕಡಿಮೆ ರಕ್ತದೊತ್ತಡ ಹೃದಯಾಘಾತಕ್ಕೆ ಕಾರಣವಾಗುತ್ತಾ? ಈ ಬಗ್ಗೆ ವೈದ್ಯರು ಹೇಳೋದೇನು? ಲೋ ಬಿಪಿ ನಿಯಂತ್ರಣ ವಿಧಾನದ ಬಗ್ಗೆ ಮಾಹಿತಿ ಇಲ್ಲಿದೆ.
ಆರೋಗ್ಯವಂತ ಪುರುಷ ಹಾಗೂ ಮಹಿಳೆಯರಲ್ಲಿ ರಕ್ತದ ಒತ್ತಡವು 120/80 ಮಿಲಿಮೀಟರ್ ಇರುತ್ತದೆ. ಇದು ವ್ಯಕ್ತಿಯಿಂದ ವ್ಯಕ್ತಿಗೆ ಅಲ್ಪ ಬದಲಾವಣೆ ಇರುತ್ತದೆ. ಆದರೆ ರಕ್ತದ ಒತ್ತಡವು 90/60 ಗಿಂತಲೂ ಕಡಿಮೆಯಾದಾಗ ಅದನ್ನು ಕಡಿಮೆ ರಕ್ತದ ಒತ್ತಡ ಎನ್ನುತ್ತೇವೆ.

ಕಡಿಮೆ ರಕ್ತದೊತ್ತಡ (Low BP) ಸಾಮಾನ್ಯವಾಗಿ ಯಾವುದೇ ರೋಗ ಲಕ್ಷಣ ಹೊಂದಿರುವುದಿಲ್ಲ. ಇದು ಎಷ್ಟು ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುವುದು ಅಸಾಧ್ಯ. 50ನೇ ವಯಸ್ಸಿನ ನಂತರ ಶೇಕಡಾ 5 ರಷ್ಟು ಮಂದಿ ಕಡಿಮೆ ರಕ್ತದೊತ್ತಡದ ಸಮಸ್ಯೆ ಹೊಂದಿರುತ್ತಾರೆ, 70 ವರ್ಷದ ಬಳಿಕ ಶೇಕಡಾ 30ರಷ್ಟು ಮಂದಿಯಲ್ಲಿ ಇದು ಕಾಣಿಸಿಕೊಳ್ಳುತ್ತದೆ ಎಂದು ಅಧ್ಯಯನ ತಿಳಿಸಿದೆ.
ಆದರೂ ಇಂದಿನ ಕಾಲದಲ್ಲಿ ಆಹಾರ ಕ್ರಮ, ಒತ್ತಡದ ಜೀವನ ಶೈಲಿಯಿಂದ ಕಡಿಮೆ ಯುವ ಜನತೆಯಲ್ಲೂ ಕಡಿಮೆ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಇದನ್ನು ನಿರ್ಲಕ್ಷಿಸಿದರೆ ಹೃದಯಾಘಾತ ಆಗುವ ಸಾಧ್ಯತೆ ಕೂಡ ಹೆಚ್ಚಾಗಿದೆ. "ರಕ್ತದೊತ್ತಡದ ಮಟ್ಟವು ತುಂಬಾ ಕಡಿಮೆಯಾದರೆ, ಪ್ರಮುಖ ಅಂಗಗಳು ರಕ್ತವನ್ನು ತ್ವರಿತವಾಗಿ ಸ್ವೀಕರಿಸುವುದಿಲ್ಲ, ಮತ್ತು ಆಮ್ಲಜನಕವನ್ನು ಒಳಗೊಂಡಂತೆ ಪ್ರಮುಖ ಪೋಷಕಾಂಶಗಳನ್ನು ಕಳೆದುಕೊಳ್ಳುತ್ತದೆ" ಇದರಿಂದ ಆಘಾತ, ಕೋಮಾ ಮತ್ತು ಸಾವಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ.
ಕಡಿಮೆ ರಕ್ತದೊತ್ತಡದ ಲಕ್ಷಣಗಳು
ತಲೆ ತಿರುಗುವುದು
ಮೂರ್ಛೆ ಹೋಗುವುದು
ವಾಕರಿಕೆ ಅಥವಾ ವಾಂತಿ
ಅಸ್ಪಷ್ಟ ದೃಷ್ಟಿ
ಆಯಾಸ ಅಥವಾ ದೌರ್ಬಲ್ಯ
ವೇಗವಾಗಿ ಉಸಿರಾಡುವುದು
ಇದು ಕಡಿಮೆ ರಕ್ತದೊತ್ತಡದ ಸಾಮಾನ್ಯ ಲಕ್ಷಣಗಳಾಗಿವೆ. ಇದನ್ನು ನೀವು ನಿರ್ಲಕ್ಷ್ಯ ಮಾಡಿದಲ್ಲಿ ಮುಂದೆ ಸಮಸ್ಯೆ ಗಂಭೀರವಾಗುವ ಅಪಾಯ ಇದೆ.
ಹೈಪೊಟೆನ್ಷನ್ (Low BP) ಚಿಕಿತ್ಸೆ ಏನು?
"ಸಾಮಾನ್ಯಕ್ಕಿಂತ ಕಡಿಮೆಯಿರುವ [ರಕ್ತದೊತ್ತಡ] ಸಂಖ್ಯೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೆ ಚಿಕಿತ್ಸೆಯ ಅಗತ್ಯವಿಲ್ಲ" ಎಂದು ವೈದ್ಯರು ಹೇಳುತ್ತಾರೆ. "ಕಡಿಮೆ ರಕ್ತದೊತ್ತಡಕ್ಕೆ ಸಂಬಂಧಿಸಿದ ರೋಗಲಕ್ಷಣಗಳು ಇದ್ದಲ್ಲಿ ಅಥವಾ ಕಡಿಮೆ ರಕ್ತದೊತ್ತಡವು ಔಷಧಿಗಳ ಮಿತಿಮೀರಿದ, ವ್ಯವಸ್ಥಿತ ಸೋಂಕು, ಆಘಾತ ಅಥವಾ ದೇಹದ ಅಂಗ ವೈಫಲ್ಯದ ಪರಿಣಾಮವಾಗಿದ್ದರೆ ಚಿಕಿತ್ಸೆಯ ಅಗತ್ಯವಿದೆ" ಎನ್ನಲಾಗಿದೆ.
ಕಡಿಮೆ ರಕ್ತದೊತ್ತಡಕ್ಕೆ ಚಿಕಿತ್ಸೆಗಳು:
ಹೆಚ್ಚು ನೀರು ಕುಡಿಯುವುದು
ನೀರಿನ ಅಂಶ ಹೆಚ್ಚಿರುವ ದ್ರವ, ಆಹಾರ ಸೇವಿಸುವುದು. ದೇಹ ನಿರ್ಜಲೀಕರಣ ಆಗುವುದನ್ನು ತಪ್ಪಿಸಬೇಕು.
ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದು.
ಚೆನ್ನಾಗಿ ನಿದ್ದೆ ಮಾಡುವುದು.
ರಕ್ತದೊತ್ತಡ ಹೆಚ್ಚಿಸಲು ಔಷಧಿ ತೆಗೆದುಕೊಳ್ಳುವುದು
ರಕ್ತಹೀನತೆ ಅಥವಾ ಥೈರಾಯ್ಡ್ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಪಡೆಯುವುದು
ಕಂಪ್ರೆಷನ್ ಸಾಕ್ಸ್ ಅಥವಾ ಸ್ಟಾಕಿಂಗ್ಸ್ ಧರಿಸುವುದು
ಮಸಾಲೆ ಹೆಚ್ಚಿರುವ ಆಹಾರ ಸೇವನೆ ಕಡಿಮೆ ಮಾಡುವುದು.
ಪದೇ ಪದೇ ರಕ್ತದೊತ್ತಡ ಆದಾಗ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications