ಮೈಸೂರು ರಾಜರಿಗೆ ಅಲಮೇಲಮ್ಮನ ಶಾಪ; ಇಂದಿಗೂ ನಡೆಯುತ್ತೆ ಪೂಜೆ...
ಮೈಸೂರು ಅರಮನೆಯಲ್ಲಿ ನವರಾತ್ರಿಯ ಅಷ್ಟು ದಿನವೂ ಖಾಸಗಿ ದರ್ಬಾರ್ ಜತೆಯಲ್ಲಿ ವಿವಿಧ ಪೂಜೆಗಳನ್ನು, ಧಾರ್ಮಿಕ ವಿಧಿ ವಿಧಾನದಂತೆ ನಡೆಸಲಾಗುತ್ತದೆ. ಇಂತಹ ಪೂಜೆಗಳ ನಡುವೆ ಶಾಪ ವಿಮೋಚನೆಗಾಗಿ ಅಲಮೇಲಮ್ಮನಿಗೂ ಪೂಜೆ ನಡೆಸುತ್ತಾ ಬಂದಿದ್ದಾರೆ.
ಹಾಗಾದರೆ ಅಲಮೇಲಮ್ಮ ಯಾರು? ಆಕೆಗೇಕೆ ಪೂಜೆ ಮಾಡುತ್ತಾರೆ? ಎಂಬ ಪ್ರಶ್ನೆಗಳು ಹೆಚ್ಚಿನವರನ್ನು ಕಾಡಬಹುದು. ಆದರೆ ಮೈಸೂರು ಭಾಗದಲ್ಲಿ ಮೈಸೂರು ಮಹಾರಾಜರು ಮತ್ತು ಅಲಮೇಲಮ್ಮನ ಬಗೆಗೆ ಗೊತ್ತೇ ಇರುತ್ತದೆ. ಹೊರಗಿನ ಹೆಚ್ಚಿನ ಜನಕ್ಕೆ ಇದು ಅರಿವಿಗೆ ಬಂದಿರುವುದಿಲ್ಲ. ಇಷ್ಟಕ್ಕೂ ಅಲಮೇಲಮ್ಮನಿಗೆ ಏಕೆ ಪೂಜೆ ನಡೆಯುತ್ತದೆ ಎಂಬುದನ್ನು ನೋಡುವುದಾದರೆ, ಅದಕ್ಕೊಂದು ಚಾರಿತ್ರಿಕ ಹಿನ್ನಲೆ ಸಿಗುತ್ತದೆ. ಅದು ಏನೆಂದರೆ...

ತಲಕಾಡಿಗೆ ಓಡಿಹೋದ ಶ್ರೀರಂಗರಾಯ
ವಿಜಯನಗರದ ಅರಸರ ಪ್ರತಿನಿಧಿಯಾಗಿ ಶ್ರೀರಂಗಪಟ್ಟಣ ಪ್ರದೇಶವನ್ನು ಆಳುತ್ತಿದ್ದ ರಾಜ ಶ್ರೀರಂಗರಾಯನ ಪತ್ನಿಯೇ ಅಲಮೇಲಮ್ಮ. ಮೈಸೂರಿನ ರಾಜ ಒಡೆಯರು ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡ ನಂತರ ಅಲ್ಲಿದ್ದ ಶ್ರೀರಂಗರಾಯ ತಲಕಾಡಿಗೆ ಓಡಿಹೋಗಿ ಅಲ್ಲಿಯೇ ಪತ್ನಿಯೊಡನೆ ವಾಸಿಸುತ್ತಿರುತ್ತಾನೆ. ಕೆಲದಿನಗಳ ನಂತರ ಶ್ರೀರಂಗರಾಯ ಮರಣ ಹೊಂದುತ್ತಾನೆ. ಆ ಸಮಯದಲ್ಲಿ ನವರಾತ್ರಿ ಉತ್ಸವಕ್ಕೆ ಶ್ರೀರಂಗನಾಥ ಸ್ವಾಮಿಯನ್ನು ಅಲಂಕರಿಸಲು ತಲಕಾಡಿನಲ್ಲಿದ್ದ ಅಲಮೇಲಮ್ಮನಿಗೆ ಅವಳಲ್ಲಿದ್ದ ಒಡವೆಗಳನ್ನು ತಂದು ತಮಗೊಪ್ಪಿಸುವಂತೆ ರಾಜಾಜ್ಞೆ ಮಾಡಲಾಗುತ್ತದೆ. ಆದರೆ ಅಲಮೇಲಮ್ಮ ರಾಜಾಜ್ಞೆಯನ್ನು ತಿರಸ್ಕರಿಸುತ್ತಾಳೆ. ಆಗ ಆಕೆಯಿಂದ ಬಲವಂತವಾಗಿ ಒಡವೆಗಳನ್ನು ಕಿತ್ತುಕೊಂಡು ಬರುವಂತೆ ರಾಜಒಡೆಯರು ಅಪ್ಪಣೆ ಮಾಡುತ್ತಾರೆ. ಆಗ ರಾಜಧಾನಿ ಶ್ರೀರಂಗಪಟ್ಟಣದಿಂದ ರಾಜಭಟರು ಅಲಮೇಲಮ್ಮ ವಾಸವಿದ್ದ ತಲಕಾಡಿನತ್ತ ಹೊರಡುತ್ತಾರೆ.

ಶಾಪ ನೀಡಿದ ಅಲಮೇಲಮ್ಮ
ರಾಜಭಟರು ತಲಕಾಡಿನತ್ತ ಬರುತ್ತಿರುವ ವಿಷಯ ತಿಳಿದ ಅಲಮೇಲಮ್ಮ, ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ತಲಕಾಡಿನಿಂದ ಮಾಲಂಗಿಯತ್ತ ಓಡಿಹೋಗುತ್ತಾಳೆ. ಆದರೆ ರಾಜಭಟರು ಅವಳ ಬೆನ್ನಟ್ಟುತ್ತಾರೆ. ಆಗ ಅವಳಿಗೆ ಅವರಿಂದ ತಪ್ಪಿಸಿಕೊಂಡು ಮುಂದೆ ಸಾಗಲು ಸಾಧ್ಯವಾಗುವುದಿಲ್ಲ. ಬೇರೆ ದಾರಿ ಕಾಣದ ಆಕೆ ಕೋಪದಿಂದ "ಮಾಲಂಗಿ ಮಡುವಾಗಿ, ತಲಕಾಡು ಮರಳಾಗಿ, ಮೈಸೂರು ಅರಸರಿಗೆ ಮಕ್ಕಳಾಗದಿರಲಿ" ಎಂದು ಶಾಪ ನೀಡಿ ತನ್ನಲಿದ್ದ ಒಡವೆ ಗಂಟನ್ನು ಉಡಿಯಲ್ಲಿ ಕಟ್ಟಿಕೊಂಡು ಮಾಲಂಗಿ ಸಮೀಪದ ಕಾವೇರಿ ನದಿಗೆ ಹಾರಿ ಪ್ರಾಣ ಬಿಡುತ್ತಾಳೆ.

ಶಾಪ ವಿಮೋಚನೆಗೆ ವಿಶೇಷ ಪೂಜೆ
ಅಲಮೇಲಮ್ಮನ ಶಾಪದ ಪ್ರಭಾವ ಎನ್ನುವಂತೆ ಅಂದಿನಿಂದ ಇಂದಿನ ತನಕವೂ ತಲಕಾಡು ಮರಳು ತುಂಬಿದ ಪ್ರದೇಶವಾಗಿದೆ. ಹಾಗೆಯೇ ಇದರ ಸಮೀಪದ ಮಾಲಂಗಿ ಕೂಡ ಮಡುವಾಗಿ ಭಯಂಕರ ಪ್ರಪಾತವಾಗಿದೆ. ಅಷ್ಟೇ ಅಲ್ಲ ಆ ಕಾಲದಿಂದಲೂ ಮೈಸೂರು ಅರಸರಿಗೆ ಮಕ್ಕಳಾಗದೆ ಅವರು ದತ್ತು ಪಡೆದವರಿಗೆ ಮಾತ್ರ ಸಂತಾನ ಪ್ರಾಪ್ತವಾಗುವುದು ನಡೆದುಕೊಂಡು ಬರುತ್ತಿದೆ. ಈ ಘಟನೆ ನಡೆದ ಬಳಿಕ ಮಹಾರಾಜರು ಅಲಮೇಲಮ್ಮನ ಶಾಪ ನಿವಾರಣೆಗಾಗಿ ಅಲಮೇಲಮ್ಮನ ಚಿನ್ನದ ವಿಗ್ರಹವೊಂದನ್ನು ಮಾಡಿಸಿ ಅವರ ಕಾಲದಿಂದಲೇ ನವರಾತ್ರಿ ಹಬ್ಬದಲ್ಲಿ ಅದಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ಜಾರಿಗೆ ತಂದರು ಎನ್ನಲಾಗಿದ್ದು, ಅಲ್ಲಿಂದ ಇಲ್ಲಿವರೆಗೂ ನಿರಂತರವಾಗಿ ಪೂಜೆ ನಡೆದುಕೊಂಡು ಬಂದಿದೆ.

ಅರಮನೆಯಲ್ಲಿ ಆಯುಧ ಪೂಜೆ
ಐತಿಹಾಸಿಕ ಅರಮನೆಯಲ್ಲಿ ಆಯುಧ ಪೂಜಾ ವಿಧಿವಿಧಾನಗಳು ಕೂಡ ನಡೆಯುತ್ತವೆ. ಆಯುಧ ಪೂಜಾ ದಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಾತಃಕಾಲದಿಂದಲೇ ಪೂಜಾ ಕಾರ್ಯ ಆರಂಭಿಸಿ ಮಧ್ಯಾಹ್ನದವರೆಗೂ ನಡೆಸುತ್ತಾರೆ. ಅರಮನೆಯ ಆವರಣದಲ್ಲಿ ಆಯುಧ ಪೂಜೆಯನ್ನು ರಾಜಪರಂಪರೆಯಂತೆ ಆರಂಭಿಸಿ ಮೊದಲು ಸಾಲಿಗ್ರಾಮ ಪೂಜೆ ನೇರವೇರಿಸಿ ಆ ನಂತರ ಅರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯಕ್ಕೆ ಚಿನ್ನದ ಖಡ್ಗ, ಪಿಸ್ತೂಲು ಸೇರಿದಂತೆ ಅರಮನೆಯ ಆಯುಧಗಳನ್ನು ಚಿನ್ನಲೇಪಿತ ಪಲ್ಲಕ್ಕಿಯಲ್ಲಿ ಕೊಂಡೊಯ್ದು ಪುರಾತನ ಬಾವಿಯ ಗಂಗೆಯಿಂದ ಶುಚಿಗೊಳಿಸಿ ಬಳಿಕ ಪೂಜೆ ಮಾಡಲಾಗುತ್ತದೆ. ಇದೇ ಸಮಯದಲ್ಲಿ ಅರಮನೆಯಲ್ಲಿ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಪೂಜೆ ಹೋಮ ಹವನಗಳನ್ನು ಮಾಡುತ್ತಾರೆ.

ಸಿಂಹಾಸನದ ಸಿಂಹಗಳ ವಿಸರ್ಜನೆ
ಇತ್ತ ಕೋಡಿ ಸೋಮೇಶ್ವರ ದೇವಾಲಯದಿಂದ ಶುಚಿಗೊಳಿಸಿ ಪಲ್ಲಕಿಯಲ್ಲಿ ತಂದ ಆಯುಧ ಸೇರಿದಂತೆ ಇತರೆ ವಸ್ತುಗಳನ್ನು ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಿಸಲಾಗುತ್ತದೆ. ಆ ನಂತರ ಆಗಮಿಸಿದ ರಾಜಪುರೋಹಿತರು ನೀಡಿದ ಮಾರ್ಗದರ್ಶನದಂತೆ ಆಯುಧಗಳನ್ನು ಜೋಡಿಸಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಲ್ಲ ಆಯುಧಗಳಿಗೆ ಪೂಜೆ ಸಲ್ಲಿಸುತ್ತಾರೆ. ಇದೆಲ್ಲದರ ನಡುವೆ ಖಾಸಗಿ ದರ್ಬಾರ್ ಆರಂಭವಾಗುವ ಮುನ್ನ ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಸಲ್ಲಿಸಿ ವಿಸರ್ಜಿಸಲಾಗುತ್ತದೆ.

ಪಟ್ಟದ ಆನೆ, ಕುದುರೆ, ಹಸುವಿಗೆ ಪೂಜೆ
ಬೆಳಗ್ಗೆ ಚಂಡಿಕಾ ಹೋಮ ಆರಂಭಿಸಿ ಬಳಿಕ ಪೂರ್ಣಾಹುತಿ ನಡೆಯುತ್ತದೆ. ಆ ನಂತರ ಕರಿಕಲ್ಲು ತೊಟ್ಟಿಯಲ್ಲಿ ಆಯುಧ ಪೂಜೆಯ ವಿವಿಧ ಕ್ರಮಗಳನ್ನು ನೆರವೇರಿಸಲಾಗುತ್ತದೆ. ಇದೇ ವೇಳೆಯಲ್ಲಿ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆಯನ್ನು ಮಾಡಲಾಗುತ್ತದೆ. ಆ ನಂತರ ಅರಮನೆಯಲ್ಲಿರುವ ಪಟ್ಟದ ಆನೆ, ಪಟ್ಟದ ಕುದುರೆಗಳು, ಪಟ್ಟದ ಒಂಟೆಗಳು, ಪಟ್ಟದ ಹಸುಗಳಿಗೆ ಸಂಪ್ರದಾಯಬದ್ಧ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications