ಇಂದಿಗೂ ಮೋದಿಯೇ ಅತ್ಯುತ್ತಮ ಪ್ರಧಾನಿ: 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ
ನರೇಂದ್ರ ಮೋದಿ ಅವರೇ ಭಾರತದ ಅತ್ಯುತ್ತಮ ಪ್ರಧಾನಿ ಎಂದು ಕನಿಷ್ಠ ಶೇ 34ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಮೋದಿ ಅವರ ಬಳಿಕ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಸ್ಥಾನ ಪಡೆದಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮತ್ತು ಜವಹರಲಾಲ್ ನೆಹರೂ ನಂತರದ ಸ್ಥಾನಗಳಲ್ಲಿದ್ದಾರೆ.
ಇಂಡಿಯಾ ಟುಡೆ ಸಮೂಹ ಮತ್ತು ಕಾರ್ವಿ ಇನ್ಸೈಟ್ಸ್ ಲಿಮಿಟೆಡ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ (ಎಂಓಟಿಎನ್) ಈ ಮಾಹಿತಿ ನೀಡಿದೆ.
ಸಮೀಕ್ಷೆಯಲ್ಲಿ ಪಾಲ್ಗೊಂಡದ್ದವರಲ್ಲಿ ಶೇ ಎಂಟರಷ್ಟು ಜನರು ಜವಹರಲಾಲ್ ನೆಹರೂ ಅತ್ಯುತ್ತಮ ಪ್ರಧಾನಿ ಎಂದು ಆಯ್ಕೆ ಮಾಡಿದ್ದರೆ, ಶೇ 5ರಷ್ಟು ಮಂದಿ ರಾಜೀವ್ ಗಾಂಧಿ ಅವರೆಡೆಗೆ ಒಲವು ವ್ಯಕ್ತಪಡಿಸಿದ್ದಾರೆ. ಆದರೆ ಮೋದಿ ಅವರ ಜನಪ್ರಿಯತೆ ಕಳೆದ ಸಮೀಕ್ಷೆಗಳಿಗೆ ಹೋಲಿಸಿದರೆ ಇಳಿಕೆಯಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್ಸಿ, ಎನ್ಪಿಆರ್ ವಿರುದ್ಧ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು, ನಿರುದ್ಯೋಗದ ಸಮಸ್ಯೆ, ರೈತರ ಸಂಕಷ್ಟಗಳು, ಆರ್ಥಿಕ ಕುಸಿತ ಮುಂತಾದವುಗಳ ವಿರುದ್ಧ ಜನರು ಅಸಮಾಧಾನ ಹೊಂದಿದ್ದಾರೆ. ಈ ಕಾರಣಗಳಿಂದಾಗಿ ಮೋದಿ ಜನಪ್ರಿಯತೆ ತಗ್ಗಿದೆ ಎಂದು ಹೇಳಲಾಗಿದೆ.

ಮೋದಿ ಪರ ಶೇ 34 ಮತ
ಸಮೀಕ್ಷೆಯಲ್ಲಿ ನರೇಂದ್ರ ಮೋದಿ ಅವರ ಪರ ಶೇ 34 ಮಂದಿ ಒಲವು ತೋರಿದ್ದು, ಇದರಂತೆ ಮೋದಿ ದೇಶದ ಅತ್ಯುತ್ತಮ ಪ್ರಧಾನಿ ಎನಿಸಿದ್ದಾರೆ. ಇಂದಿರಾ ಗಾಂಧಿ ಅವರು ದೇಶದ ಅತ್ಯುತ್ತಮ ಪ್ರಧಾನಿ ಎಂದು ಶೇ 16ರಷ್ಟು ಮಂದಿ ಹೇಳಿದ್ದಾರೆ. ಹಾಗೆಯೇ ಶೇ 13ರಷ್ಟು ಮಂದಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಅತ್ಯುತ್ತಮ ಪ್ರಧಾನಿ ಎಂದು ಹೆಸರಿಸಿದ್ದಾರೆ.

ಜನಪ್ರಿಯತೆಯಲ್ಲಿ ಕುಸಿತ
2019ರ ಆಗಸ್ಟ್ನಲ್ಲಿ ನಡೆದ ಎಂಓಟಿಎನ್ ಸಮೀಕ್ಷೆಯಲ್ಲಿ ಕೂಡ ನರೇಂದ್ರ ಮೋದಿ ಅತ್ಯುತ್ತಮ ಪ್ರಧಾನಿ ಎಂದು ಜನರು ಅಭಿಪ್ರಾಯಪಟ್ಟಿದ್ದರು. ಆದರೆ ಇತ್ತೀಚೆಗೆ ನಡೆದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಕೂಡ ಮೋದಿ ಶೇ 34ರಷ್ಟು ಮತಗಳನ್ನು ಪಡೆದಿದ್ದರೂ, ಆರು ತಿಂಗಳ ನಂತರದ ಸಮೀಕ್ಷೆಯಲ್ಲಿ ಅವರ ಜನಪ್ರಿಯತೆ ಶೇ ಮೂರರಷ್ಟು ಕುಸಿದಿದೆ.

ಇಂದಿರಾ ಜನಪ್ರಿಯತೆ ಏರಿಕೆ
2019ರ ಆಗಸ್ಟ್ನಲ್ಲಿ ನಡೆದ ಸಮೀಕ್ಷೆಯಲ್ಲಿ ಕನಿಷ್ಠ ಶೇ 14ರಷ್ಟು ಮಂದಿ ಇಂದಿರಾ ಗಾಂಧಿ ಅವರನ್ನು ಅತ್ಯುತ್ತಮ ಪ್ರಧಾನಿ ಎಂದು ಗುರುತಿಸಿದ್ದರು. ಈಚೆಗೆ ನಡೆದ ಸಮೀಕ್ಷೆಯಲ್ಲಿ ಮಾಜಿ ಪ್ರಧಾನಿಯ ಜನಪ್ರಿಯತೆಯಲ್ಲಿ ಶೇ 2ರಷ್ಟು ಏರಿಕೆಯಾಗಿದೆ.

ಎಂಟು ತಿಂಗಳಲ್ಲಿ ಹೆಚ್ಚಿದ್ದ ಜನಪ್ರಿಯತೆ
2019ರ ಜನವರಿಯಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಸಮೀಕ್ಷೆಯಲ್ಲಿ ಶೇ 19ರಷ್ಟು ಮಂದಿ ಮಾತ್ರ ನರೇಂದ್ರ ಮೋದಿ ದೇಶದ ಅತ್ಯುತ್ತಮ ಪ್ರಧಾನಿ ಎಂದು ಹೇಳಿದ್ದರು. ನಂತರದ ಎಂಟು ತಿಂಗಳಲ್ಲಿ ಮೋದಿ ಅವರ ಜನಪ್ರಿಯತೆ ಶೇ 37ಕ್ಕೆ ಏರಿತ್ತು. ಈಗ ಆರು ತಿಂಗಳಲ್ಲಿ ಶೇ ಮೂರರಷ್ಟು ಇಳಿಕೆಯಾಗಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications