ಮಾತೃಭೂಮಿ-ಸಿ ವೋಟರ್ ಸಮೀಕ್ಷೆ: ಕೇರಳದಲ್ಲಿ ಮತ್ತೆ ಪಿಣರಾಯಿ 'ವಿಜಯ'ನ್
ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್ಡಿಎಫ್) ಮೈತ್ರಿಕೂಟ ಮತ್ತು ಪ್ರಮುಖ ವಿರೋಧಪಕ್ಷ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಡುವೆ ತೀವ್ರ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇನ್ನು ಕೇರಳದಲ್ಲಿ ತನ್ನ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ ಒಂದಷ್ಟು ಮತಗಳನ್ನು ಪಡೆದುಕೊಳ್ಳುವ ಹೋರಾಟದಲ್ಲಿದೆ.
ಮಾತೃಭೂಮಿ ಸಿ-ವೋಟರ್ ಸಮೀಕ್ಷೆ ಶುಕ್ರವಾರ ಪ್ರಕಟಗೊಂಡಿದ್ದು, ಎಡಪಕ್ಷಗಳ ಮೈತ್ರಿಕೂಟ 75-83 ಸೀಟುಗಳನ್ನು ಪಡೆದು ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಹೇಳಿದೆ. ಹೀಗಾಗಿ ಪಿಣರಾಯಿ ವಿಜಯನ್ ಅವರ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿದೆ.
ಚುನಾವಣಾಪೂರ್ವ ಸಮೀಕ್ಷೆಯ ಪ್ರಕಾರ, ಎಲ್ಡಿಎಫ್ 75-83 ಸೀಟುಗಳನ್ನು ಪಡೆದುಕೊಳ್ಳಲಿದೆ. ಅದರ ಪ್ರಮುಖ ವಿರೋಧಪಕ್ಷದ ಯುಡಿಎಫ್ 56-64 ಸೀಟುಗಳಲ್ಲಿ ಗೆಲ್ಲಲಿದೆ. ಇನ್ನು ಎನ್ಡಿಎ 0-2 ಸೀಟುಗಳನ್ನು ಪಡೆಯಬಹುದು. ಸಮೀಕ್ಷೆ ಪ್ರಕಾರ ಯುಡಿಎಫ್ 60, ಎಲ್ಡಿಎಫ್ 79 ಮತ್ತು ಎನ್ಡಿಎ 1 ಸರಾಸರಿ ಸಂಖ್ಯೆಗಳನ್ನು ಪಡೆದುಕೊಳ್ಳಲಿವೆ. ಎಲ್ಡಿಎಫ್ ಶೇ 40.9ರಷ್ಟು ಮತಗಳನ್ನು ಪಡೆದರೆ, ಯುಡಿಎಫ್ ಶೇ 37.9 ಮತ್ತು ಎನ್ಡಿಎ ಶೇ 16.6ರಷ್ಟು ಮತಗಳನ್ನು ಪಡೆಯಲಿದೆ.

ಸರ್ಕಾರದ ಬಗ್ಗೆ ಜನರ ಅಭಿಪ್ರಾಯ
ಶೇ 40.5ರಷ್ಟು ಜನರು ಎಡ ಸರ್ಕಾರದ ವಿರುದ್ಧ ಅಭಿಪ್ರಾಯ ಮಂಡಿಸಿದ್ದು, ಬದಲಾವಣೆ ಬಯಸಿದ್ದಾರೆ. ಇನ್ನು ಶೇ 27.6ರಷ್ಟು ಜನರು ಎಲ್ಡಿಎಫ್ ವಿರುದ್ಧ ಅಸಮಾಧಾನ ಹೊಂದಿದ್ದರೂ, ಆ ಸರ್ಕಾರವೇ ಆಡಳಿತದಲ್ಲಿ ಇರುವುದು ಉತ್ತಮ ಎಂದಿದ್ದಾರೆ. ಇನ್ನು ಶೇ 31.9ರಷ್ಟು ಜನರು ಎಲ್ಡಿಎಫ್ ಪರ ಒಲವು ಹೊಂದಿದ್ದು, ಇದೇ ಸರ್ಕಾರವನ್ನು ಮತ್ತೆ ಅಧಿಕಾರದಲ್ಲಿ ನೋಡಲು ಬಯಸಿದ್ದಾರೆ.

ವಿರೋಧಪಕ್ಷದ ಕಾರ್ಯವೈಖರಿ
ಶೇ 42.6ರಷ್ಟು ಜನರು ವಿರೋಧಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಶೇ 34.4ರಷ್ಟು ಜನರು ಯುಡಿಎಫ್ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ್ದಾರೆ. ಇನ್ನು ಶೇ 20.1ರಷ್ಟು ಜನರಿಗೆ ವಿಪಕ್ಷ ಸಹಜವಾಗಿದೆ ಎಂಬ ಭಾವನೆ ಮೂಡಿದೆ. ಉಳಿದ ಶೇ 2.9 ಮಂದಿ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಪ್ರಮುಖ ಸಮಸ್ಯೆ ಯಾವುದು?
ಶೇ 41.8- ನಿರುದ್ಯೋಗ
ಶೇ 10.4- ಭ್ರಷ್ಟಾಚಾರ
ಶೇ 4.8- ಕಾನೂನು ಮತ್ತು ಸುವ್ಯವಸ್ಥೆ

ಮತಗಳ ಮೇಲೆ ಪ್ರಭಾವ ಬೀರುವ ಅಂಶಗಳು
ಶೇ 25.2- ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣ
ಶೇ 20.2- ಶಬರಿಮಲೆ ದೇವಸ್ಥಾನ ವಿವಾದ
ಶೇ 13- ಕೋವಿಡ್ ನಿಯಂತ್ರಣ
ಶೇ 8- ಪ್ರವಾಹ ಪರಿಹಾರ ನಿಧಿ
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications