Maha Kumbh Mela 2025: ಮಾಘ ಪೂರ್ಣಿಮೆ ಅಂಗವಾಗಿ ಭಕ್ತರಿಂದ ತುಂಬಿ ತುಳುಕಾಡಿದ ಪ್ರಯಾಗ್ರಾಜ್
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತರ ದಂಡು ಸಾಗರದಂತೆ ಹರಿದುಬರುತ್ತಿದೆ. ಇಂದು ಮಾಘ ಪೌರ್ಣಮಿ ಹಿನ್ನೆಲೆ ಇಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪವಿತ್ರ ಸ್ನಾನ ಮಾಡಿದ್ದಾರೆ. ಮಹಾಕುಂಭ 2025ರ ಪವಿತ್ರ ಸ್ನಾನದ ದಿನಗಳಲ್ಲಿ ಒಂದಾದ ಮಾಘ ಪೂರ್ಣಿಮೆಯಾದ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಯಾಗರಾಜ್ನ ತ್ರಿವೇಣಿ ಸಂಗಮದಲ್ಲಿ ಬರೋಬ್ಬರಿ 10 ಮಿಲಿಯನ್ ಯಾತ್ರಿಕರು ಈಗಾಗಲೇ ಪವಿತ್ರ ಸ್ನಾನ ಮಾಡಿದ್ದಾರೆ.
ಮಾಘ ಪೂರ್ಣಿಮೆಯ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವ ಭಕ್ತರನ್ನು ಹೂವಿನ ದಳಗಳ ಪುಷ್ಪ ವರ್ಷದ ಮೂಲಕ ಸ್ವಾಗತಿಸಲಾಯಿತು. ಇಲ್ಲಿಯವರೆಗೆ ಸುಮಾರು 48.83 ಮಿಲಿಯನ್ ಭಕ್ತರು ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಈ ಪ್ರದೇಶದಲ್ಲಿ ವಾಸಿಸುವ ಕಲ್ಪವಾಸಿಗಳ ಸಂಖ್ಯೆಯೇ 10 ಮಿಲಿಯನ್ ಮೀರಿದೆ ಎನ್ನಲಾಗಿದೆ.

ಮಾಘ ಪೂರ್ಣಿಮೆ ಸ್ನಾನದ ಶುಭ ಸಂದರ್ಭದಲ್ಲಿ ಎಲ್ಲ ಭಕ್ತರು, ಸಂತರು ಮತ್ತು ಧಾರ್ಮಿಕ ಮುಖಂಡರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶುಭಾಶಯಗಳನ್ನು ತಿಳಿಸಿದ್ದಾರೆ. "2025ರ ಮಹಾಕುಂಭದ ಪ್ರಯಾಗ್ರಾಜ್ನಲ್ಲಿ ಪವಿತ್ರ ತ್ರಿವೇಣಿಯಲ್ಲಿ ಪವಿತ್ರ ಸ್ನಾನಕ್ಕೆ ಬಂದ ಎಲ್ಲಾ ಪೂಜ್ಯ ಸಂತರು, ಧಾರ್ಮಿಕ ಮುಖಂಡರು, ಕಲ್ಪವಾಸಿಗಳು ಮತ್ತು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಾ ಗಂಗಾ, ಮಾ ಯಮುನಾ ಮತ್ತು ಮಾ ಸರಸ್ವತಿ ಎಲ್ಲರ ಆಸೆಗಳನ್ನು ಪೂರೈಸಲಿ" ಎಂದು ಸಿಎಂ ಯೋಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಇಂದು ಮುಂಜಾನೆಯಿಂದಲೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇನ್ನೂ ಲಕ್ಷಾಂತರ ಜನರು ಆಗಮನದೊಂದಿಗೆ ಜನಸಂದಣಿಯು ಹೆಚ್ಚುತ್ತಲೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ನಡೆಯುತ್ತಿರುವ ಮಹಾಕುಂಭ ಮೇಳವು ಫೆಬ್ರವರಿ 26ರ ಮಹಾಶಿವರಾತ್ರಿಯಂದು ಅಂತಿಮ ಅಮೃತ ಸ್ನಾನದೊಂದಿಗೆ ಮುಕ್ತಾಯಗೊಳ್ಳಲಿದೆ.

ಶಿವರಾತ್ರಿಯಂದು ಐತಿಹಾಸಿಕ ಮಹಾಕುಂಭ ಮೇಳ ಸಂಪನ್ನಗೊಳ್ಳಲಿದೆ. ಅಂದು ಕೋಟ್ಯಂತರ ಭಕ್ತಾದಿಗಳು ಪ್ರಯಾಗ್ರಾಜ್ಗೆ ಬರಲಿದ್ದು, ಲಕ್ಷಾಂತರ ಭಕ್ತರು ಸಂಗಮದಲ್ಲಿ ಕೊನೆಯ ಪವಿತ್ರ ಸ್ನಾನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಂತರು, ಅಖಾಡಗಳು ಮತ್ತು ಆಧ್ಯಾತ್ಮಿಕ ನಾಯಕರು ಅಂದು ಶಿವನ ಕುರಿತಾದ ಪ್ರಾರ್ಥನೆಗಳು, ರುದ್ರಾಭಿಷೇಕ ಪೂಜೆಗಳು ಮತ್ತು ವಿಶೇಷ ಮೆರವಣಿಗೆಗಳನ್ನು ನಡೆಸಲಿದ್ದಾರೆ.
ಹಲವು ಮಂಗಳಕರವಾದ ದಿನಗಳಂದು ಪವಿತ್ರ ಸ್ನಾನಕ್ಕಾಗಿ ಭಕ್ತರು ಹರಿದು ಬರುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ಇಲ್ಲಿ ಸ್ನಾನಘಟ್ಟಗಳು ಹಾಗೂ ಪ್ರಯಾಗ್ರಾಜ್ನಲ್ಲಿ ಎಲ್ಲ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಘ ಪೂರ್ಣಿಮೆಯ ಹಿನ್ನೆಲೆ ಇಂದು ಪ್ರಯಾಗ್ರಾಜ್ನ ಸ್ನಾನಘಟ್ಟಗಳಲ್ಲಿ ಜನಸಂದಣಿ ತಡೆಗಟ್ಟಲು ಮಹಾಕುಂಭ ಮೇಳ ಪರಿಷತ್ತು ಸುಮಾರು 40 ಪೊಲೀಸರನ್ನು ಭದ್ರತೆಗೆ ನಿಯೋಜಿಸಿದೆ. ಇವರು ಸುಗಮ ಜನಸಂದಣಿ ನಿರ್ವಹಣೆಗಾಗಿ ಪ್ರತಿ ನದಿಯ ದಡದಲ್ಲಿ ಅನೌನ್ಸ್ಮೆಂಟ್ಗಳ ಮೂಲಕ ಭಕ್ತರನ್ನು ನಿಯಂತ್ರಣ ಮಾಡುತ್ತಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications