ಭಾರತದಲ್ಲಿ ಪ್ರತಿ ದಿನ ನಕಲಿ ಮದ್ಯ ಸೇವನೆಯಿಂದ ಮೂವರು ಸಾವು: ಎನ್ಸಿಆರ್ಬಿ ವರದಿ
ಗುಜರಾತಿನ ಬೊಟಾಡ್ನಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಗುಜರಾತ್ನಲ್ಲಿ ಮದ್ಯವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೂ ನಕಲಿ ಮದ್ಯ ಮಾರಾಟ ರಾಜ್ಯದಲ್ಲಿ ನಡೆಯುತ್ತಿದೆ ಎನ್ನುವುದಕ್ಕೆ ಈ ದುರಂತ ಸಾಕ್ಷಿಯಾಗಿದೆ.
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಹನ್ನೆರಡು ಮಂದಿ ಮೃತಪಟ್ಟಿದ್ದರು. ಅದಾದ ಕೆಲವೇ ದಿನಗಳಲ್ಲಿ ಗುಜರಾತ್ನಲ್ಲಿ ಈ ದುರ್ಘಟನೆ ನಡೆದಿದೆ. 2022ರ ಜನವರಿ ತಿಂಗಳಿನಲ್ಲಿ ಕಳ್ಳಭಟ್ಟಿ, ಸಾರಾಯಿ, ನಕಲಿ ಮದ್ಯ ನಿಷೇಧ ಮಾಡಿರುವ ಬಿಹಾರದಲ್ಲಿ ಕೂಡ ನಕಲಿ ಮದ್ಯಕ್ಕೆ 40 ಜನ ಬಲಿಯಾಗಿದ್ದರು.
ಕಂಟ್ರಿ ಆಲ್ಕೋಹಾಲ್ ಅಥವಾ ಅಗ್ಗದ ಬಟ್ಟಿ ಇಳಿಸಿದ ಮದ್ಯವನ್ನು ಇಂಡಸ್ಟ್ರಿಯಲ್ ಆಲ್ಕೋಹಾಲ್ ಅಥವಾ ಮೆಥನಾಲ್ ಜೊತೆ ಕಲಬೆರಕೆ ಮಾಡುವ ಮೂಲಕ ಹೆಚ್ಚಿನ ಅಮಲೇರುವ ಕಳ್ಳಭಟ್ಟಿಯನ್ನು ತಯಾರು ಮಾಡಲಾಗುತ್ತದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ 2016 ಮತ್ತು 2020 ರ ನಡುವೆ 6,172 ಜನರು ಕಳ್ಳಭಟ್ಟಿ ಅಥವಾ ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ ದಿನವೊಂದಕ್ಕೆ ಮೂವರಂತೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಮಧ್ಯಪ್ರದೇಶದಲ್ಲಿ ಹೆಚ್ಚಿನ ಸಾವು
ನಕಲಿ ಮದ್ಯಕ್ಕೆ ಇಡೀ ದೇಶದಲ್ಲೇ ಮಧ್ಯಪ್ರದೇಶದಲ್ಲಿ ಅತಿ ಹೆಚ್ಚು ಜನ ಬಲಿಯಾಗಿದ್ದಾರೆ. ಒಟ್ಟಾರಿ ಸಾವುಗಳ ಪೈಕಿ ಐದನೇ ಒಂದು ಭಾಗ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. 2016-20ರ ಅವಧಿಯಲ್ಲಿ 1,241 ಮಂದಿ ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ. ಅಂದರೆ ರಾಜ್ಯದಲ್ಲಿ ಪ್ರತಿ ಮೂರು ದಿನಗಳಿಗೊಮ್ಮೆ ಅಕ್ರಮ ದಂಧೆಯಿಂದಾಗಿ ಎರಡು ಸಾವುಗಳು ಸಂಭವಿಸುತ್ತಿವೆ.
ಮಧ್ಯಪ್ರದೇಶದ ನಂತರ ಕರ್ನಾಟಕದಲ್ಲಿ 909, ಪಂಜಾಬ್ನಲ್ಲಿ 725, ಛತ್ತೀಸ್ಗಢದಲ್ಲಿ 505 ಮತ್ತು ಹರಿಯಾಣದಲ್ಲಿ 476 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ ದೆಹಲಿಯಲ್ಲಿ 94, ಗುಜರಾತ್ 50 ಮತ್ತು ಬಿಹಾರದಲ್ಲಿ 21 ಸಾವುಗಳು ದಾಖಲಾಗಿವೆ.

ಯಾವ ರಾಜ್ಯಗಳಲ್ಲಿ ಶೂನ್ಯ ಸಾವು ವರದಿ
ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ, ಮಹಾರಾಷ್ಟ್ರ, ಗೋವಾ, ಲಡಾಖ್ ಮತ್ತು ಲಕ್ಷದ್ವೀಪಗಳು ನಕಲಿ ಮದ್ಯ ಸೇವನೆಯಿಂದ ಶೂನ್ಯ ಸಾವುಗಳನ್ನು ವರದಿ ಮಾಡಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾಗಿವೆ.
ಅರುಣಾಚಲ ಪ್ರದೇಶ, ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ನಕಲಿ ಮದ್ಯ ಸೇವನೆಯಿಂದ ತಲಾ ಒಂದು ಸಾವು ದಾಖಲಾಗಿದೆ. ಈಶಾನ್ಯ ರಾಜ್ಯಗಳು ನಕಲಿ ಮದ್ಯ ನಿಯಂತ್ರಣದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ತಿಳಿಸಿದೆ.

ವರ್ಷದಿಂದ ವರ್ಷಕ್ಕೆ ಸಾವಿನ ಪ್ರಮಾಣ ಇಳಿಕೆ
ಎನ್ಸಿಆರ್ಬಿ ನೀಡಿರುವ ಅಂಕಿ ಅಂಶಗಳ ಪ್ರಕಾರ ಪ್ರತಿವರ್ಷ ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವರದಿಯ ಈ ಅಂಕಿ ಅಂಶ ಸದ್ಯಕ್ಕೆ ಸಮಾಧಾನ ನೀಡುವ ಸಂಗತಿಯಾಗಿದೆ.
2017 ರಿಂದ ದೇಶದಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವುಗಳು ಕಡಿಮೆಯಾಗುತ್ತಿವೆ ಎಂದು ಅಂಕಿಅಂಶಗಳು ತೋರಿಸುತ್ತವೆ. ದೇಶದಲ್ಲಿ 2017ರಲ್ಲಿ 1,510 ಮಂದಿ ನಕಲಿ ಮದ್ಯಕ್ಕೆ ಬಲಿಯಾಗಿದ್ದಾರೆ. 2018ರಲ್ಲಿ 1365 ಮಂದಿ, 2019ರಲ್ಲಿ 1,296 ಮತ್ತು 2020ರಲ್ಲಿ 947 ಜನ ಕಳ್ಳಭಟ್ಟಿ ಕುಡಿದು ಸಾವನ್ನಪ್ಪಿದ್ದಾರೆ.
2020ರ ದಾಖಲೆಗಳ ಪ್ರಕಾರ ಮೃತಪಟ್ಟ 947 ಮಂದಿಯಲ್ಲಿ 52 ಮಹಿಳೆಯರೂ ಸೇರಿದ್ದಾರೆ. 30 ರಿಂದ 44 ವಯೋಮಾನದವರೇ ಹೆಚ್ಚಾಗಿ ನಕಲಿ ಮದ್ಯಕ್ಕೆ ಬಲಿಯಾಗುತ್ತಿದ್ದಾರೆ. 11 ಮಂದಿ ಅಪ್ರಾಪ್ತರು ಕೂಡ ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿದೆ.

ಇತ್ತೀಚಿನ ಪ್ರಮುಖ ದುರಂತಗಳು
2015ರಲ್ಲಿ ಮುಂಬೈನ ಮಾಲ್ವಾನಿಯ ಕೊಳಗೇರಿಯಲ್ಲಿ 106 ಜನ ನಕಲಿ ಮದ್ಯ ಸೇವಿಸಿ ಮೃತಪಟ್ಟಿದ್ದರು. ನಕಲಿ ಮದ್ಯದ ದುರಂತದಲ್ಲಿ ಇದು ಅತ್ಯಂತ ಭೀಕರ ಎಂದು ಗುರುತಿಸಲಾಗಿದೆ. ಮೃತಪಟ್ಟಿದ್ದವರೆಲ್ಲ ನಿರ್ಮಾಣ ಕಾರ್ಮಿಕರು, ಒಳಚರಂಡಿ ಕ್ಲೀನರ್ಗಳು ಮತ್ತು ಸ್ವೀಪರ್ಗಳು ಎಂದು ತಿಳಿದುಬಂದಿತ್ತು. ನಕಲಿ ಮದ್ಯದ ಫೋರೆನ್ಸಿಕ್ ವರದಿಯ ಪ್ರಕಾರ ನೀರಿನಲ್ಲಿ ದುರ್ಬಲಗೊಳಿಸಿದ ಶುದ್ಧ ಮೆಥನಾಲ್ ಇತ್ತು ಎಂದು ತಿಳಿದು ಬಂದಿತ್ತು.
2011ರಲ್ಲಿ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸಂಗ್ರಾಮ್ಪುರದಲ್ಲಿನಕಲಿ ಮದ್ಯ ದುರಂತದಲ್ಲಿ 172 ಮಂದಿ ಪ್ರಾಣ ಕಳೆದುಕೊಂಡಿದ್ದರು. ನಕಲಿ ಮದ್ಯ ಸೇವನೆ ಮಾಡುವವರು ಸಾಮಾನ್ಯವಾಗಿ ಕೂಲಿ ಕಾರ್ಮಿಕರು, ಬಡವರೇ ಆಗಿರುತ್ತಾರೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ











Click it and Unblock the Notifications