ವಿಶೇಷ: ತಾಯಿಯ ಮಹತ್ವವನ್ನು ಸಾರಲು ಈ ಜನುಮ ಸಾಲದು
ಅಮ್ಮ ಎಂಬ ಪದ ಮಗು ತನ್ನ ಮೊದಲ ತೊದಲು ನುಡಿಯಲ್ಲೇ ಹೇಳುವ ಪದ. ಏನು ಅರಿಯದ ಸಮಯದಲ್ಲಿ ಒಡಲೊಳಗೆ ಬೆಚ್ಚಗೆ ಇರಿಸಿ ಕಾಪಾಡಿದ ಅಮ್ಮ ಇನ್ನು ಪ್ರಪಂಚಕ್ಕೆ ಲಗ್ಗೆಯಿಟ್ಟ ಮೇಲೆ ಪ್ರತಿ ಹೆಜ್ಜೆಯ ಜೊತೆಯಾದಳು ಅಮ್ಮ. ನಾವು ನಮ್ಮನ್ನು ಅರಿತುಕೊಳ್ಳುವ ಮೊದಲೇ ಅಮ್ಮನನ್ನು ಅವಲಂಬಿಸಿ ಪ್ರತಿ ಅಮ್ಮನ ಭಾವನೆಗಳಿಗೆ ಸ್ಪಂದಿಸಿರುತ್ತೇವೆ. ಜಗತ್ತಲ್ಲಿ ಅಮ್ಮನ ಪ್ರೀತಿ, ತ್ಯಾಗ ಮತ್ತು ವಾತ್ಸಲ್ಯಕ್ಕೆ ಮಿಗಿಲಾದವು ಯಾವುದು ಇಲ್ಲ. ಅವಳ ನಿಷ್ಕಲ್ಮಶದ ಪ್ರೀತಿಗೆ ನಾವು ಪ್ರತಿಯಾಗಿ ಏನನ್ನು ನೀಡಲು ಸಾಧ್ಯವಿಲ್ಲ ಹಾಗಾಗಿ ಅಮ್ಮನ ಮಹತ್ವವನ್ನು ಜಗತ್ತಿಗೆ ತಿಳಿಸಲು ಪ್ರತಿ ವರ್ಷ ಮೇ ತಿಂಗಳು 2ನೇ ಭಾನುವಾರದಂದು ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ.
ಈ ವಿಶ್ವ ತಾಯಂದಿರ ದಿನವು ಮೊದಲು ಜಾರಿಗೆ ಬಂದಿದ್ದು ಅಮೆರಿಕದಲ್ಲಿ. ಅಮೆರಿಕದ ವರ್ಜೀನಿಯಾದಲ್ಲಿರುವ ಆನ್ ರೀವ್ಸ್ ಜಾರ್ವಿಸ್ ಎನ್ನುವ ಮಹಿಳೆ ಮದರ್ ಡೇ ವರ್ಕ್ ಕ್ಲಬ್ ಗಳನ್ನು ಪ್ರಾರಂಭಿಸಿ ತಾಯಿಯಾದ ಹೆಣ್ಣುಮಕ್ಕಳು ಹೇಗೆ ಮಕ್ಕಳು ಹಾಗು ಕುಟುಂಬ ವರ್ಗದವರನ್ನು ಯಾವ ರೀತಿ ನಿರ್ವಹಣೆ, ಸಂರಕ್ಷಣೆ ಮಾಡಬೇಕು ಎಂದು ತರಬೇತಿ ಕಲಿಸುತ್ತಿದ್ದರು.1905 ರಲ್ಲಿ ಇವರು ಮರಣ ಹೊಂದಿದರು. ಇವರ ಸ್ಮರಣಾರ್ಥಕ್ಕಾಗಿ ಇವರ ಮಗಳು ಅಮೆರಿಕದ ಶಾಂತಿ ಕಾರ್ಯಕರ್ತೆಯಾದ ಅನಾ ಜಾರ್ವಿಸ್ ಅವರು ವಿಶ್ವ ತಾಯಂದಿರ ದಿನಾಚರಣೆಯನ್ನು ಜಾರಿಗೆ ತಂದರು.
ಮೇ 9 1914 ರಲ್ಲಿ ಅಮೆರಿಕದ ಅಧ್ಯಕ್ಷರು ಆಗಿದ್ದ ವುಡ್ರೋ ವಿಲ್ಸನ್ ಅವರು ಪ್ರತಿ ವರ್ಷ ಮೇ 2ನೇ ಭಾನುವಾರದಂದು ತಾಯಂದಿರ ದಿನ ಆಚರಣೆಯನ್ನು ಕಾನೂನು ಪ್ರಕಾರ ಜಾರಿಗೊಳಿಸಿದರು.ಅಮೆರಿಕ, ಭಾರತ ಹಾಗೂ ಇನ್ನು ಹಲವು ದೇಶಗಳಲ್ಲಿ ಈ ದಿನವನ್ನು ತಾಯಂದಿರ ದಿನವಾಗಿ ಆಚರಿಸಲಾಗುತ್ತದೆ.

ನಮ್ಮ ಭಾರತೀಯ ಸಂಸ್ಕೃತಿಯ ಪ್ರಕಾರ ತಾಯಿಯನ್ನು ಮಣ್ಣಿಗೆ, ಜಲಕ್ಕೆ, ಅಗ್ನಿಗೆ, ವಿದ್ಯೆಗೆ, ಧನಕ್ಕೆ ಪ್ರತಿಯೊಂದು ವಿಚಾರದಲ್ಲಿಯೂ ತಾಯಿಯನ್ನು ಸ್ಮರಿಸುತ್ತೇವೆ. ತಾಯಿಯ ಮಹತ್ವವನ್ನು ಜಗತ್ತಿಗೆ ಸಾರಲು ಈ ಜನುಮ ಸಾಲದು, ಪ್ರತಿ ಉಸಿರಿನ ಅಣುವಿನಲ್ಲೂ ಅವಳನ್ನು ಸ್ಮರಿಸಿ ಆಧರಿಸಿ ಸಾಗೋಣ.
ಜಗತ್ತನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಭೂಮಿತಾಯಿಗೆ, ಮಕ್ಕಳನ್ನು ಲಾಲಿಸಿ ಪಾಲನೆ ಮಾಡುವ ಎಲ್ಲಾ ತಾಯಂದಿರಿಗೆ ವಿಶ್ವ ತಾಯಂದಿರ ದಿನದ ಶುಭಾಶಯಗಳು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications