ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ ಬಾರಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ಪರಿಚಯ

|
Google Oneindia Kannada News

Recommended Video

ಯಾವ ಜಾತಿಯವರಿಗೆ ಎಷ್ಟು ಸಚಿವ ಸ್ಥಾನ ಸಿಕ್ಕಿದೆ..! | cabinet expansion

ಬೆಂಗಳೂರು, ಆಗಸ್ಟ್ 21 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಬೆಂಗಳೂರು ನಗರಕ್ಕೆ 4 ಸಚಿವ ಸ್ಥಾನಗಳು ಸಿಕ್ಕಿವೆ. ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವತ್ಥ್ ನಾರಾಯಣ ಮೊದಲ ಬಾರಿಗೆ ಸಚಿವರಾಗಿದ್ದಾರೆ.

50 ವರ್ಷದ ಡಾ. ಅಶ್ವತ್ಥ್ ನಾರಾಯಣ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಮೂರು ಬಾರಿ 2008, 2013 ಮತ್ತು 2019ರ ಚುನಾವಣೆಯಲ್ಲಿ ಸತತವಾಗಿ ಜಯಗಳಿಸುವ ಮೂಲಕ ಬೆಂಗಳೂರಿನ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದರು.

ಪಕ್ಷ ನಿಷ್ಠೆ, ಜನಪರ ಕಾಳಜಿಯ ಕೋಟ ಶ್ರೀನಿವಾಸ ಪೂಜಾರಿ ಪರಿಚಯಪಕ್ಷ ನಿಷ್ಠೆ, ಜನಪರ ಕಾಳಜಿಯ ಕೋಟ ಶ್ರೀನಿವಾಸ ಪೂಜಾರಿ ಪರಿಚಯ

ಎಂ.ಬಿ.ಬಿ.ಎಸ್. ಅಧ್ಯಯನ ಮಾಡಿರುವ ಡಾ. ಅಶ್ವತ್ಥ್ ನಾರಾಯಣ ರಾಜಕೀಯಕ್ಕೆ ಬಂದರು. ವೈದ್ಯರಾಗಿರುವ ಅವರಿಗೆ ವೈದ್ಯಕೀಯ ಶಿಕ್ಷಣ ಅಥವ ಆರೋಗ್ಯ ಖಾತೆ ಸಿಗುವ ನಿರೀಕ್ಷೆ ಇದೆ. ಆಪರೇಷನ್ ಕಮಲದ ವಿಚಾರದಲ್ಲಿಯೂ ಇವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು.

ಕೊನೆ ಕ್ಷಣದಲ್ಲಿ ಪಟ್ಟಿ ಬದಲು, 5 ಹೆಸರು ಕೈ ಬಿಟ್ಟ ಯಡಿಯೂರಪ್ಪಕೊನೆ ಕ್ಷಣದಲ್ಲಿ ಪಟ್ಟಿ ಬದಲು, 5 ಹೆಸರು ಕೈ ಬಿಟ್ಟ ಯಡಿಯೂರಪ್ಪ

Minister Dr Ashwath Narayan Profile

2004ರಲ್ಲಿ ಮಲ್ಲೇಶ್ವರಂ ಕ್ಷೇತ್ರದಿಂದ ವಿಧಾನಸಭೆ ಡಾ. ಅಶ್ವತ್ಥ್ ನಾರಾಯಣ ಪ್ರವೇಶ ಬಯಸಿದ್ದರು. ಆದರೆ, ಕಾಂಗ್ರೆಸ್‌ನ ಎಂ. ಆರ್. ಸೀತಾರಾಮ್ ವಿರುದ್ಧ ಸೋಲು ಕಂಡಿದ್ದರು. 2008ರ ಚುನಾವಣೆಯಲ್ಲಿ ಗೆದ್ದರು, ಬಳಿಕ ಎರಡು ಚುನಾವಣೆಯಲ್ಲಿ ಸತತವಾಗಿ ಗೆಲುವು ಕಂಡಿದ್ದಾರೆ.

ಯಡಿಯೂರಪ್ಪ ಸಂಪುಟ ಸೇರಿ ಬಿ. ಡಿ. ಜತ್ತಿ ದಾಖಲೆ ಮುರಿದ ಶೆಟ್ಟರ್!ಯಡಿಯೂರಪ್ಪ ಸಂಪುಟ ಸೇರಿ ಬಿ. ಡಿ. ಜತ್ತಿ ದಾಖಲೆ ಮುರಿದ ಶೆಟ್ಟರ್!

ಪಕ್ಷದ ಹೈಕಮಾಂಡ್ ಜೊತೆಗೂ ಡಾ. ಅಶ್ವತ್ಥ್ ನಾರಾಯಣ ಉತ್ತಮ ಸಂಬಂಧ ಹೊಂದಿದ್ದಾರೆ. ಬೆಂಗಳೂರು ನಗರದ ನಾಲ್ವರು ಶಾಸಕರಿಗೆ ಸಚಿವರಾಗುವ ಅವಕಾಶ ಸಿಕ್ಕಿದ್ದು, ಅದರಲ್ಲಿ ಡಾ. ಅಶ್ವತ್ಥ್ ನಾರಾಯಣ ಅವರು ಕೂಡಾ ಒಬ್ಬರು.

English summary
Malleswaram BJP MLA Dr Ashwath Narayan joined Chief Minister B.S.Yediyurappa cabinet. 3 time MLA of Malleswaram got minister post 1st time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X