ಪಿಎಂ ಕೇರ್ಸ್ ಮಕ್ಕಳ ಯೋಜನೆಗೆ ಪ್ರಧಾನಿ ಮೋದಿ ನೆರವು ಬಿಡುಗಡೆ
ನವದೆಹಲಿ, ಮೇ 30: ಕೋವಿಡ್ ಸಾಂಕ್ರಾಮಿಕ ಕಾಯಿಲೆಯಿಂದ ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳಿಗಾಗಿ ಕೇಂದ್ರ ಸರಕಾರ ರೂಪಿಸಿರುವ PM CARES for Children ಯೋಜನೆಗೆ ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹೆಲ್ತ್ ಕಾರ್ಡ್ ಸೇರಿದಂತೆ ವಿವಿಧ ನೆರವು ಬಿಡುಗಡೆ ಮಾಡಲಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೋಮವಾರ ಬೆಳಗ್ಗೆ 10:30ಕ್ಕೆ ಯೋಜನೆಯ ವಿವಿಧ ಸಹಾಯ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭಾನುವಾರ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.
"ಮೇ 30, ನಾಳೆ ಬೆಳಗ್ಗೆ 10:30ಕ್ಕೆ ಪಿಎಂ ಕೇರ್ಸ್ನ ಮಕ್ಕಳ ಯೋಜನೆಯ ಅಡಿಯಲ್ಲಿ ಸಹಾಯ ಬಿಡುಗಡೆ ಮಾಡುತ್ತೇನೆ. ಕೋವಿಡ್-೧೯ ಕಾಯಿಲೆಗೆ ತಮ್ಮ ಪೋಷಕರನ್ನು ಕಳೆದುಕೊಂಡವರಿಗೆ ನಾನು ಈ ಯೋಜನೆ ಮೂಲಕ ನೆರವು ಒದಗಿಸುತ್ತಿದ್ದೇವೆ" ಎಂದು ಭಾನುವಾರ ಸಂಜೆ ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು.
ಕೋವಿಡ್ನಿಂದ ತಂದೆ ತಾಯಿ ಕಳೆದುಕೊಂಡು ಅನಾಥವಾಗಿರುವ ಶಾಲಾ ಮಕ್ಕಳಿಗೆ ಪ್ರಧಾನಿ ವಿದ್ಯಾರ್ಥಿವೇತನ ಸೌಲಭ್ಯ ಒದಗಿಸಲಿದ್ದಾರೆ. ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ನ ಪಾಸ್ಬುಕ್, ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯ ಹೆಲ್ತ್ ಕಾರ್ಡ್ ಇತ್ಯಾದಿಗಳನ್ನು ಒದಗಿಸಲಾಗುವುದು ಎಂದು ಪಿಎಂಒ ಕಚೇರಿ ಹೇಳಿದೆ.

ಏನಿದು ಯೋಜನೆ?
ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಒಂದೇ ಕುಟುಂಬದ ಹಲವು ಮಂದಿ ಸಾವನ್ನಪ್ಪಿ ಅನೇಕ ಮಕ್ಕಳು ಅನಾಥವಾಗಿರುವ ಕರುಣಾಜನಕ ಪರಿಸ್ಥಿತಿ ಕಳೆದೆರಡು ವರ್ಷದಲ್ಲಿ ಉದ್ಭವಿಸಿದೆ. ಇಂಥ ಸಂತ್ರಸ್ತ ಮಕ್ಕಳ ನೆರವಿಗೆಂದು ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಕೇಂದ್ರ ಸರಕಾರ 2021 ಮೇ 29ರಂದು ಆರಂಭಿಸಿದೆ. ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ 2020 ಮಾರ್ಚ್ 11ರಿಂದ 2022 ಫೆಬ್ರವರಿ 28ರ ಅವಧಿಯಲ್ಲಿ ಮಗುವಿನ ತಂದೆ-ತಾಯಿ ಅಥವಾ ಅಧಿಕೃತ ಪೋಷಕರು ಅಥವಾ ದತ್ತು ಪೋಷಕರು ಸಾವನ್ನಪ್ಪಿದ್ದರೆ ಅಂಥ ಮಕ್ಕಳಿಗೆ ಇಂದು ಯೋಜನೆಯ ಫಲವನ್ನು ನೀಡಲಾಗುತ್ತಿದೆ. ಕಳೆದ ವರ್ಷ ಕೇಂದ್ರ ಸರಕಾರ ಇಂಥ ಮಕ್ಕಳನ್ನು ನೊಂದಾಯಿಸಲು ಆನ್ಲೈನ್ ಪೋರ್ಟಲ್ ಆರಂಭಿಸಿತ್ತು.

ಏನೇನು ಫಲ?
ಸಂತ್ರಸ್ತ ಮಕ್ಕಳು ವಯಸ್ಸಿಗೆ ಬರುವವರೆಗೂ ಸರಕಾರ ಬಹಳಷ್ಟು ಯೋಗಕ್ಷೇಮದ ವ್ಯವಸ್ಥೆ ಮಾಡುತ್ತದೆ. ಮಕ್ಕಳಿಗೆ ಶಿಕ್ಷಣದ ವ್ಯವಸ್ಥೆ ಮಾಡುತ್ತದೆ. ವಿದ್ಯಾರ್ಥಿವೇತನ ಒದಗಿಸುತ್ತದೆ. ವಸತಿ, ಆಹಾರದ ವ್ಯವಸ್ಥೆ ಮಾಡುತ್ತದೆ. ಹೆಲ್ತ್ ಇನ್ಷೂರೆನ್ಸ್ ಮೂಲಕ ಆರೋಗ್ಯದ ಯೋಗಕ್ಷೇಮ ನೋಡಿಕೊಳ್ಳಲಿದೆ. ಬಾಧಿತ ಮಗು 23 ವರ್ಷ ವಯಸ್ಸಿಗೆ ಬಂದ ಬಳಿಕ 10 ಲಕ್ಷ ರೂ ಹಣಕಾಸು ನೆರವು ನೀಡುತ್ತದೆ.
Recommended Video
(ಒನ್ಇಂಡಿಯಾ ಸುದ್ದಿ)
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications