ಮೋದಿಗೆ ಪ್ರಿಯವಾದ ಹಣ್ಣು ಯಾವುದು ಗೊತ್ತಾ?
ಇಡೀ ದೇಶವನ್ನು ಲೋಕ ಸಭಾ ಚುನಾವಣೆಯ ಜ್ವರ ಕಾಡುತ್ತಿದ್ದರೆ ಮತ್ತೊಂದೆಡೆ ಹಣ್ಣುಗಳ ರಾಜನೆಂದೇ ಕರೆಯುವ ಮಾವಿನಹಣ್ಣಿನ ಕಾಲವೂ ಇದಾಗಿದೆ. ಚುನಾವಣೆಗೂ ಮಾವಿನಹಣ್ಣಿಗೂ ಎತ್ತಣದ ಸಂಬಂಧ ಎಂಬ ಅಚ್ಚರಿಯೂ ಆಗಬಹುದು. ಇಷ್ಟಕ್ಕೂ ಮಾವಿನಹಣ್ಣಿನ ವಿಚಾರ ಈಗ ಏಕೆ ಬಂತು ಪ್ರಶ್ನೆ ಕಾಡಲೂ ಬಹುದು.
ಇದೆಕ್ಕೆಲ್ಲ ಕಾರಣ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರಮೋದಿ ಅವರನ್ನು ಸಂದರ್ಶನ ಮಾಡಿದ ವೇಳೆ ಮಾವಿನಹಣ್ಣಿನ ಕುರಿತಂತೆ ಪ್ರಧಾನಿ ಅವರು ಬಿಚ್ಚಿಟ್ಟ ರಹಸ್ಯಗಳು ಚುನಾವಣೆಯ ಕಾವಿನ ನಡುವೆಯೂ ಸುದ್ದಿಯಾಗಿದೆ.
ಅಕ್ಷಯ್ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿದ ಪ್ರಶ್ನೆ ಬಾಲಿಶ ಎನಿಸುವಂತಿತ್ತಾದರೂ ಅದಕ್ಕೆ ಮೋದಿ ಅವರು ನೀಡಿದ ಪ್ರತಿಕ್ರಿಯೆ ಎಲ್ಲರೂ ಅಚ್ಚರಿ ಮತ್ತು ಕುತೂಹಲದಿಂದ ನೋಡುವಂತಾಯಿತು.

"ನಮ್ಮ ಚಾಲಕರ ಮಗಳು ನಮ್ಮ ಪ್ರಧಾನಿ ಮಾವಿನ ಹಣ್ಣು ತಿಂತಾರಾ ಎಂಬ ಪ್ರಶ್ನೆ ಕೇಳುತ್ತಿದ್ದರು. ಒಂದು ವೇಳೆ ನೀವು ಮಾವಿನ ಹಣ್ಣನ್ನು ತಿನ್ನುವುದಾದರೆ ಅದನ್ನು ಕತ್ತರಿಸಿ ತಿನ್ನುತ್ತೀರೋ ಅಥವಾ ಹಾಗೆಯೇ ಕಚ್ಚಿ ತಿನ್ನುತ್ತೀರೋ"? ಎಂದು ಅಕ್ಷಯ್ ಕೇಳಿದ ಪ್ರಶ್ನೆಗೆ ನಕ್ಕು ಉತ್ತರಿಸಿದ ಪ್ರಧಾನಿ "ನನಗೆ ಮಾವಿನ ಹಣ್ಣು ಎಂದರೆ ಬಹಳ ಇಷ್ಟ ಹೀಗಾಗಿ ನಾನು ತಿನ್ನುತ್ತೇನೆ.

ಗುಜರಾತಿನಲ್ಲಿ ಮಾವಿನ ರಸದ ಸಂಪ್ರದಾಯವಿದೆ. ನಾನು ಚಿಕ್ಕವನಾಗಿದ್ದಾಗ, ಮಾವಿನ ಹಣ್ಣನ್ನು ಖರೀದಿಸುವುದು ನಮಗೆ ಕೇವಲ ಸಾಮಾನ್ಯ ವಿಷಯವಲ್ಲ. ವಾಸ್ತವವಾಗಿ, ನಮ್ಮ ರೈತರು ಬಹಳ ಉದಾರರಾಗಿದ್ದಾರೆ. ನಾವು ಮಾವಿನ ತೋಟಕ್ಕೆ ಹೋದಾಗ ನಮ್ಮ ರೈತರು ನಮ್ಮನ್ನು ತಡೆಯುತ್ತಿರಲಿಲ್ಲ. ನಾನು ಮರದ ಮೇಲೆ ಹತ್ತಿ ಹೆಚ್ಚು ಮಾಗಿದ ಮಾವಿನಹಣ್ಣನ್ನು ಕಿತ್ತು ತಿನ್ನುತ್ತಿದ್ದೆ. ಈ ರೀತಿ ತಿನ್ನುವುದು ನನಗೆ ಹೆಚ್ಚು ಇಷ್ಟವಾಗುತ್ತಿತ್ತು" ಎಂದು ಹೇಳುವ ಮೂಲಕ ಬಾಲ್ಯದ ಆ ದಿನಗಳ ಸುಂದರ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications