ಭೂಮಿಗಪ್ಪಳಿಸಲು ಸಜ್ಜಾಗಿದೆ ಸೌರ ಚಂಡಮಾರುತ; ಏನು ಪರಿಣಾಮ ಕಾದಿದೆ?
ಬಲಿಷ್ಠವಾದ ಸೌರ ಚಂಡಮಾರುತವು ಭೂಮಿಗೆ ಅತಿ ಶೀಘ್ರವೇ ಅಪ್ಪಳಿಸಲಿದೆ. ಚಂಡಮಾರುತವು 1.6 ದಶಲಕ್ಷ ಕಿಲೋ ಮೀಟರ್ ವೇಗದಲ್ಲಿ ಭೂಮಿ ಸಮೀಪಿಸುತ್ತಿದೆ ಎಂದು ನಾಸಾ ತಿಳಿಸಿದೆ.
ಸೂರ್ಯನಲ್ಲಿ ಸೃಷ್ಟಿಯಾಗುವ ಈ ಚಂಡಮಾರುತವು ಭೂಮಿಯ ಕಾಂತಕ್ಷೇತ್ರದ ಪ್ರಾಬಲ್ಯವಿರುವ ಬಾಹ್ಯಾಕಾಶ ಪ್ರದೇಶದ ಮೇಲೆ ಪರಿಣಾಮ ಬೀರಲಿದೆ. ಇದು ಸೋಮವಾರ, ಅಂದರೆ ಜುಲೈ 12ಗೆ ಅಪ್ಪಳಿಸಬಹುದು ಎಂದು ಅಂದಾಜಿಸಿದೆ. ಈ ಸಮಯದಲ್ಲಿ ಸಂವಹನ ವ್ಯವಸ್ಥೆ, ಎಂದರೆ ಜಿಪಿಎಸ್ ಸಿಗ್ನಲ್ಗಳ ಮೇಲೆ ಪರಿಣಾಮ ಬೀರಬಹುದು ಎಂದು ನಾಸಾ ಹೇಳಿದೆ. ಈ ಸೌರ ಬಿರುಗಾಳಿ ಉಪಗ್ರಹ ಸಂಕೇತಗಳನ್ನು ಅಡ್ಡಿಪಡಿಸಬಹುದು ಎಂದು ನಾಸಾ ಹೇಳಿದೆ. ಮುಂದೆ ಓದಿ...

ಏನಿದು ಸೌರ ಚಂಡಮಾರುತ?
ಭೂಮಿಯ ಕಾಂತಕ್ಷೇತ್ರವು ಸೂರ್ಯನಿಂದ ಹೊರಹೊಮ್ಮುವ ಅಪಾಯಕಾರಿ ಕಿರಣಗಳಿಂದ ಮಾನವನನ್ನು ರಕ್ಷಿಸುತ್ತದೆ. ಈ ಕಿರಣಗಳು ಹೆಚ್ಚಿನ ವೇಗದಲ್ಲಿ ಭೂಮಿಯೆಡೆ ಬಂದಾಗ ಕಾಂತೀಯ ಮೇಲ್ಮೈಗೆ ಡಿಕ್ಕಿ ಹೊಡೆಯುತ್ತವೆ. ನಂತರ ಈ ಸೌರ ಮಾರುತದ ಕಣಗಳು ಧ್ರುವಗಳಿಗೆ ಚಲಿಸುತ್ತವೆ. ಇದರಿಂದ ಭೂಮಿಯ ಮೇಲ್ಮೈನಲ್ಲಿ ಸೌರ ಚಂಡಮಾರುತ ಸಂಭವಿಸುತ್ತದೆ. ಇದರ ಪ್ರಭಾವ 12 ಗಂಟೆಗಳ ಕಾಲ ಉಳಿಯಬಹುದು. ಕೆಲ ದಿನಗಳ ನಂತರ ಈ ಮೇಲ್ಮೈ ಚೇತರಿಸಿಕೊಳ್ಳುತ್ತದೆ.

ಸೌರ ಚಂಡಮಾರುತದ ಪ್ರಭಾವವೇನು?
ಸೌರ ಚಂಡಮಾರುತದ ಸಮಯದಲ್ಲಿ ಭೂಮಿಯ ಮೇಲ್ಮೈನಲ್ಲಿ ಶಾಖದಿಂದಾಗಿ ವಿದ್ಯುತ್ ಪ್ರವಾಹ ಹೆಚ್ಚಿರುತ್ತದೆ. ಹೀಗಾಗಿ ಉಪಗ್ರಹಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಜಿಪಿಎಸ್ ನೇವಿಗೇಶನ್, ಮೊಬೈಲ ಫೋನ್ ಸಿಗ್ನಲ್ ಹಾಗೂ ಸ್ಯಾಟಲೈಟ್ ಟಿವಿಯಲ್ಲಿ ಸಮಸ್ಯೆಗೆ ಕಾರಣವಾಗುತ್ತದೆ. ವಿದ್ಯುತ್ ಲೈನ್ಗಳಲ್ಲಿ ಪ್ರವಾಹ ಅಧಿಕವಾಗಿ ಟ್ರಾನ್ಸ್ಫಾರ್ಮರ್ಗಳು ಸ್ಫೋಟಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಉತ್ತರ, ದಕ್ಷಿಣ ಧ್ರುವದಲ್ಲಿ ಸುಂದರ ನೋಟ
"ಈ ಸೌರ ಚಂಡಮಾರುತ ಸಂಭವಿಸುವ ಸಮಯದಲ್ಲಿ ಉತ್ತರ ಅಥವಾ ದಕ್ಷಿಣ ಧ್ರುವದಲ್ಲಿ ವಾಸಿಸುವ ಜನರಿಗೆ ಸುಂದರವಾದ ನೋಟ ಸಿಗಬಹುದಾಗಿದೆ. ಉತ್ತರ ಅಥವಾ ದಕ್ಷಿಣ ಧ್ರುವದಲ್ಲಿ ವಾಸಿಸುವ ಜನರು ರಾತ್ರಿ ಸಮಯದಲ್ಲಿ ಈ ಬೆಳಕನ್ನು ನೋಡಲು ಸಾಧ್ಯವಾಗಲಿದೆ" ಎಂದು ಸ್ಪೇಸ್ ವೆದರ್ ಉಲ್ಲೇಖಿಸಿದೆ.

ಭೂಕಾಂತೀಯ ಚಂಡಮಾರುತ ಎನ್ನಬಹುದು
ಸೌರ ಜ್ವಾಲೆಯು ಸೂರ್ಯನ ವಾತಾವರಣದಲ್ಲಿ ಉಂಟಾಗುವ ಬೃಹತ್ ಸ್ಫೋಟವಾಗಿದ್ದು, ಇದು ಸೂರ್ಯನ ಕಾಂತಕ್ಷೇತ್ರದ ರೇಖೆಗಳ ಮರುಸಂಘಟನೆಯಿಂದ ಉಂಟಾಗುತ್ತದೆ. ಸೂರ್ಯನಲ್ಲಿ ಉಂಟಾಗುವ ಈ ಅಡಚಣೆ ಪರಿಣಾಮ ಭೂಮಿ ಮೇಲೆಯೂ ಗೋಚರಿಸುತ್ತದೆ. ಇದನ್ನು ಭೂಕಾಂತೀಯ ಚಂಡಮಾರುತ ಎಂದೂ ಕರೆಯಲಾಗುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications