ವ್ಯಕ್ತಿಚಿತ್ರ: ನೂತನ ಚುನಾವಣಾ ಆಯುಕ್ತಅನೂಪ್ ಚಂದ್ರ ಪಾಂಡೆ
ಅನೂಪ್ ಚಂದ್ರ ಪಾಂಡೆ ಭಾರತದ ನೂತನ ಚುನಾವಣಾ ಆಯುಕ್ತರಾಗಿ (ಇಸಿ) ಜೂನ್ 09, 2021ರಂದು ಅಧಿಕಾರ ವಹಿಸಿಕೊಂಡರು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ನೇತೃತ್ವದ ಭಾರತ ಚುನಾವಣಾ ಆಯೋಗಕ್ಕೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆಗೆ ಪಾಂಡೆ ಎರಡನೇ ಚುನಾವಣಾ ಆಯುಕ್ತರಾಗಿ ಸೇರಿದ್ದಾರೆ.
ಫೆಬ್ರವರಿ 15, 1959 ರಂದು ಜನಿಸಿದ ಅನೂಪ್ ಚಂದ್ರ ಪಾಂಡೆ 1984 ನೇ ತಂಡದ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದಾರೆ. ಸುಮಾರು 37 ವರ್ಷಗಳ ಭಾರತ ಸರ್ಕಾರದ ಸೇವೆಯ ಅವಧಿಯಲ್ಲಿ, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಮತ್ತು ಅವರ ಕೇಡರ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಅನೂಪ್ ಚಂದ್ರ ಪಾಂಡೆ, ಪಂಜಾಬ್ ಎಂಜಿನಿಯರಿಂಗ್ ಕಾಲೇಜಿನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಮತ್ತು ಪಂಜಾಬ್ ವಿಶ್ವವಿದ್ಯಾಲಯದಿಂದ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇತಿಹಾಸ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿರುವ ಅವರು ಮಗಧ್ ವಿಶ್ವವಿದ್ಯಾಲಯದಿಂದ ಪ್ರಾಚೀನ ಭಾರತೀಯ ಇತಿಹಾಸದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

ಉತ್ತರ ಪ್ರದೇಶ ಕೇಡರ್ ಅಧಿಕಾರಿ:
ಪಾಂಡೆ ಆಗಸ್ಟ್ 2019ರಲ್ಲಿ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಭಾರತದ ಚುನಾವಣಾ ಆಯೋಗಕ್ಕೆ ಸೇರುವ ಮೊದಲು, ಪಾಂಡೆ ಉತ್ತರ ಪ್ರದೇಶದ ಸದಸ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮೇಲ್ವಿಚಾರಣಾ ಸಮಿತಿಯಾಗಿ ಸೇವೆ ಸಲ್ಲಿಸುತ್ತಿದರು.
ಮುಖ್ಯ ಕಾರ್ಯದರ್ಶಿಯಾಗಿ ಅವರ ಆಡಳಿತದಲ್ಲಿ, ರಾಜ್ಯವು ಪ್ರಯಾಗರಾಜ್ನಲ್ಲಿ ಕುಂಭಮೇಳವನ್ನು ಮತ್ತು 2019 ರಲ್ಲಿ ವಾರಣಾಸಿಯಲ್ಲಿ ಪ್ರವಾಸಿ ಭಾರತೀಯ ದಿವಸವನ್ನು ಯಶಸ್ವಿಯಾಗಿ ಆಯೋಜಿಸಿತು.
ಇದಕ್ಕೂ ಮೊದಲು ಅನೂಪ್ ಚಂದ್ರ ಅವರು ರಾಜ್ಯದ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿ ಸೇವೆ ಸಲ್ಲಿಸಿದರು ಮತ್ತು 2018 ರಲ್ಲಿ ಲಕ್ನೋದಲ್ಲಿ ಬೃಹತ್ ಹೂಡಿಕೆದಾರರ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದರು. ಸಿಂಗಲ್ ವಿಂಡೋ ನಿವೇಶ್ ಮಿತ್ರ ಪೋರ್ಟಲ್ ಸೇರಿದಂತೆ ಕೈಗಾರಿಕೆಗಳು ಮತ್ತು ವ್ಯಾಪಾರ ಕ್ಷೇತ್ರದಲ್ಲಿ ವಿವಿಧ ನೀತಿ ಸುಧಾರಣೆಗಳನ್ನು ಅವರು ಪರಿಚಯಿಸಿದರು.

ಉತ್ತರ ಪ್ರದೇಶ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ (ಹಣಕಾಸು), ಪಾಂಡೆ ಮಾಡಿದ ಪ್ರಯತ್ನಗಳು ಉತ್ತರ ಪ್ರದೇಶದ ಕೃಷಿ ಸಾಲ ಮನ್ನಾ ಯೋಜನೆಯ ಯಶಸ್ವಿ ವಿನ್ಯಾಸ, ಯೋಜನೆ ಮತ್ತು ಅನುಷ್ಠಾನಕ್ಕೆ ಕಾರಣವಾಯಿತು.
ಕೇಂದ್ರ ಸರ್ಕಾರದಲ್ಲಿ ವಿವಿಧ ಹುದ್ದೆ:
ಕೇಂದ್ರ ಸರ್ಕಾರದಲ್ಲಿ ಪಾಂಡೆ ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಮತ್ತು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಜಿ 20 ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯಂಥ ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶಕರಾಗಿದ್ದರು.
ಪಾಂಡೆ ಬರವಣಿಗೆಯಲ್ಲಿ ತೀವ್ರ ಆಸಕ್ತಿಯನ್ನು ಹೊಂದಿದ್ದಾರೆ ಮತ್ತು "ಪ್ರಾಚೀನ ಭಾರತದಲ್ಲಿ ಆಡಳಿತ"ಎಂಬ ಪುಸ್ತಕವನ್ನು ಬರೆದಿದ್ದಾರೆ, ಇದು ಪ್ರಾಚೀನ ಭಾರತೀಯ ನಾಗರಿಕ ಸೇವೆಯ ವಿಕಸನ, ಸ್ವರೂಪ, ವ್ಯಾಪ್ತಿ, ಕಾರ್ಯಗಳು ಮತ್ತು ಸಂಬಂಧಿತ ಅಂಶಗಳನ್ನು ಋಗ್ವೇದ ಕಾಲದಿಂದ ಕ್ರಿ.ಶ 650 ರವರೆಗೆ ಪರಿಶೋಧಿಸುತ್ತದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications