ಬಂಟರ ಸಂಘ-ದಹಿಸರ್ ಸಮಿತಿಯ ಮಹಿಳಾ ವಿಭಾಗದಿಂದ ಮುಂಬೈನಲ್ಲಿ ನವರಾತ್ರಿ ಆಚರಣೆ
Navaratri Celebration: ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟರ ಸಂಘ ಬೆಂಗಳೂರಿನ ಉಪಾಧ್ಯಕ್ಷೆ ಕಾಂತಿ ಶೆಟ್ಟಿಯವರು ಮಹಿಳೆಯರಿಗೆ ಮಾದರಿ. ಮುಂಬಯಿ ಬಂಟರ ಸಂಘವು ಇತರ ಬಂಟರ ಸಂಘಕ್ಕೆ ಮಾದರಿ. ಮುಂಬಯಿ ಬಂಟರ ಸಂಘದಲ್ಲಿರುವಷ್ಟು ಒಗ್ಗಟ್ಟು ಇತರ ಯಾವುದೇ ಬಂಟರ ಸಂಘದಲ್ಲಿಲ್ಲ. ಅವೆನ್ಯೂ ಹೋಟೇಲಿನ ಮಾಲಕರಾದ ರಘುರಾಮ ಶೆಟ್ಟಿಯವರು ಗುಣಮುಖರಾರಿ ಇಂದು ನಮ್ಮೊಂದಿಗಿರುವುದು ನಮ್ಮೆಲ್ಲರ ಸೌಬಾಗ್ಯ. ಅವರು ಮಾಡಿದ ಸತ್ಕಾರ್ಯ, ದಾನ ಧರ್ಮಗಳಿಂದ ದೇವರು ಅವರಿಗೆ ಅನುಗ್ರಹಿಸಿದ್ದಾರೆ, ಎಂದು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜಶೆಟ್ಟಿಯವರು ಎಲ್ಲರಿಗೂ ನವರಾತ್ರಿಯ ಶುಭಾಶಯಗಳನ್ನಿತ್ತರು.
ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ನವರಾತ್ರಿ ನಿಮಿತ್ತ ಅ. 4 ರಂದು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ, ಯಕ್ಷಗಾನ ತಾಳಮದ್ದಳೆ ಮತ್ತು ದಾಂಡಿಯಾ ರಾಸ್ ಕಾರ್ಯಕ್ರಮವು ಕಾಂದಿವಲಿ ಪೂರ್ವ ಅವೆನ್ಯೂ ಹೋಟೇಲಿನ ಸಭಾಂಗಣದಲ್ಲಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿದ್ದು ಮಕ್ಕಳ ಪ್ರಾರ್ಥನೆಯೊಂದಿಗೆ ದೇವಿಗೆ ಆರತಿ ಬೆಳಗಿಸಿದ ಬಳಿಕ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ ಯವರು ಸಮಾರಂಭಕ್ಕೆ ಆಗಮಿಸಿದ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ ನವರಾತ್ರಿಯ ಶುಭಾಶಯಗಳನ್ನು ಅರ್ಪಿಸಿದರು.
ಮುಖ್ಯ ಅತಿಥಿಯಾಗಿ ಅಗಮಿಸಿದ ಬಂಟರ ಸಂಘ ಬೆಂಗಳೂರಿನ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ಯವರು ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷರಾದ ಡಾ. ಪಿ. ವಿ. ಶೆಟ್ಟಿಯವರಿಂದ ಗೌರವ ಸ್ವೀಕರಿಸಿ ಮಾತನಾಡುತ್ತಾ ಇಂದು ಈ ವೇದಿಕೆಯಲ್ಲಿ ನಡೆದ ಬಂಟರ ಸಂಘದ ಮಹಿಳಾ ವಿಭಾಗದ ಸದಸ್ಯರ ಯಕ್ಷಗಾನ ತಾಳಮದ್ದಳೆ, ನುರಿತ ಕಲಾವಿದರಿಗಿಂತಲೂ ಬಹಳ ಯಶಸ್ವಿಯಾಗಿ ನಡೆದಿದೆ. ಇದನ್ನು ನೋಡುವ ಒಂದು ಸುವರ್ಣವಕಾಶ ನನಗೆ ದೊರಕಿದೆ. ಮುಂಬಯಿಯ ಬಂಟರ ಸಂಘವು ಅತೀ ದೊಡ್ಡ ಬಂಟರ ಸಂಘ. ಪ್ರಾದೇಶಿಕ ಸಮಿತಿಯ ಮೂಲಕ ಸಂಘದ ಚಟುವಟಿಕೆಗಳು ಪ್ರತಿಯೊಬ್ಬರಿಗೂ ತಲಪುತ್ತಿದ್ದು ಬೆಂಗಳೂರಲ್ಲೂ ಪ್ರಾದೇಶಿಕ ಸಮಿತಿಗಳನ್ನು ಸ್ಥಾಪಿಸಬೇಕಾಗಿದೆ. ತುಳು ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ನಮ್ಮ ಮಹಿಳೆಯರಿಗೆ ಇದೇ ರೀತಿ ಸಂಘದಲ್ಲಿ ಸಮಾಜ ಸೇವೆ ಮಾಡಲು ಸೂಕ್ತ ಅವಕಾಶ ಸಿಕ್ಕಲಿ ಎಂದರು.

ಸಮಿತಿಯ ಮುಖ್ಯ ಸಲಹೆಗಾರರಾದ ಮುಂಡಪ್ಪ ಎಸ್. ಪಯ್ಯಡೆ, ಯವರು ಮಾತನಾಡುತ್ತಾ ದೊಡ್ಡ ಮನಸ್ಸುಗಳು ತುಂಬಿದ ಈ ಸಭೆಯ ವೇದಿಕೆಯಲ್ಲಿ ಬಹಳ ಉತ್ತಮವಾಗಿ ಉತ್ಸಾಹಬರಿತವಾಗಿ ನಮ್ಮ ಮಹಿಳೆಯರು ಯಕ್ಷಗಾನ ತಾಳಮದ್ದಳೆಯನ್ನು ಪ್ರದರ್ಶಿಸಿದ್ದಾರೆ. ಇಂದು ದೇವಿಯ ದಿನ. ಸೂರ್ಯ ಚಂದ್ರರು ಬದಲಾಗಲಿಲ್ಲ ಆದರೆ ಜನರ ಮನಸ್ಸು ಬದಲಾಗುತ್ತಿದೆ. ಜನ ಸಾಮಾನ್ಯರ ಸೇವೆಯೊಂದಿಗೆ ಸಂತೋಷಕರ ಜೀವನ ನಮ್ಮೆಲ್ಲರದಾಗಲಿ ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಸಂಘದ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಕವಿತಾ ಐ. ಆರ್. ಶೆಟ್ಟಿ, ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ರೇಖಾ ವೈ ಶೆಟ್ಟಿ, ಸಲಹೆಗಾರರಾದ ಶೈಲಜಾ ಎ. ಶೆಟ್ಟಿ, ಕೋಶಾಧಿಕಾರಿ ಶುಭಾಂಗಿ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರಭಾವತಿ ಎಚ್ ಶೆಟ್ಟಿ ಉಪಸ್ಥಿತರಿದ್ದರು.

ಪೊವಾಯಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು , ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ವನಿತ ವೈ. ನೋಂಡ, ಜೊತೆ ಕೋಶಾಧಿಕಾರಿ ಸರೋಜಾ ಬಿ ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಂಚಾಲಕರಾದ ನಿಟ್ಟೆ ಮುದಣ್ಣ ಜಿ. ಶೆಟ್ಟಿ, ಉಪಕಾರ್ಯಾಧ್ಯಕ್ಷ ಗಂಗಾಧರ ಎ. ಶೆಟ್ಟಿ, ಕಾರ್ಯದರ್ಶಿ ರಮೇಶ್ ಎಂ. ಶೆಟ್ಟಿ,ಕೋಶಾಧಿಕಾರಿ ಅವಿನಾಶ್ ಎಂ. ಶೆಟ್ಟಿ, ಜೊತೆ ಕಾರ್ಯದರ್ಶಿ ಜಯ ಶೆಟ್ಟಿ, ಜೊತೆ ಕೋಶಾಧಿಕಾರಿ ರಮೇಶ್ ಎಚ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಜ್ ಆರ್. ಶೆಟ್ಟಿ, ಮುಖ್ಯ ಸಲಹೆಗಾರರಾದ ಮನೋಹರ ಎನ್. ಶೆಟ್ಟಿ, ನಿತ್ಯಾನಂದ ಹೆಗ್ಡೆ, ವಿಜಯ ಆರ್. ಭಂಡಾರಿ, ರವೀಂದ್ರ ಎಸ್. ಶೆಟ್ಟಿ, ಎರ್ಮಾಳು ಹರೀಶ್ ಶೆಟ್ಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರುಗಳಾದ ಚಂದ್ರಿಕಾ ಶೆಟ್ಟಿ, ಪದ್ಮಾವತಿ ಶೆಟ್ಟಿ, ವಿನೋದಾ ಡಿ. ಶೆಟ್ಟಿ, ವಿನೋದಾ ಎ. ಶೆಟ್ಟಿ, ಇತರ ಪ್ರಾದೇಶಿಕ ಸಮಿತಿಗಳ ಹಾಗೂ ಉಪವಿಭಾಗಗಳ ಕಾರ್ಯಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳೂ ಮತ್ತು ಸದಸ್ಯರುಗಳು ಆಗಮಿಸಿದ್ದರು.

ಮಕ್ಕಳಿಂದ ಸ್ಲೋಕ ಬಳಿಕ ಗೌರಿ ಪ್ರಸಾದ್ ಶೆಟ್ಟಿ ಯವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಿತಿಯ ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ಯೋಗಿನಿ ಎಸ್ ಶೆಟ್ಟಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ರಘುನಾಥ ಎನ್ ಶೆಟ್ಟಿ ಕಾಂದಿವಲಿ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು, ಉಷಾ ಶೆಟ್ಟಿ ಸಕಹರಿಸಿದರು. ಸಮಿತಿಯ ಮಹಿಳಾ ವಿಭಾಗದ ಕಾರ್ಯದರ್ಶಿ ಸರಿತಾ ಮಹೇಶ್ ಶೆಟ್ಟಿ ವಂದಿಸಿದರು.

ಕಟೀಲು ಸದಾನಂದ ಶೆಟ್ಟಿ ನಿರ್ದೇಶನದಲ್ಲಿ ಪ್ರಾದೇಶಿಕ ಸಮಿತಿಯ ಮಹಿಳಾ ಸದಸ್ಯರಿಂದ "ಅಂಬಾ ಶಪಥ" ಯಕ್ಷಗಾನ ತಾಳಮದ್ದಳೆ ಯಶಸ್ವಿಯಾಗಿ ನಡೆಯಿತು ಸಬಾಕಾರ್ಯಕ್ರಮದ ನಂತರ ನಡೆದ ದಾಂಡಿಯಾ ರಾಸ್ ಕಾರ್ಯಕ್ರಮದಲ್ಲಿ ಹಿರಿ ಕಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
-ವರದಿ : ಈಶ್ವರ ಎಂ. ಐಲ್
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications