ಇಂದಿಗೂ ಮೋದಿಯೇ ಅತ್ಯುತ್ತಮ ಪ್ರಧಾನಿ: 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ
ನರೇಂದ್ರ ಮೋದಿ ಅವರೇ ಭಾರತದ ಅತ್ಯುತ್ತಮ ಪ್ರಧಾನಿ ಎಂದು ಕನಿಷ್ಠ ಶೇ 34ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಮೋದಿ ಅವರ ಬಳಿಕ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಸ್ಥಾನ ಪಡೆದಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮತ್ತು ಜವಹರಲಾಲ್ ನೆಹರೂ ನಂತರದ ಸ್ಥಾನಗಳಲ್ಲಿದ್ದಾರೆ.
ಇಂಡಿಯಾ ಟುಡೆ ಸಮೂಹ ಮತ್ತು ಕಾರ್ವಿ ಇನ್ಸೈಟ್ಸ್ ಲಿಮಿಟೆಡ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ (ಎಂಓಟಿಎನ್) ಈ ಮಾಹಿತಿ ನೀಡಿದೆ.
ಸಮೀಕ್ಷೆಯಲ್ಲಿ ಪಾಲ್ಗೊಂಡದ್ದವರಲ್ಲಿ ಶೇ ಎಂಟರಷ್ಟು ಜನರು ಜವಹರಲಾಲ್ ನೆಹರೂ ಅತ್ಯುತ್ತಮ ಪ್ರಧಾನಿ ಎಂದು ಆಯ್ಕೆ ಮಾಡಿದ್ದರೆ, ಶೇ 5ರಷ್ಟು ಮಂದಿ ರಾಜೀವ್ ಗಾಂಧಿ ಅವರೆಡೆಗೆ ಒಲವು ವ್ಯಕ್ತಪಡಿಸಿದ್ದಾರೆ. ಆದರೆ ಮೋದಿ ಅವರ ಜನಪ್ರಿಯತೆ ಕಳೆದ ಸಮೀಕ್ಷೆಗಳಿಗೆ ಹೋಲಿಸಿದರೆ ಇಳಿಕೆಯಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು, ನಿರುದ್ಯೋಗದ ಸಮಸ್ಯೆ, ರೈತರ ಸಂಕಷ್ಟಗಳು, ಆರ್ಥಿಕ ಕುಸಿತ ಮುಂತಾದವುಗಳ ವಿರುದ್ಧ ಜನರು ಅಸಮಾಧಾನ ಹೊಂದಿದ್ದಾರೆ. ಈ ಕಾರಣಗಳಿಂದಾಗಿ ಮೋದಿ ಜನಪ್ರಿಯತೆ ತಗ್ಗಿದೆ ಎಂದು ಹೇಳಲಾಗಿದೆ.

ಮೋದಿ ಪರ ಶೇ 34 ಮತ
ಸಮೀಕ್ಷೆಯಲ್ಲಿ ನರೇಂದ್ರ ಮೋದಿ ಅವರ ಪರ ಶೇ 34 ಮಂದಿ ಒಲವು ತೋರಿದ್ದು, ಇದರಂತೆ ಮೋದಿ ದೇಶದ ಅತ್ಯುತ್ತಮ ಪ್ರಧಾನಿ ಎನಿಸಿದ್ದಾರೆ. ಇಂದಿರಾ ಗಾಂಧಿ ಅವರು ದೇಶದ ಅತ್ಯುತ್ತಮ ಪ್ರಧಾನಿ ಎಂದು ಶೇ 16ರಷ್ಟು ಮಂದಿ ಹೇಳಿದ್ದಾರೆ. ಹಾಗೆಯೇ ಶೇ 13ರಷ್ಟು ಮಂದಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಅತ್ಯುತ್ತಮ ಪ್ರಧಾನಿ ಎಂದು ಹೆಸರಿಸಿದ್ದಾರೆ.

ಜನಪ್ರಿಯತೆಯಲ್ಲಿ ಕುಸಿತ
2019ರ ಆಗಸ್ಟ್ನಲ್ಲಿ ನಡೆದ ಎಂಓಟಿಎನ್ ಸಮೀಕ್ಷೆಯಲ್ಲಿ ಕೂಡ ನರೇಂದ್ರ ಮೋದಿ ಅತ್ಯುತ್ತಮ ಪ್ರಧಾನಿ ಎಂದು ಜನರು ಅಭಿಪ್ರಾಯಪಟ್ಟಿದ್ದರು. ಆದರೆ ಇತ್ತೀಚೆಗೆ ನಡೆದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಕೂಡ ಮೋದಿ ಶೇ 34ರಷ್ಟು ಮತಗಳನ್ನು ಪಡೆದಿದ್ದರೂ, ಆರು ತಿಂಗಳ ನಂತರದ ಸಮೀಕ್ಷೆಯಲ್ಲಿ ಅವರ ಜನಪ್ರಿಯತೆ ಶೇ ಮೂರರಷ್ಟು ಕುಸಿದಿದೆ.

ಇಂದಿರಾ ಜನಪ್ರಿಯತೆ ಏರಿಕೆ
2019ರ ಆಗಸ್ಟ್ನಲ್ಲಿ ನಡೆದ ಸಮೀಕ್ಷೆಯಲ್ಲಿ ಕನಿಷ್ಠ ಶೇ 14ರಷ್ಟು ಮಂದಿ ಇಂದಿರಾ ಗಾಂಧಿ ಅವರನ್ನು ಅತ್ಯುತ್ತಮ ಪ್ರಧಾನಿ ಎಂದು ಗುರುತಿಸಿದ್ದರು. ಈಚೆಗೆ ನಡೆದ ಸಮೀಕ್ಷೆಯಲ್ಲಿ ಮಾಜಿ ಪ್ರಧಾನಿಯ ಜನಪ್ರಿಯತೆಯಲ್ಲಿ ಶೇ 2ರಷ್ಟು ಏರಿಕೆಯಾಗಿದೆ.

ಎಂಟು ತಿಂಗಳಲ್ಲಿ ಹೆಚ್ಚಿದ್ದ ಜನಪ್ರಿಯತೆ
2019ರ ಜನವರಿಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಸಮೀಕ್ಷೆಯಲ್ಲಿ ಶೇ 19ರಷ್ಟು ಮಂದಿ ಮಾತ್ರ ನರೇಂದ್ರ ಮೋದಿ ದೇಶದ ಅತ್ಯುತ್ತಮ ಪ್ರಧಾನಿ ಎಂದು ಹೇಳಿದ್ದರು. ನಂತರದ ಎಂಟು ತಿಂಗಳಲ್ಲಿ ಮೋದಿ ಅವರ ಜನಪ್ರಿಯತೆ ಶೇ 37ಕ್ಕೆ ಏರಿತ್ತು. ಈಗ ಆರು ತಿಂಗಳಲ್ಲಿ ಶೇ ಮೂರರಷ್ಟು ಇಳಿಕೆಯಾಗಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications