ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಬಿಜೆಪಿ ಚುನಾವಣೆ ಗೆದ್ದಿದ್ದು ಹೇಗೆ?
ಬೆಂಗಳೂರು, ಸೆ. 06: ಬಿ.ಎಸ್. ಯಡಿಯೂರಪ್ಪ ಬಳಿಕ ಕರ್ನಾಟಕದಲ್ಲಿ ಬಿಜೆಪಿಯನ್ನು ಮುನ್ನಡೆಸುವವರು ಯಾರು? ಈ ಪ್ರಶ್ನೆ ಕೇವಲ ಬಿಜೆಪಿ ನಾಯಕರು ಅಥವಾ ಬಿಜೆಪಿ ಹೈಕಮಾಂಡ್ಗೆ ಮಾತ್ರ ದೊಡ್ಡ ಸವಾಲಾಗಿರಲಿಲ್ಲ. ಜೊತೆಗೆ ವಿರೋಧ ಪಕ್ಷಗಳ ನಾಯಕರೂ ಕೂಡ ಈ ಬಗ್ಗೆ ತಮ್ಮ ತಮ್ಮಲ್ಲಿಯೇ ಚರ್ಚೆ ಮಾಡಿಕೊಂಡಿದ್ದೂ ಇದೆ. ಆದರೆ ಬಹುದೊಡ್ಡ ಸವಾಲವನ್ನು ಎಳೆದುಕೊಂಡು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿಯೇ ಬಿಟ್ಟಿತು. ಅದರೊಂದಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯದಲ್ಲಿ ಅಪಾಯವನ್ನೂ ಮೈಮೇಲೆ ಎಳೆದುಕೊಂಡಿತು.
ಮುಂದೆ ಚುನಾವಣೆ ಬರಲಿ ಆಗ ಯಡಿಯೂರಪ್ಪನವರ ಅಗತ್ಯ ಗೊತ್ತಾಗುತ್ತದೆ ಎಂದು ಅವರ ಬೆಂಬಲಿಗರು ಮಾತನಾಡಿಕೊಂಡಿದ್ದೂ ಇದೆ. ಇದೀಗ ರಾಜ್ಯ ಬಿಜೆಪಿ ನಾಯಕತ್ವದಿಂದ ಪಕ್ಷದ ಆಗಿರುವ ಪರಿಣಾಮಗಳಿಗೆ ಉತ್ತರ ಸಿಕ್ಕಿದೆ. ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣಾ ಫಲಿತಾಂಶದ ಮೂಲಕ ಬಿಜೆಪಿ ರಾಷ್ಟ್ರೀಯ ಪಕ್ಷ ಎಂಬುದು ಸಾಬೀತಾಗಿದೆ.

ಬಿಜೆಪಿಗೆ ಭರ್ಜರಿ ಜಯ!
ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಎರಡು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತವಾಗಿದ್ದು, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಸಂಖ್ಯಾಬಲದಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲ. ಆದರೂ ಅಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೇರಲು ಸಿದ್ಧವಾಗಿದೆ.

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಪರಿಣಾಮ!
ಈ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶದ ಮೂಲಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಿಂದ ಬಿಜೆಪಿ ಮೇಲೆ ಅಷ್ಟೇನೂ ಪರಿಣಾಮವಾಗಿಲ್ಲ ಎಂಬುದು ಕಂಡು ಬಂದಿದೆ. ಈ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಸ, ಪ್ರಚಾರ ಮಾಡಿರಲಿಲ್ಲ. ರಾಜ್ಯ ಪ್ರವಾಸ ಮಾಡುವುದಾಗಿ ಹೇಳಿದ್ದರೂ ಈ ಚುನಾವಣೆಗೆ ಗಮನ ಕೊಟ್ಟಿರಲಿಲ್ಲ. ಆ ಮೂಲಕ ತಮ್ಮ ಅಸ್ತಿತ್ವವನ್ನು ಚುನಾವಣೆ ಫಲಿತಾಂಶದ ಮೂಲಕ ತೀರಿಸಲು ಅವರು ಸಜ್ಜಾಗಿದ್ದರು ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಬಂದಿದೆ. ಆದರೆ ಅದಾಗಿಲ್ಲ ಎನ್ನುತ್ತಿವೆ ರಾಜ್ಯ ಬಿಜೆಪಿ ಮೂಲಗಳು.

ಮತದಾನದ ಮೂಲಕ ಹೈಕಮಾಂಡ್ಗೆ ಬೆಂಬಲ?
ಕಳೆದ ಸುಮಾರು ಐದು ದಶಕಗಳಿಂದ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿರುವುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿ ತಾನೇ ಮಾಡಿಕೊಂಡಿರುವ ನಿಯಮದಂತೆ 75 ವರ್ಷಗಳ ಬಳಿಕ ಸಕ್ರಿಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಬೇಕು. ಹಾಗೆ ಬಿಜೆಪಿ ಹೈಕಮಾಂಡ್ ಮಾಡಿದ್ದ ನಿಯಮದಂತೆ ಯಡಿಯೂರಪ್ಪ ಅವರ ಬದಲಾವಣೆ ಆಗಿದೆ ಎಂಬುದನ್ನು ಬಿಜೆಪಿ ಮತದಾರರು ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತ ಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ರಾಜಕೀಯ ವಿಶ್ಲೇಷಣೆ ಆರಂಭವಾಗಿದೆ.

ಜನವರಿಯಲ್ಲಿದೆ ಮಹತ್ವದ ಚುನಾವಣೆ!
ಇದು ಕೇವಲ ಮೂರು ಮಹಾನಗರಗಳಲ್ಲಿ ನಡೆದಿರುವ ಚುನಾವಣಾ ಫಲಿತಾಂಶ. ಇಡೀ ರಾಜ್ಯದಲ್ಲಿ ಚುನಾವಣೆ ನಡದಾಗ ಮಾಜಿ ಸಿಎಂ ಯಡಿಯೂರಪ್ಪ ಅವರ ಅಗತ್ಯ ಬಿಜೆಪಿಗಿದೆ ಎಂಬ ಮಾತುಗಳು ಇದೇ ಸಂದರ್ಭದಲ್ಲಿ ವ್ಯಕ್ತವಾಗುತ್ತಿವೆ. ಬರುವ ಜನವರಿಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಆಡಳಿತ ಪಕ್ಷವೂ ಆಗಿರುವ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಪಡೆಬೇಕಾಗಿದೆ. ಜೊತೆಗೆ ಆಗಲೇ ವಿಧಾನ ಪರಿಷತ್ನಲ್ಲೂ ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಗಳಿವೆ. ಹೀಗಾಗಿ ಆ ಚುನಾವಣೆಯ ಫಲಿತಾಂಶ ಬಿಜೆಪಿ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ. ಅಷ್ಟರೋಳಗೆ ಮತ್ತೆ ಏನೇನು ರಾಜಕೀಯ ಬೆಳವಣಿಗೆಳಗಾಬಹುದು ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆ ಈ ಮೂರು ಮಹಾನಗರಪಾಲಿಕೆಗಳ ಚುನಾವಣೆ ಫಲಿತಾಂಶದ ಮೇಲೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಿರುವುದರ ಪರಿಣಾಮ ಕಂಡು ಬಂದಿಲ್ಲ ಎಂಬುದಂತೂ ಬಹಿರಂಗವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications