ಮೆಟ್ರೋದಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದ 'ನಾಗವಲ್ಲಿ': ವಿಡಿಯೋ
ಮೆಟ್ರೋದಲ್ಲಿ ನಾಗವಲ್ಲಿ ಕಾಣಿಸಿಕೊಂಡಿದ್ದು ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಏನಿದೆ?
ಕನ್ನಡ ಚಿತ್ರರಂಗದಲ್ಲಿ ಡಾ.ವಿಷ್ಣುವರ್ಧನ್ ಅಭಿನಯದ ಆಪ್ತಮಿತ್ರ ಸಿನಿಮಾದ ನಾಗವಲ್ಲಿ ಪಾತ್ರ ಇಂದಿಗೂ ಮರಿಯುವಂತದ್ದಲ್ಲ. ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಸೌಂದರ್ಯಾ ಅಭಿನಯದ 'ಆಪ್ತಮಿತ್ರ' (2004) ಚಿತ್ರದಲ್ಲಿ "ಸರಸಕು ರಾ...ರಾ..." ಎಂದು ಪ್ರೇಕ್ಷಕರನ್ನು ಸೆಳೆದ ಅಮೋಘ ಪಾತ್ರ ನಾಗವಲ್ಲಿಯದ್ದು. ಇಂದಿಗೂ ಜನರಲ್ಲಿ ಮಾತ್ರ ನಾಗವಲ್ಲಿ ಪಾತ್ರ ಅಚ್ಚಳಿಯದಂತೆ ಉಳಿದಿದೆ. ಈ ನಡುವೆ ನಾಗವಲ್ಲಿ ಮೆಟ್ರೋದಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ನಾಗವಲ್ಲಿ ಅಂದಾಕ್ಷಣ ಶಾಕ್ ಆಗಬೇಡಿ. ನಾಗವಲ್ಲಿ ಉಡುಪುದಾರಿಣಿಯೊಬ್ಬಳು ಮೆಟ್ರೋದಲ್ಲಿ ಕಾಣಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೆಟ್ರೋದಲ್ಲಿ ಆಕೆ ನಾಗವಲ್ಲಿಯಂತೇ ನಟಿಸಿದ್ದಾಳೆ.
ನಿನ್ನೆಯಷ್ಟೇ ಯುವತಿಯೊಬ್ಬಳು ಗಾಜಿಯಾಬಾದ್ನಲ್ಲಿ ಹೆದ್ದಾರಿ ಮಧ್ಯೆ ಕಾರು ನಿಲ್ಲಿಸಿ ರೀಲ್ಸ್ ಮಾಡಲು ಶುರು ಮಾಡಿದ್ದಳು. ಇದರಿಂದ ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ಆಕೆಗೆ 17 ಸಾವಿರ ರೂಪಾಯಿ ದಂಡ ವಿಧಿಸಿದ್ದರು. ಈ ಘಟನೆ ಮಾಸುವ ಮೊದಲೇ ಈಗ ನೋಯ್ಡಾದಲ್ಲಿ ಯುವತಿಯೊಬ್ಬಳು ನಾಗವಲ್ಲಿ ರೂಪ ತಾಳಿ ಪ್ರಯಾಣಿಕರನ್ನು ಬೆದರಿಸಿದ್ದಾಳೆ.
ತಲೆಗೂದಲು ಹರಡಿಕೊಂಡು, ಕಣ್ ಕಾಡಿಗೆಯನ್ನು ಕಣ್ಣು ತುಂಬಾ ಹಚ್ಚಿಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿ, ದೊಡ್ಡ ಕಣ್ಣು ಬಿಡುತ್ತಾ, ಏನೇನೋ ಬಡಬಡಾಯಿಸುತ್ತಾ ಇರುವುದನ್ನು ಕಂಡು ಮೆಟ್ರೋದಲ್ಲಿ ಕೆಲವರು ಹೆದರಿಕೊಂಡು ಓಡಿ ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ.

ಈ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಜನರಿಂದ ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಡಿಯೋದಲ್ಲಿ ಹುಡುಗಿ ನಡೆದುಕೊಳ್ಳುತ್ತಿರುವ ರೀತಿ ತುಂಬಾ ಭಯಾನಕವಾಗಿ ಕಾಣಿಸುತ್ತದೆ. ಮೆಟ್ರೋದಲ್ಲಿದ್ದ ಮಗು ಕೂಡ ಆಕೆಯನ್ನು ಕಂಡು ಹೆದರುತ್ತದೆ. ಅನೇಕ ಜನರು ಹುಡುಗಿಯ ಈ ಕಾರ್ಯಗಳನ್ನು ತುಂಬಾ ತಮಾಷೆಯಾಗಿ ಕಾಣುತ್ತಿದ್ದಾರೆ. ಆದರೆ ಅನೇಕ ಜನರು ಕೋಪಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಈ ವಿಡಿಯೋಗೆ ಜನರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. 'ವೇದಿಕೆಯ ಮೇಲೆ ಈ ಕೆಲಸ ಮಾಡಿದ್ದರೆ ಉತ್ತಮ ನಟಿಯಾಗಬಹುದಿತ್ತು' ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ. 'ನಾಟಕ ರಂಗಭೂಮಿಯಲ್ಲಿ ಚೆನ್ನಾಗಿ ಕಾಣುತ್ತದೆ. ಆದರೆ ನಿಜ ಜೀವನದಲ್ಲಿ ಅಲ್ಲ' ಎಂದು ಮತ್ತೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಈ ಹುಡುಗಿ ಭದ್ರತಾ ತಪಾಸಣೆಯಿಂದ ಹೇಗೆ ಹೊರಬಂದಳು ಎಂದು ಮತ್ತೊಬ್ಬರು ಪ್ರಶ್ನೆ ಮಾಡಿದ್ದಾರೆ. 'ಇದನ್ನು ನೋಡಲು ನನಗೆ ಆಶ್ಚರ್ಯವಾಗಿದೆ. ಅವರ ಓವರ್ ಆ್ಯಕ್ಟಿಂಗ್ಗೆ 50 ರೂಪಾಯಿ ಕಡಿತ ಮಾಡಿ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications