ಮೋದಿಗೆ ಪ್ರಿಯವಾದ ಹಣ್ಣು ಯಾವುದು ಗೊತ್ತಾ?
ಇಡೀ ದೇಶವನ್ನು ಲೋಕ ಸಭಾ ಚುನಾವಣೆಯ ಜ್ವರ ಕಾಡುತ್ತಿದ್ದರೆ ಮತ್ತೊಂದೆಡೆ ಹಣ್ಣುಗಳ ರಾಜನೆಂದೇ ಕರೆಯುವ ಮಾವಿನಹಣ್ಣಿನ ಕಾಲವೂ ಇದಾಗಿದೆ. ಚುನಾವಣೆಗೂ ಮಾವಿನಹಣ್ಣಿಗೂ ಎತ್ತಣದ ಸಂಬಂಧ ಎಂಬ ಅಚ್ಚರಿಯೂ ಆಗಬಹುದು. ಇಷ್ಟಕ್ಕೂ ಮಾವಿನಹಣ್ಣಿನ ವಿಚಾರ ಈಗ ಏಕೆ ಬಂತು ಪ್ರಶ್ನೆ ಕಾಡಲೂ ಬಹುದು.
ಇದೆಕ್ಕೆಲ್ಲ ಕಾರಣ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪ್ರಧಾನಿ ನರೇಂದ್ರಮೋದಿ ಅವರನ್ನು ಸಂದರ್ಶನ ಮಾಡಿದ ವೇಳೆ ಮಾವಿನಹಣ್ಣಿನ ಕುರಿತಂತೆ ಪ್ರಧಾನಿ ಅವರು ಬಿಚ್ಚಿಟ್ಟ ರಹಸ್ಯಗಳು ಚುನಾವಣೆಯ ಕಾವಿನ ನಡುವೆಯೂ ಸುದ್ದಿಯಾಗಿದೆ.
ಅಕ್ಷಯ್ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿದ ಪ್ರಶ್ನೆ ಬಾಲಿಶ ಎನಿಸುವಂತಿತ್ತಾದರೂ ಅದಕ್ಕೆ ಮೋದಿ ಅವರು ನೀಡಿದ ಪ್ರತಿಕ್ರಿಯೆ ಎಲ್ಲರೂ ಅಚ್ಚರಿ ಮತ್ತು ಕುತೂಹಲದಿಂದ ನೋಡುವಂತಾಯಿತು.

"ನಮ್ಮ ಚಾಲಕರ ಮಗಳು ನಮ್ಮ ಪ್ರಧಾನಿ ಮಾವಿನ ಹಣ್ಣು ತಿಂತಾರಾ ಎಂಬ ಪ್ರಶ್ನೆ ಕೇಳುತ್ತಿದ್ದರು. ಒಂದು ವೇಳೆ ನೀವು ಮಾವಿನ ಹಣ್ಣನ್ನು ತಿನ್ನುವುದಾದರೆ ಅದನ್ನು ಕತ್ತರಿಸಿ ತಿನ್ನುತ್ತೀರೋ ಅಥವಾ ಹಾಗೆಯೇ ಕಚ್ಚಿ ತಿನ್ನುತ್ತೀರೋ"? ಎಂದು ಅಕ್ಷಯ್ ಕೇಳಿದ ಪ್ರಶ್ನೆಗೆ ನಕ್ಕು ಉತ್ತರಿಸಿದ ಪ್ರಧಾನಿ "ನನಗೆ ಮಾವಿನ ಹಣ್ಣು ಎಂದರೆ ಬಹಳ ಇಷ್ಟ ಹೀಗಾಗಿ ನಾನು ತಿನ್ನುತ್ತೇನೆ.

ಗುಜರಾತಿನಲ್ಲಿ ಮಾವಿನ ರಸದ ಸಂಪ್ರದಾಯವಿದೆ. ನಾನು ಚಿಕ್ಕವನಾಗಿದ್ದಾಗ, ಮಾವಿನ ಹಣ್ಣನ್ನು ಖರೀದಿಸುವುದು ನಮಗೆ ಕೇವಲ ಸಾಮಾನ್ಯ ವಿಷಯವಲ್ಲ. ವಾಸ್ತವವಾಗಿ, ನಮ್ಮ ರೈತರು ಬಹಳ ಉದಾರರಾಗಿದ್ದಾರೆ. ನಾವು ಮಾವಿನ ತೋಟಕ್ಕೆ ಹೋದಾಗ ನಮ್ಮ ರೈತರು ನಮ್ಮನ್ನು ತಡೆಯುತ್ತಿರಲಿಲ್ಲ. ನಾನು ಮರದ ಮೇಲೆ ಹತ್ತಿ ಹೆಚ್ಚು ಮಾಗಿದ ಮಾವಿನಹಣ್ಣನ್ನು ಕಿತ್ತು ತಿನ್ನುತ್ತಿದ್ದೆ. ಈ ರೀತಿ ತಿನ್ನುವುದು ನನಗೆ ಹೆಚ್ಚು ಇಷ್ಟವಾಗುತ್ತಿತ್ತು" ಎಂದು ಹೇಳುವ ಮೂಲಕ ಬಾಲ್ಯದ ಆ ದಿನಗಳ ಸುಂದರ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications