Monkey Drink RO Water: ಮನೆಗೆ ನುಗ್ಗಿ ಅಕ್ವಾಗಾರ್ಡ್ ಮೂಲಕ ಶುದ್ಧ ನೀರು ಕುಡಿದ ಮಂಗ: ವಿಡಿಯೋ ವೈರಲ್
ತೀವ್ರ ಬಾಯಾರಿಕೆಯಿಂದಾಗಿ ಮಂಗವೊಂದು ಮನೆಗೆ ನುಗ್ಗಿ ಅಕ್ವಾಗಾರ್ಡ್ ಮೂಲಕ ಶುದ್ಧ ನೀರು ಕುಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಇತ್ತೀಚೆಗೆ ಮಳೆರಾಯನ ಸಿಟ್ಟು ಸೂರ್ಯದೇವ ತೀರಿಸಿಕೊಳ್ಳುತ್ತಿದ್ದಾನೆ ಎಂಬಂತಾಗಿದೆ. ಮಳೆ ಬಾರದೆ ಬಿಸಿಲು ಹೆಚ್ಚಾಗಿರುವುದು ಜನರನ್ನು ಹೈರಾಣಾಗಿಸಿದೆ. ಬೆಂಗಳೂರಿನಲ್ಲಿ ಬರದ ಛಾಯೆ ಆವರಿಸಿದ್ದು ಜನರು ನೀರಿಲ್ಲದೆ ಸಂಕಷ್ಟವನ್ನು ಎದುರಿಸುವಂತಾಗಿದೆ. ಕುಡಿಯಲು ನೀರಿಲ್ಲದೆ ಜನ ಕಂಗಾಲಾಗಿದ್ದಾರೆ.

ಕಳಪೆ ನೀರು ಕುಡಿಯಲಾಗದೆ ಸಂಕಷ್ಟದ ಸ್ಥಿತಿಯನ್ನು ಸಿಲಿಕಾನ್ ಸಿಟಿ ಮಂದಿ ಎದುರಿಸುತ್ತಿದ್ದಾರೆ. ಯಾವುದೇ ಗಲ್ಲಿಗೋದರೂ ನಲ್ಲಿ ಮುಂದೆ ಖಾಲಿ ಬಿಂದಿಗೆಗಳ ಸಾಲು ಕಂಡು ಬರುತ್ತಿದೆ. ಈ ಸಮಸ್ಯೆ ಪ್ರಾಣಿಗಳಿಗೂ ಹೊರತಾಗಿಲ್ಲ. ನೀರಿಲ್ಲದೆ ಪ್ರಾಣಿಗಳು ಮನೆ ಹೊಕ್ಕು ನೀರಿನ ದಾಹ ತೀರಿಸಿಕೊಳ್ಳುತ್ತಿವೆ.
ಹೌದು... ಸಾಮಾಜಿಕ ಜಾಲತಾಣದಲ್ಲಿ ಮಂಗವೊಂದು ಮನೆಗೆ ನುಗ್ಗಿ ನೀರು ಕುಡಿದ ವಿಡಿಯೋ ಸಾಮಾಜಿಕ ಕಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಬಿಸಿಲಿನ ತಾಪದ ನಡುವೆ ನಿರಂತರವಾಗಿ ಜಲಮೂಲಗಳು ಬತ್ತಿ ಹೋಗುತ್ತಿರುವುದರಿಂದ ಕಾಡುಪ್ರಾಣಿ, ಪಕ್ಷಿ ಸಂಕುಲಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತೀವ್ರ ಬಿಸಿಲಿನಿಂದಾಗಿ ಕೋತಿಗೆ ಬಾಯಾರಿಕೆಯಾಗಿದ್ದು, ಕಿಟಕಿಯ ಗ್ರಿಲ್ನ ಮಧ್ಯಭಾಗವನ್ನು ದಾಟಿ ಅಕ್ವಾಗಾರ್ಡ್ ನೀರು ಕುಡಿದು ದಾಹ ತಣಿಸಿಕೊಂಡಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.
Monkeys are thirsty: Attacking society and homes through kitchen windows in search of water.
— Akshat Tak (@akshattak) April 22, 2024
The Bangalore water crisis has hit animals harder than humans.
Let's conserve water to help them, too.@peakbengaluru pic.twitter.com/6gpc9JLVc6
ಇದು ಬೆಂಗಳೂರಿನಲ್ಲಿ ಸೆರೆ ಹಿಡಿದ ವಸತಿ ಪ್ರದೇಶದ ವಿಡಿಯೋವಾಗಿದೆ ಎಂದು 'ಎಕ್ಸ್'ನಲ್ಲಿ ಬರೆಯಲಾಗಿದೆ.
ಈ ನಡುವೆ ಹವಾಮಾನ ಇಲಾಖೆ ಮುಂದಿನ ವಾರದಲ್ಲಿ ತಾಪಮಾನ ಹೆಚ್ಚಾಗುವ ಎಚ್ಚರಿಕೆಯನ್ನು ನೀಡಿದೆ. ಇದೇ ವೇಳೆ ಬಯಲು ಸೀಮೆ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ತಾಪಮಾನ ನಿರಂತರವಾಗಿ ಹೆಚ್ಚುತ್ತಿದೆ. ದಕ್ಷಿಣ ಮತ್ತು ಮಧ್ಯ ಭಾರತದ ಹಲವೆಡೆ ಜಲಾಶಯಗಳ ಮಟ್ಟದಲ್ಲಿ ಭಾರಿ ಕುಸಿತ ಕಂಡುಬರುತ್ತಿದೆ.

ಕೇಂದ್ರ ಜಲ ಆಯೋಗದ ವರದಿ ಪ್ರಕಾರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡುಗಳಲ್ಲಿ ಜಲಾಶಯಗಳ ಸಂಗ್ರಹ ಮಟ್ಟ ಕುಸಿಯುತ್ತಿರುವುದು ಆತಂಕವನ್ನು ಹೆಚ್ಚಿಸುತ್ತಿದೆ.
ಭಾರತದ ದಕ್ಷಿಣ ವಲಯದ CWC ವರದಿಯ ಪ್ರಕಾರ, 42 ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯವು 53.334 BCM (ಬಿಲಿಯನ್ ಕ್ಯೂಬಿಕ್ ಮೀಟರ್) ಆಗಿದೆ. ಆದರೀಗ ಜಲಾಶಯಗಳಲ್ಲಿ ಲಭ್ಯವಿರುವ ನೀರು ಒಟ್ಟು 8.865 BCM ಆಗಿದೆ.
ನೀರಿನ ಮಟ್ಟ ಒಟ್ಟು ಸಾಮರ್ಥ್ಯದ ಶೇ.17ರಷ್ಟು ಮಾತ್ರ ಇದೆ. ಇಂತಹ ಪರಿಸ್ಥಿತಿಯಲ್ಲಿ ವೈರಲ್ ವೀಡಿಯೊ ಪರಿಸ್ಥಿತಿಯನ್ನು ಸ್ಪಷ್ಟಪಡಿಸುತ್ತದೆ. ಈ ದೃಶ್ಯ ಮುಂದಿನ ಜನಸಾಮಾನ್ಯರ ಸ್ಥಿತಿ ಯಾವ ಮಟ್ಟಕ್ಕಿರುತ್ತದೆ ಎನ್ನುವ ಆತಂಕವನ್ನು ಸೃಷ್ಟಿಸಿದೆ.
ಇದು ವಸತಿ ಪ್ರದೇಶಗಳ ಸ್ಥಿತಿಯಾಗಿದೆ. ಇಲ್ಲಿ ಬಾಯಾರಿದ ಮಂಗ ನೀರನ್ನು ಹುಡುಕುತ್ತಾ ಮನೆಯ ಅಡುಗೆ ಕೋಣೆಗೆ ಪ್ರವೇಶಿಸಿದೆ. ಇದನ್ನು ನೋಡಿದರೆ ಕಾಡಿನ ಪರಿಸ್ಥಿತಿ ಹೇಗಿರಬೇಡ ಎನ್ನುವ ಪ್ರಶ್ನೆ ಕೂಡ ಕಾಡದಿರದು. ಪರಿಸ್ಥಿತಿ ಹೀಗೆ ಮುಂದುವರೆದು ಮಳೆ ಬಾರದೇ ಇದ್ದರೆ ಗಂಭೀರ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಹೆಚ್ಚಾಗಿವೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications