Manipur K News India Exit Poll 2022: ಬಿಜೆಪಿ ಮತ್ತೆ ಅಧಿಕಾರ
ಕೊರೊನಾ ಸಾಂಕ್ರಾಮಿಕದ ನಡುವೆ ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಪ್ರಕ್ರಿಯೆ ಮಾರ್ಚ್ 7ರಂದು ಮುಕ್ತಾಯ ಕಂಡಿದೆ. ಐದು ರಾಜ್ಯಗಳ ಪೈಕಿ ಮಣಿಪುರದ 60 ವಿಧಾನಸಭೆ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಸಲಾಯಿತು. ಮೊದಲ ಹಂತದಲ್ಲಿ ಶೇ 78.03ರಷ್ಟು ಶೇಕಡಾವಾರು ಮತದಾನ ಹಾಗೂ ಎರಡನೇ ಹಂತದಲ್ಲಿ 78.03ರಷ್ಟು ಶೇಕಡಾವಾರು ಮತದಾನ ದಾಖಲಾಗಿದೆ. ಮಾರ್ಚ್ 7ರಂದು ಸಂಜೆ ವೇಳೆ ಅನೇಕ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಟಿಸುತ್ತಿವೆ. ಇಲ್ಲಿ ಕೆ ನ್ಯೂಸ್ ಇಂಡಿಯಾ ಹಾಗೂ ಹೈದರಾಬಾದ್ ಮೂಲದ ಪೀಪಲ್ ಪಲ್ಸ್ ಸಂಸ್ಥೆ ನೀಡಿರುವ ವರದಿ ವಿವರವಿದೆ. ಕೆ ನ್ಯೂಸ್ ಇಂಡಿಯಾ ಸಮೀಕ್ಷೆ ಫಲಿತಾಂಶದಂತೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಮತ್ತೆ ಅಧಿಕಾರ ಗದ್ದುಗೆ ಏರಲಿದೆ.
ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಸಲಾಗಿದೆ. ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಸಲಾಗಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

2017 ರಲ್ಲಿ ಮಣಿಪುರದಲ್ಲಿ ಬಿಜೆಪಿ
2017 ರಲ್ಲಿ ಮಣಿಪುರದಲ್ಲಿ 60 ಸ್ಥಾನ(31 ಮ್ಯಾಜಿಕ್ ನಂಬರ್) ಗಳ ಪೈಕಿ ಬಿಜೆಪಿಯು ಒಟ್ಟು 21 ವಿಧಾನಸಭೆ ಸ್ಥಾನಗಳೊಂದಿಗೆ ಸರ್ಕಾರವನ್ನು ನಡೆಸುತ್ತಿದೆ. ಈಗ 40 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿಯನ್ನು ಮಣಿಪುರ ಬಿಜೆಪಿಯು ಹೊಂದಿದೆ. ಕಳೆದ ಚುನಾವಣೆಯಲ್ಲಿ 28 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದರೂ ಕೂಡ ಬಿಜೆಪಿ ಎನ್ಪಿಪಿ ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್) ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚನೆ ಮಾಡಿದೆ.

ಬಿಜೆಪಿಗೆ ಹೆಚ್ಚು ಸ್ಥಾನ
ಪಕ್ಷ- ಸ್ಥಾನಗಳು
ಬಿಜೆಪಿ: 25- 29
ಕಾಂಗ್ರೆಸ್: 17-21
ಎನ್ಪಿಪಿ: 7-11
ಎನ್ಪಿಎಫ್: 3-5
ಇತರೆ: 2-4
60 ಸ್ಥಾನಗಳ ಪೈಕಿ ಬಿಜೆಪಿಗೆ ಹೆಚ್ಚು ಸ್ಥಾನ ಸುಮಾರು 25 ರಿಂದ 29 ಲಭಿಸಿದರೂ ಅಧಿಕಾರ ಗದ್ದುಗೇರಲು ಸಾಧ್ಯವಾಗುವುದಿಲ್ಲ. ಮ್ಯಾಜಿಕ್ ನಂಬರ್ 31 ದಾಟಲು ಎರಡು ಸ್ಥಾನದ ಕೊರತೆ ಎದುರಿಸಲಿದ್ದು, ಇತರೆ ಪಕ್ಷಗಳ ನೆರವು ಅತ್ಯಗತ್ಯ ಎಂದು ಸಮೀಕ್ಷೆ ಹೇಳಿದೆ.

ಶೇಕಡಾವಾರು ಫಲಿತಾಂಶ/ ಸಿಎಂ ಸ್ಥಾನಕ್ಕೆ ಯಾರು?
ಕೆ ನ್ಯೂಸ್ ಇಂಡಿಯಾ ಪೀಪಲ್ ಪಲ್ಸ್ ಶೇಕಡಾವಾರು ಫಲಿತಾಂಶ: (+/- 5% margin of error)
ಪಕ್ಷ- 2022 %ಫಲಿತಾಂಶ (2017 %ಫಲಿತಾಂಶ)
ಬಿಜೆಪಿ: 33% (2017ರಲ್ಲಿ36.3%)
ಕಾಂಗ್ರೆಸ್: 29% (35.5%)
ಎನ್ಪಿಪಿ: 11% (5.1%)
ಇತರೆ: 27% (-)
+++
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಸೂಕ್ತ?
ಎನ್ ಬಿರೇನ್ ಸಿಂಗ್: 34%
ಓಕ್ರಾಮ್ ಐಬೋಬಿ: 24%
ಯುಮ್ನಾಮ್ ಜೋಯ್ ಕುಮಾರ್ ಸಿಂಗ್: 13%
ಗಯಿಖೆಂಗಾಮ್: 11%
ಇತರೆ: 18%

ರಿಪಬ್ಲಿಕ್-ಪಿ ಮಾರ್ಕ್ ಸಮೀಕ್ಷೆ
ರಿಪಬ್ಲಿಕ್-ಪಿ ಮಾರ್ಕ್ ಸಮೀಕ್ಷೆ ಪ್ರಕಾರ ರಿಪಬ್ಲಿಕ್-ಪಿ ಮಾರ್ಕ್ ಸಮೀಕ್ಷೆ ಪ್ರಕಾರ, ಬಿಜೆಪಿಗೆ 31 ರಿಂದ 37 ಸ್ಥಾನಗಳು ಸಿಗುತ್ತವೆ. ಆಡಳಿತ ಪಕ್ಷಕ್ಕೆ ಕಠಿಣ ಪೈಪೋಟಿ ನೀಡದ ಕಾಂಗ್ರೆಸ್ 13-19 ಸ್ಥಾನಗಳನ್ನು ಪಡೆಯಬಹುದು. ಇದರ ಹೊರತಾಗಿ ಎನ್ಪಿಪಿ ಪಕ್ಷವು 3 ರಿಂದ 9 ಸ್ಥಾನ, ಎನ್ಪಿಎಫ್ ಪಕ್ಷವು 1 ರಿಂದ 5 ಸ್ಥಾನ, ಇತರರು 0 ರಿಂದ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಮಣಿಪುರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ.
+++
ಮಣಿಪುರ ಚುನಾವಣೆಯಲ್ಲಿ ಶೇ.33 ರಷ್ಟು ಮತಗಳನ್ನು ಪಡೆಯುವ ಮೂಲಕ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಅಭ್ಯರ್ಥಿಗೆ ಅತ್ಯಂತ ಜನಪ್ರಿಯ ಆಯ್ಕೆ ಎಂದು ಜನತೆ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಶೇ 19 ರಷ್ಟು ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದರೆ, ಮತ್ತೊಬ್ಬ ಕಾಂಗ್ರೆಸ್ ನಾಯಕ ಎನ್ ಲೋಕೇನ್ ಸಿಂಗ್ ಅವರು ಶೇ 12 ರೊಂದಿಗೆ ಮೂರನೇ ಆಯ್ಕೆಯಾಗಿದ್ದಾರೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ.
+++
Zee News-DesignBoxed ಪ್ರಕಾರ, ಬಿಜೆಪಿ 33-37 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 13-17 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, NPF 4-6 ಸ್ಥಾನಗಳನ್ನು ಮತ್ತು NPP ಕೇವಲ 2-4 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications