ಲೋಕಸಭೆ ಚುನಾವಣೆ ಇಂದು ನಡೆದಿದ್ದರೆ ಏನಾಗುತ್ತಿತ್ತು?: ಮೂಡ್ ಆಫ್ ದಿ ನೇಷನ್ ಸಮೀಕ್ಷೆ
ಈಗಿನ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆ ನಡೆದಿದ್ದರೆ ಬಿಜೆಪಿ 32 ಸಂಸತ್ ಸ್ಥಾನಗಳನ್ನು ಕಳೆದುಕೊಂಡಿರುತ್ತಿತ್ತು ಎಂದು ಮೂಡ್ ಆಫ್ ದಿ ನೇಷನ್ (ಎಂಓಟಿಎನ್) ಸಮೀಕ್ಷೆ ತಿಳಿಸಿದೆ.
ಇಂಡಿಯಾ ಟುಡೆ ಸಮೂಹ ಮತ್ತು ಕಾರ್ವಿ ಇನ್ಸೈಟ್ಸ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯಲ್ಲಿ 12,141 ಸಂದರ್ಶನಗಳನ್ನು ನಡೆಸಲಾಗಿದೆ. ಇದರಲ್ಲಿ ಶೇ 67 ಗ್ರಾಮೀಣ ಮತ್ತು ಶೇ 33ರಷ್ಟು ನಗರ ಪ್ರದೇಶಗಳಲ್ಲಿ ನಡೆದಿದ್ದು, ಬಹುತೇಕ ಸಮಾನ ಸಂಖ್ಯೆಯಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು.
ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಅಸ್ಸಾಂ, ಬಿಹಾರ, ಛತ್ತೀಸಗಡ, ದೆಹಲಿ, ಗುಜರಾತ್, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ 194 ವಿಧಾನಸಭೆ ಕ್ಷೇತ್ರಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ.

ಬಿಜೆಪಿಗೆ 271 ಸೀಟು
2019ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 303 ಸೀಟುಗಳನ್ನು ಗೆದ್ದು ಸರಳ ಬಹುಮತ ಪಡೆದಿತ್ತು. ಒಂದು ವೇಳೆ ಲೋಕಸಭೆ ಚುನಾವಣೆ ಇಂದು ನಡೆದಿದ್ದರೆ ಅದರ ಸಂಖ್ಯೆ 271ಕ್ಕೆ ಇಳಿಯುತ್ತಿತ್ತು. ಇದರಿಂದ ಸರಳ ಬಹುಮತಕ್ಕೆ ಒಂದು ಮತದ ಕೊರತೆ ಎದುರಾಗುತ್ತಿತ್ತು ಎಂದು ಸಮೀಕ್ಷೆ ಹೇಳಿದೆ.

ಕಾಂಗ್ರೆಸ್ಗೆ ಹೆಚ್ಚುವರಿ ಎಂಟು ಸೀಟು
ಹಾಗೆಯೇ ಇಂದು ಚುನಾವಣೆ ನಡೆದಿದ್ದರೆ ಕಾಂಗ್ರೆಸ್ ಎಂಟು ಹೆಚ್ಚು ಸೀಟುಗಳನ್ನು ಪಡೆದುಕೊಳ್ಳುತ್ತಿತ್ತು. ಮೈತ್ರಿಕೂಟದ ಲೆಕ್ಕಾಚಾರದಲ್ಲಿ ಆಗಿದ್ದರೆ ಶಿವಸೇನಾದಿಂದ ಬೇರ್ಪಟ್ಟಿರುವುದು ಮತ್ತು ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳ ಕಾರಣ ಬಿಜೆಪಿ ನೇತೃತ್ವದ ಎನ್ಡಿಎ ಸುಮಾರು 50 ಸೀಟುಗಳನ್ನು ಕಳೆದುಕೊಳ್ಳುತ್ತಿತ್ತು. ಆದರೆ ಅದು ಒಟ್ಟು 303 ಸೀಟುಗಳನ್ನು ಪಡೆದುಕೊಳ್ಳುತ್ತಿದ್ದರಿಂದ ಸರ್ಕಾರ ರಚನೆಗೆ ಕಷ್ಟವಾಗುತ್ತಿರಲಿಲ್ಲ.

ಎನ್ಡಿಎ ಮತ ಹಂಚಿಕೆ ಕಡಿಮೆ
2019ರ ಮೇನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಪಡೆದ ಮತಗಳ ಹಂಚಿಕೆಯಲ್ಲಿ ಎನ್ಡಿಎ ಶೇ 4ರಷ್ಟು ಕಡಿಮೆ ಮತಗಳನ್ನು ಪಡೆದುಕೊಳ್ಳುತ್ತಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಶೇ 2ರಷ್ಟು ಹೆಚ್ಚಿನ ಮತಗಳಿಕೆಯೊಂದಿಗೆ 15 ಅಧಿಕ ಸೀಟುಗಳನ್ನು ಪಡೆದುಕೊಳ್ಳುತ್ತಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಕಾಶ್ಮೀರ ಸಮಸ್ಯೆಗೆ ಕಾಯಂ ಪರಿಹಾರ ಸಿಕ್ಕಿತೇ?
370ನೇ ವಿಧಿಯನ್ನು ರದ್ದುಮಾಡಿದ ಕೇಂದ್ರ ಸರ್ಕಾರದ ನಿರ್ಧಾರವು ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ನೀಡಲಿದೆಯೇ ಎಂಬ ಪ್ರಶ್ನೆಗೆ ಶೇ 58ರಷ್ಟು ಜನರು ಹೌದು ಎಂದಿದ್ದಾರೆ. ಈ ನಿರ್ಧಾರದಿಂದ ಕಾಶ್ಮೀರದ ಸಮಸ್ಯೆ ಪರಿಹಾರ ಕಂಡುಕೊಳ್ಳಲಿದೆ ಎಂದು ಹೆಚ್ಚಿನ ಜನರಿಗೆ ಅನಿಸಿದೆ. ಶೇ 26ರಷ್ಟು ಜನರಿಗೆ ಇದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ ಎಂದೆನಿಸಿದೆ. ಇನ್ನು ಶೇ 16ರಷ್ಟು ಮಂದಿ ಅಂತಿಮ ಅಭಿಪ್ರಾಯ ಹೊಂದುವುದು ಕಷ್ಟ ಎಂದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications