ಜಗತ್ತು ಮಾತನಾಡಿತು, ‘ನಾಸಾ’ ಮಾಡಿ ತೋರಿಸಿತು..! ಇದು ಶತಮಾನದ ಸಾಧನೆ..!
ಬಾಹ್ಯಾಕಾಶ ಊಹೆಗೆ ನಿಲುಕದಷ್ಟು ವಿಶಾಲ. ಅದರ ಆಳ-ಅಗಲ ವಿಜ್ಞಾನಿಗಳಿಗೂ ಸರಿಯಾಗಿ ಅರ್ಥವಾಗಿಲ್ಲ. ಹೀಗಾಗಿ ವಿಜ್ಞಾನಿಗಳು ಬಾಹ್ಯಾಕಾಶದ ವಿಚಾರದಲ್ಲಿ ಕಲ್ಪನೆಗಳನ್ನೇ ಆಧಾರ ಮಾಡಿಕೊಳ್ಳುತ್ತಾರೆ. ಆದರೆ ಕೆಲವು ಸಂದರ್ಭದಲ್ಲಿ ಕಲ್ಪನೆ ಸತ್ಯವಾಗುತ್ತವೆ. ಈಗಲೂ ಅಷ್ಟೇ ಹಿಂದೆ ಎಂದೂ ಮಾನವ ಸಾಧಿಸಲಾಗದ ಬಹುದೊಡ್ಡ ಗುರಿಯನ್ನು ನಾಸಾ ತಲುಪಿಬಿಟ್ಟಿದೆ. ಇದೇ ಮೊಟ್ಟ ಮೊದಲ ಬಾರಿಗೆ ಭೂಮಿ ಬಿಟ್ಟು ಬೇರೆ ಗ್ರಹದಲ್ಲಿ ಮಾನವ ನಿರ್ಮಿತ ಹೆಲಿಕಾಪ್ಟರ್ ಹಾರಾಡಿದೆ. ಫೆಬ್ರವರಿಯಲ್ಲಿ ನಾಸಾ ನಿರ್ಮಿತ 'ಪೆರ್ಸೆವೆರನ್ಸ್' ರೋವರ್ ಮಂಗಳನ ಮೇಲೆ ಲ್ಯಾಂಡ್ ಆಗಿತ್ತು.
ಪೆರ್ಸೆವೆರನ್ಸ್ ತನ್ನ ಹೊಟ್ಟೆಯಲ್ಲಿ ಜೋಪಾನವಾಗಿ ಹೆಲಿಕಾಪ್ಟರ್ನ್ನು ಇಟ್ಟಕೊಂಡು ಪ್ರಯಾಣ ಬೆಳೆಸಿತ್ತು. ಕೆಲವು ದಿನದ ಹಿಂದೆ ಮಂಗಳ ಗ್ರಹದ ನೆಲದ ಮೇಲೆ ಹೆಲಿಕಾಪ್ಟರ್ನ ಇಳಿಸಿದ್ದ ನಾಸಾ ನಿರ್ಮಿತ ರೋವರ್, ಅದರ ಹಾರಟಕ್ಕೆ ಸಿದ್ಧತೆ ನಡೆಸಿತ್ತು. ಆದರೆ ಅದು ಸುಲಭದ ವಿಚಾರವಾಗಿರಲಿಲ್ಲ. ಅಲ್ಲಿ ಹೆಜ್ಜೆಹೆಜ್ಜೆಗೂ ಅಪಾಯ ಎದುರಾಗಿತ್ತು.
ಹೀಗಾಗಿ ಹಲವು ಬಾರಿ ಹೆಲಿಕಾಪ್ಟರ್ ಹಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದ್ದರೂ ಕ್ಯಾನ್ಸಲ್ ಆಗಿತ್ತು. ಅಂತಿಮವಾಗಿ ಅಮೆರಿಕದ ಕಾಲಮಾನ ಏಪ್ರಿಲ್ 19ರಂದು ಹೆಲಿಕಾಪ್ಟರ್ ತನ್ನ ಮೊದಲ ಹಾರಾಟ ನಡೆಸಿದೆ. ಇದರ ವಿಡಿಯೋ ತುಣುಕನ್ನು ನಾಸಾ ರಿಲೀಸ್ ಮಾಡಿದೆ.

10 ಅಡಿ ಅಷ್ಟೇ ಹಾರಿದ್ದು..!
ನಾಸಾ ವಿಜ್ಞಾನಿಗಳ ಯೋಜನೆ ಪ್ರಕಾರ ಹೆಲಿಕಾಪ್ಟರ್ ಮಂಗಳ ಗ್ರಹದ ಮೇಲೆ ಹಲವು ದಿನಗಳ ಹಾರಾಟವನ್ನ ನಡೆಸಬೇಕಿತ್ತು. ಈ ಮೂಲಕ ರೋವರ್ ಕಾರ್ಯಾಚರಣೆಗೆ ಸಪೋರ್ಟ್ ಮಾಡಬೇಕಿತ್ತು. ಆದ್ರೆ ಯಾವುದೂ ಅಂದುಕೊಂಡಂತೆ ನಡೆಯಲಿಲ್ಲ. ಬಹುಶಃ ಎಲ್ಲೋ ಎಡವಟ್ಟಾಗಿದೆ ಎಂಬ ಅನುಮಾನ ಮೂಡುತ್ತಿದೆ. 1.8 ಕೆಜಿ ತೂಕದ ಹೆಲಿಕಾಪ್ಟರ್ ಸುಮಾರು 10 ಅಡಿ ಎತ್ತರಕ್ಕೆ ಹಾರಿದ್ದು, ನಂತರ ಸೇಫ್ ಆಗಿ ಲ್ಯಾಂಡ್ ಆಗಿದೆ. ನಾಸಾ ಮತ್ತೊಂದು ಸುತ್ತಿನ ಹಾರಾಟಕ್ಕೆ ಸಿದ್ಧತೆ ನಡೆಸಿದೆ. ಆದರೆ 2ನೇ ಸುತ್ತಿನ ಹಾರಾಟಕ್ಕೆ ಡೇಟ್ ಫಿಕ್ಸ್ ಆಗಿಲ್ಲ.

ಮರಳಿ ಯತ್ನವ ಮಾಡು..!
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಏಪ್ರಿಲ್ 7 ರಂದು ನಾಸಾ ನಿರ್ಮಿತ ಹೆಲಿಕಾಪ್ಟರ್ ಮಂಗಳನ ಮೇಲೆ ಮೊದಲ ಹಾರಾಟ ನಡೆಸಬೇಕಿತ್ತು. ಆದರೆ ಅದು ನಡೆಯಲಿಲ್ಲ, ಏಪ್ರಿಲ್ 11ರಂದು ಮತ್ತೊಮ್ಮೆ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧತೆ ನಡೆದಿತ್ತು. ಆದರೆ ಆಗಲೂ ತಾಂತ್ರಿಕ ಸಮಸ್ಯೆಯಿಂದ ಏಪ್ರಿಲ್ 14ಕ್ಕೆ ಟೈಂ ಫಿಕ್ಸ್ ಆಗಿತ್ತು. ಕಡೆಗೆ ಏಪ್ರಿಲ್ 14ರ ಡೇಟ್ ಫ್ಲಾಪ್ ಆಗಿ, ಈಗ ಏಪ್ರಿಲ್ 19ರಂದು ಹೆಲಿಕಾಪ್ಟರ್ ಹಾರಾಟಕ್ಕೆ ಸಕಲ ಸಿದ್ಧತೆ ಮಾಡಿಕೊಂಡು ಅಖಾಡ ಪ್ರವೇಶಿಸಿದ್ದರು ನಾನಾ ತಂತ್ರಜ್ಞರು. ಕಡೇ ಅವಕಾಶದಲ್ಲಿ ನಾಸಾ ಸಕ್ಸಸ್ ಆಗಿದೆ.

200 ಕೋಟಿ ವರ್ಷಗಳಷ್ಟು ಹಳೆ ಕೆರೆ
ಹೌದು, ಪೆರ್ಸೆವೆರನ್ಸ್ ರೋವರ್ ಲ್ಯಾಂಡ್ ಆಗಿರುವುದು ಮಂಗಳನ 'ಜೆಝೀರೋ' ಕುಳಿಯ ಮೇಲೆ. ಅಷ್ಟಕ್ಕೂ ಇದು ಕುಳಿ ಅಥವಾ ದೊಡ್ಡ ಗುಂಡಿ ಅಲ್ಲ. 200 ಕೋಟಿ ವರ್ಷಗಳ ಹಿಂದೆ ಇಲ್ಲೊಂದು ಕೆರೆಯೇ ಇತ್ತು. ಮಂಗಳ ಗ್ರಹದ ಬಹುತೇಕ ಪ್ರದೇಶಗಳಿಗೆ ಇದೇ ಕುಳಿಯಿಂದ ನೀರು ಹರಿಯುತ್ತಿತ್ತು. ಜೀವಿಗಳು ಈ ನೀರನ್ನು ಬಳಸಿ, ಬದುಕು ಕಟ್ಟಿಕೊಂಡಿದ್ದವು ಎಂಬ ವಾದವಿದೆ. ಆದರೆ ಕಾಲ ಕ್ರಮೇಣ ಆ ಕೆರೆ ನಾಶವಾಗಿ ಹೋಗಿದೆ ಎನ್ನುತ್ತಾರೆ ವಿಜ್ಞಾನಿಗಳು. ನಾಸಾ ವಿಜ್ಞಾನಿಗಳ ವಾದಕ್ಕೆ ಬಲ ನೀಡುವಂತೆ, 'ಜೆಝೀರೋ' ಕುಳಿ ಆಚೆ ಮತ್ತು ಈಚೆ ನೀರು ಬರಲು ಹಾಗೂ ಹೋಗಲು ದಾರಿ ಕೂಡ ಕಾಣುತ್ತದೆ. ಹೀಗಾಗಿ ಅಲ್ಲಿ ಜೀವಿಗಳು ಬದುಕಿರಬಹುದು ಅಥವಾ ಮೂಳೆ, ಪಳಿಯುಳಿಕೆ ಸಿಗಬಹುದು ಎಂಬ ವಿಶ್ವಾಸ ನಾಸಾ ವಿಜ್ಞಾನಿಗಳಿಗೆ ಇದೆ.

ಮಂಗಳನ ಮಣ್ಣು ತರಲಿದೆ ‘ನಾಸಾ’
ಮೊದಲ ಬಾರಿ ಮಂಗಳನ ಅಂಗಳಕ್ಕೆ ನುಗ್ಗಿ ಅಧ್ಯಯನ ನಡೆಸಿದ್ದ ಕೀರ್ತಿ ಹೊಂದಿರುವ ನಾಸಾ ಮತ್ತೊಂದು ಸವಾಲನ್ನು ಗೆದ್ದಿದೆ. ಪೆರ್ಸೆವೆರನ್ಸ್ ರೋವರ್ ಇದೀಗ ಲ್ಯಾಂಡ್ ಆಗಿರುವುದು ಮಂಗಳನ 'ಜೆಝೀರೋ' ಕುಳಿ ಮೇಲೆ. ಈವರೆಗೂ ಯಾರೂ ಈ ಸಾಹಸ ಮಾಡಿರಲಿಲ್ಲ. ಏಕೆಂದರೆ 'ಜೆಝೀರೋ' ಕುಳಿಯಲ್ಲಿ ತನ್ನ ಬಿಡಾರ ಹೂಡುವುದು ಯಾವುದೇ ದೇಶಕ್ಕೂ ಸಾಧ್ಯವಿರದ ಮಾತು. ಅಲ್ಲಿನ ಇಕ್ಕಟ್ಟಾದ ಪರಿಸ್ಥಿತಿ ಹಾಗೂ ವ್ಯತಿರಿಕ್ತ ವಾತಾವರಣ ಅಧ್ಯಯನಕ್ಕೆ ಸಹಕಾರಿ ಆಗಿರಲಿಲ್ಲ. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿದ್ದ ನಾಸಾ, ತನ್ನ ರೋವರ್ ಲ್ಯಾಂಡ್ ಮಾಡುವಲ್ಲಿ ಯಶಸ್ಸು ಕಂಡಿದೆ.

6 ಚಕ್ರದ ರೋವರ್..!
ಪೆರ್ಸೆವೆರನ್ಸ್ ಭೂಮಿಯಿಂದ ಉಡಾವಣೆಯಾದಾಗ ಸುಮಾರು 1 ಟನ್ ತೂಕವಿತ್ತು. ಹಾಗೂ ರೋವರ್ ಎತ್ತರ 7.3 ಅಡಿಗಳಷ್ಟಾಗಿತ್ತು. ಉದ್ದ 6.7 ಅಡಿ ಇದ್ದು, ಮಂಗಳನ ಮೇಲೆ ಅಧ್ಯಯನ ನಡೆಸಲು ಅನುಕೂಲ ಆಗಲಿದೆ. ಪೆರ್ಸೆವೆರನ್ಸ್ ಕೈಗಳು ಕೂಡ 6 ಅಡಿಗಿಂತ ಉದ್ದವೇ ಇದೆ. ಮತ್ತು 6 ಚಕ್ರಗಳನ್ನು ಪೆರ್ಸೆವೆರನ್ಸ್ ಹೊಂದಿದ್ದು, 2020ರ ಜುಲೈನಲ್ಲಿ ಭೂಮಿಯಿಂದ ಬಾಹ್ಯಾಕಾಶಕ್ಕೆ ಹಾರಿತ್ತು. ಇದೀಗ ಮಂಗಳ ಗ್ರಹದ ಮೇಲೆ ಏಕಾಂಗಿಯಾಗಿ ಅಧ್ಯನ ನಡೆಸಲಿದೆ. ಉದ್ದವಾದ ರೊಬೊಟಿಕ್ ಕ್ರೇನ್ ಹಾಗೂ ಡ್ರಿಲ್ಲರ್ 'ಪೆರ್ಸೆವೆರನ್ಸ್'ಗೆ ಸಹಾಯ ಮಾಡಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications