ಒಂದು ಲೀ ಪೆಟ್ರೋಲ್ ಇದ್ದಿದ್ದರೆ ಶಿಶು ಪ್ರಾಣ ಉಳಿಯುತ್ತಿತ್ತಾ? ಲಂಕಾದಲ್ಲೊಂದು ದುರಂತ
ಕೊಲಂಬೋ, ಮೇ 24: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಹಲವು ಅಗತ್ಯ ವಸ್ತುಗಳು ಸರಿಯಾದ ಪ್ರಮಾಣದಲ್ಲಿ ಲಭ್ಯವಾಗದೇ ಜನಸಾಮಾನ್ಯರು ಹಾಹಾಕಾರ ನಡೆಸುವಂತಾಗಿದೆ. ದೇಶಾದ್ಯಂತ ಜನರು ಹತಾಶೆಯಿಂದ ದಂಗೆ, ಲೂಟಿಗಳಲ್ಲಿ ನಿರತರಾಗುತ್ತಿರುವುದು ಒಂದೆಡೆಯಾದರೆ, ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಜನರೂ ಇದ್ದಾರೆ. ಟುಕ್ ಟುಕ್ ವಾಹನಕ್ಕೆ ಪೆಟ್ರೋಲ್ ಸಿಗದ ಕಾರಣ ಅಸ್ವಸ್ಥ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೇ ಮೃತಪಟ್ಟ ದಾರುಣ ಘಟನೆ ಶ್ರೀಲಂಕಾದ ರಾಜಧಾನಿ ಸಮೀಪವೇ ನಡೆದಿದೆ.
ಕೊಲಂಬೋ ನಗರದಿಂದ ಸುಮಾರು ಇನ್ನೂರು ಕಿಮೀ ದೂರದಲ್ಲಿರುವ ಹಲ್ದಮುಲ್ಲಾ ಎಂಬಲ್ಲಿ ಎರಡು ದಿನದ ಧರೆಗಿಳಿದ್ದ ಶಿಶು ಜಾಂಡೀಸ್ನಿಂದ ಅಸ್ವಸ್ಥಗೊಂಡಿತ್ತು. ತಾಯಿಯ ಎದೆಹಾಲು ಕುಡಿಯಲೂ ಸಾಧ್ಯವಿರಲಿಲ್ಲ. ಹಲ್ದಮುಲ್ಲಾ ಬಳಿಯ ಆಸ್ಪತ್ರೆಗೆ ಕರೆದೊಯ್ಯಲು ಪೋಷಕರು ಯತ್ನಿಸಿದರು. ಆದರೆ ಆ ಮಗುವಿನ ತಂದೆಯ ಬಳಿ ಟುಕ್ ಟುಕ್ ವಾಹನ ಇತ್ತಾದರೂ ಅದಕ್ಕೆ ಹಾಕಿಸಲು ಪೆಟ್ರೋಲ್ ಸಿಗಲಿಲ್ಲ. ಹೀಗಾಗಿ ಸಕಾಲಕ್ಕೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಲಿಲ್ಲ. ಹಾಗೂ ಹೀಗೂ ಬೇರೆ ವಾಹನದ ಮೂಲಕ ಮಗುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಮಗುವಿನ ಪರಿಸ್ಥಿತಿ ಗಮನಿಸಿ ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಷ್ಟರಲ್ಲಿ ಮಗುವಿನ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಸಾವನ್ನಪ್ಪಿದೆ.
ಮಗುವಿನ ಶವಪರೀಕ್ಷೆ ನಡೆಸಿದ ನ್ಯಾಯಾಂಗ ವೈದ್ಯಕೀಯ ಅಧಿಕಾರಿ ಶನಕ ರೋಷನ್ ಪದಿರಾನ ಎಂಬುವವರು ಸೋಷಿಯಲ್ ಮೀಡಿಯಾದಲ್ಲಿ ಈ ಮಗುವಿನ ಸಾವಿನ ದಾರುಣ ಕಥೆಯನ್ನು ಪೋಸ್ಟ್ ಮಾಡಿದ್ದಾರೆ.
"ಮಗುವಿನ ಎಲ್ಲಾ ಅಂಗಾಂಗಗಳು ಪೂರ್ಣವಾಗಿ ಬೆಳವಣಿಗೆ ಹೊಂದಿದ್ದರಿಂದ ಪೋಸ್ಟ್ ಮಾರ್ಟಂ ಮಾಡಬೇಕಾಗಿ ಬಂತು. ಒಂದು ಲೀಟರ್ ಪೆಟ್ರೋಲ್ ಸಿಗದ ಕಾರಣ ಮಗುವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ತಂದೆ ತಾಯಿಯನ್ನು ಜೀವನಪರ್ಯಂತ ಕಾಡುತ್ತದೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶ್ರೀಲಂಕಾದ ಇತಿಹಾಸದಲ್ಲೇ ಇದು ಅತ್ಯಂತ ಹೀನ ಆರ್ಥಿಕ ಸ್ಥಿತಿ ಆಗಿದ್ದು, ಈ ಸಂದರ್ಭದಲ್ಲಿ ರಾಜಕೀಯ ನೇತಾರರು ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ ಎಂದು ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್ನಲ್ಲಿ ಪದಿರಾನ ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಲಂಕಾ ಜರ್ಝರಿತ
ಶ್ರೀಲಂಕಾದಲ್ಲಿ ಆರ್ಥಿಕತೆ ಸಿಕ್ಕಾಪಟ್ಟೆ ಕುಸಿದಿದೆ. ಸಾಲದ ಬಾಧೆ. ಆದಾಯ ಕುಂಠಿತ ಇತ್ಯಾದಿ ಅನೇಕ ಕಾರಣಗಳಿಂದಾಗಿ ಲಂಕಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ಜನರು ದಂಗೆ, ಲೂಟಿಗಳಲ್ಲಿ ತೊಡಗಿದ್ಧಾರೆ. ಪ್ರತಿಭಟನೆ ವ್ಯಾಪಕವಾಗಿ ನಡೆದಿದೆ. ಕಳೆದ ವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವರು ಸಾವನ್ನಪ್ಪಿದ್ದರು.
ಹಿಂಸಾಚಾರಕ್ಕಿಂತ ಹೆಚ್ಚಾಗಿ ಲಂಕಾದ ಜನಜೀವನ ಅಗತ್ಯವಸ್ತುಗಳ ಲಭ್ಯತೆ ಇಲ್ಲದೇ ಹೈರಾಣವಾಗಿದೆ. ಪೆಟ್ರೋಲ್ ಇತ್ಯಾದಿ ಅಗತ್ಯ ವಸ್ತುಗಳನ್ನ ಕೊಳ್ಳಲೂ ಲಂಕಾ ಬಳಿ ಹಣ ಇಲ್ಲದಂತಾಗಿದೆ. ಭಾರತದಿಂದ ಒಂದಷ್ಟು ಔಷಧ ಸಾಮಗ್ರಿಗಳ ವ್ಯವಸ್ಥೆ ಆಗಿದೆ. ಭಾರತ ಸ್ವಲ್ಪಮಟ್ಟಿಗೆ ಹಣಕಾಸಿನ ನೆರವನ್ನೂ ನೀಡಿದೆ. ಇತರ ದೇಶಗಳಿಂದ ಲಂಕಾಗೆ ನಿರೀಕ್ಷಿತ ನೆರವು ಸಿಕ್ಕಿಲ್ಲ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications