ರಾಷ್ಟ್ರೀಯ ಯುವದಿನ; ಸಂತ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ
"ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ" ಎಂದು ಕರೆ ನೀಡಿದವರು ಸ್ವಾಮಿ ವಿವೇಕಾನಂದ. ಯುವಕರಾಗಿದ್ದಾಲೇ ಸನ್ಯಾಸ ಸ್ವೀಕಾರ ಮಾಡಿ ಧರ್ಮ ಪ್ರಚಾರಕ್ಕೆ ಧುಮುಕಿದ ವಿವೇಕಾನಂದರು ಯುವಜನರಿಗೆ ಸ್ಪೂರ್ತಿ.
ಜನವರಿ 12 ವಿವೇಕಾನಂದರ ಜನ್ಮದಿನ. ವಿವೇಕಾನಂದ ಜನ್ಮದಿನವನ್ನು ಪ್ರತಿವರ್ಷ ರಾಷ್ಟ್ರೀಯ ಯುವದಿನವಾಗಿ ಆಚರಣೆ ಮಾಡಲಾಗುತ್ತದೆ. ಅಪ್ರತಿಮ ವಾಗ್ಮಿ, ಪ್ರಭಾವಶಾಲಿ ವ್ಯಕ್ತಿತ್ವದ ಸಂತನನ್ನು ದೇಶದ ಜನರು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ನೆನಪಿಸಿಕೊಳ್ಳುತ್ತಾರೆ.
ತಮ್ಮ ಭಾಷಾ ಕೌಶಲ್ಯ, ಆಳವಾದ ಜ್ಞಾನ, ವಿಷಯಗಳನ್ನು ಮಂಡಿಸುವ ರೀತಿ ಮುಂತಾದವುಗಳಿಂದಲೂ ಅಮೆರಿಕದಂತಹ ದೇಶದ ಜನರನ್ನು ಸೆಳೆದವರು ಸ್ವಾಮಿ ವಿವೇಕಾನಂದ. ಗುರುಗಳಿಂದ ಪಡೆದ ಬೋಧನೆಯಂತೆ ನಡೆದವರು, ನುಡಿದವರು ವಿವೇಕಾನಂದರು.

1893ರಲ್ಲಿ ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ "ಅಮೆರಿಕದ ನನ್ನ ಸಹೋದರ ಸಹೋದರಿಯರೇ" ಎಂದು ಮಾತು ಆರಂಭಿಸಿದ ಸ್ವಾಮಿ ವಿವೇಕಾನಂದರು ವಿಶ್ವಮಾನವರಾಗಿ ರೂಪಗೊಂಡರು.
ವಿದೇಶದ ವೇದಿಕೆಯಲ್ಲಿ ನಿಂತು ಭಾರತದ ಧರ್ಮ, ಸಂಸ್ಕೃತಿ ರಾಯಭಾರಿಯಾಗಿ ದೇಶಿಯ ಜೀವನ ಶೈಲಿ, ಸಂಸ್ಕಾರವನ್ನು ಜಗತ್ತಿಗೆ ತಿಳಿಯುವಂತೆ ಮಾಡಿದರು. ಭಾರತದ ಬಗ್ಗೆ ವಿದೇಶಿಯರಿದ್ದ ಭಾವನೆಯನ್ನು ಹೋಗಲಾಡಿಸಿ, ಗೌರವದಿಂದ ನೋಡುವಂತೆ ಮಾಡಿದವರು.
"ಉನ್ನತ ಆಲೋಚನೆಗಳಿಂದ, ಅತ್ಯುನ್ನತ ಆದರ್ಶಗಳಿಂದ ನಿಮ್ಮ ಮಿದುಳನ್ನು ತುಂಬಿ. ಅವುಗಳನ್ನು ಹಗಲಿರುಳು ನಿಮ್ಮ ಮುಂದಿಟ್ಟುಕೊಳ್ಳಿ. ಇದರಿಂದ ಮಹತ್ ಕಾರ್ಯ ಉದ್ಭವಿಸುತ್ತದೆ" ಎಂದು ಯುವಜನರಿಗೆ ಕರೆ ನೀಡಿದವರು.
ಸ್ವಾಮಿ ವಿವೇಕಾನಂದರು ಯುವಜನರ ಸ್ಫೂರ್ತಿಯ ಸೆಲೆ. ಆದ್ದರಿಂದ, ಅವರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವಾಗಿ ಆಚರಣೆ ಮಾಡಲಾಗುತ್ತದೆ. 1984ರಲ್ಲಿ ಭಾರತ ಸರ್ಕಾರ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತು.
ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ. ವಿವೇಕಾನಂದ ಭಾವಚಿತ್ರ ಹಲವರಿಗೆ ಸ್ಫೂರ್ತಿ ತುಂಬುತ್ತದೆ. ಅವರು ಮಾಡಿದ ಭಾಷಣ ಕೇಳಿದರೆ, ಬರೆದ ಲೇಖನ ಓದಿದರೆ ಜ್ಞಾನ ವೃದ್ಧಿಯಾಗುತ್ತದೆ. ಅಖಂಡ ಭಾರತದ ಕಲ್ಪನೆ ಹೊಂದಿದ್ದ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವು ಸಂತನಿಗೆ ನಾವು ನೀಡುವ ನಿಜವಾದ ಗೌರವವಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications