ಮುಂದಿನ ತಿಂಗಳು ಭಾರತದಲ್ಲಿ ಮಾರುತಿಯ ಹೊಸ ಕಾರ್ ಬಿಡುಗಡೆ?
ಭಾರತೀಯ ಫೋರ್ ವೀಲರ್ ಮಾರುಕಟ್ಟೆಯಲ್ಲಿ ಹವಾ ಸೃಷ್ಟಿಸಿರುವ ಮಾರುತಿ ಸ್ವಿಫ್ಟ್, ಗ್ರಾಹಕರನ್ನು ಸೆಳೆಯುತ್ತಿದೆ. ಈ ವಾಹನವನ್ನು ಗ್ರಾಹಕ ತುಂಬ ಇಷ್ಟ ಪಟ್ಟಿದ್ದಾರೆ. ಕಳೆದ ತಿಂಗಳೂ ಹೊಸ ಸ್ವಿಫ್ಟ್ ಕಾರ್ ಹೆಚ್ಚು ಮಾರಾಟವಾದ ದಾಖಲೆಯನ್ನು ಸಹ ಹೊಂದಿದೆ. ಈ ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿರುವ ಮಾರುತಿ, ಮತ್ತೊಂದು ಕಾರ್ನ್ನು ಮಾರುಕಟ್ಟೆಯಲ್ಲಿ ಲಾಂಚ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದು, ಮುಂದಿನ ತಿಂಗಳು ಈ ಕಾರ್ ಗ್ರಾಹಕರಿಗೆ ಲಭ್ಯವಾಗುವ ಸಾಧ್ಯತೆ ಇದೆ.
ಹೊಸ ಕಾಂಪ್ಯಾಕ್ಟ್ ಸೆಡಾನ್ ಕಾರು ಡಿಜೈರ್ ಫೇಸ್ಲಿಫ್ಟ್ ಅನ್ನು ಮುಂದಿನ ತಿಂಗಳು ಲಾಂಚ್ ಮಾಡುವ ಸಾಧ್ಯತೆ ಇದೆ. ಈ ವಾಹನವನ್ನು ಟೆಸ್ಟ್ ಟೈಮ್ ವೇಳೆ ಹಲವು ಬಾರಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಈ ಕಾರಿನ ಫೀಚರ್ಸ್ ಹೇಗಿರಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಮಾರುತಿ ಸುಜುಕಿಯು ಹೊಸ Z-ಸೀರೀಸ್ 3 ಸಿಲಿಂಡರ್ ಎಂಜಿನ್ ಅನ್ನು ಫೇಸ್ಲಿಫ್ಟೆಡ್ ಡಿಜೈರ್ನಲ್ಲಿ ಸೇರಿಸುತ್ತದೆ. ಈ ಎಂಜಿನ್ ಹೊಸ ಕಾರ್ಗೆ ಶಕ್ತಿ ನೀಡುತ್ತದೆ. ಈ 1.2 ಲೀಟರ್ ಎಂಜಿನ್ 82 ಎಚ್ಪಿ ಪವರ್ ಮತ್ತು 112 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ 5 ಸ್ಪೀಡ್ ಮ್ಯಾನುವಲ್ ಮತ್ತು 5 ಸ್ಪೀಡ್ AMT ಗೇರ್ ಬಾಕ್ಸ್ ಹೊಂದಿದೆ. ಹೊಸ ಡಿಜೈರ್ನಲ್ಲಿ ಪವರ್ ಮತ್ತು ಟಾರ್ಕ್ನಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಬಹುದು ಎಂದು ನಂಬಲಾಗಿದೆ. ಹೊಸ ಎಂಜಿನ್ ಶೇಕಡಾ 14ಕ್ಕಿಂತ ಹೆಚ್ಚು ಮೈಲೇಜ್ ನೀಡುತ್ತದೆ ಎಂದು ಮಾರುತಿ ಹೇಳಿದೆ.
New gen Maruti Dzire spotted testing for the first time
— MotorOctane (@MotorOctane) February 4, 2024
Some of the spied things include 360 degree camera, floating infotainment system and a new tail lamp design
Excited for the new Dzire? pic.twitter.com/AztcKvqBT0
ಮೂರು ಸಿಲಿಂಡರ್ನಿಂದ ಏನು ಲಾಭ?
ಹೊಸ ಡಿಜೈರ್ 3 ಸಿಲಿಂಡರ್ ಎಂಜಿನ್ ಹೊಂದಿರುವುದಿಂದ ಶಕ್ತಿಯುತವಾಗಿದ್ದು, ಹೆಚ್ಚಿನ ಮೈಲೇಜ್ ನೀಡುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಾಲ್ಕು ಸಿಲೆಂಡರ್ಗಳ ಬದಲು ಮೂರು ಸಿಲೆಂಡರ್ ಬಳಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಸಿಲಿಂಡರ್ ಕಡಿಮೆ ಆದರೆ ಎಂಜಿನ್ ಗ್ರಾತ್ ಚಿಕ್ಕದಾಗಿ, ವೆಚ್ಚವೂ ಸಹ ಕಡಿತವಾಗುತ್ತದೆ. ಇಷ್ಟೇ ಅಲ್ಲ ಹೆಚ್ಚಿನ ಮೈಲೇಜ್ ನೀಡುತ್ತದೆ.

ಹೊಸ ಕಾರ್ನಲ್ಲಿ ಸಿಎನ್ಜಿ ಆಯ್ಕೆಯೂ ಲಭ್ಯವಿರುತ್ತದೆ. ಈ ಕಾರ್ ಪೆಟ್ರೋಲ್ ಇಂಜಿನ್ನಲ್ಲಿ 25 ಕಿಲೋ ಮೀಟರ್ ಮೈಲೇಜ್ ನೀಡುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ಸಿಎನ್ಜಿ ಮೋಡ್ನಲ್ಲಿ ಕಾರ್ ಸುಮಾರು 31 ಕಿಲೋ ಮೀಟರ್ ನೀಡಬಹುದು. ಈ ಕಾರ್ ಎರಡು ಸಿಎನ್ಜಿ ಸಿಲಿಂಡರ್ಗಳನ್ನು ಕಾಣಬಹುದಾಗಿದೆ. ಅಲ್ಲದೆ ಈ ಕಾರ್ನಲ್ಲಿ ಸ್ಥಳಾವಕಾಶದ ಕೊರತೆ ಇಲ್ಲ. ಇನ್ನು ಈ ಕಾರ್ ಬಗ್ಗೆ ಕಂಪನಿಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಈ ಕಾರ್ ಬೆಲೆ 7 ಲಕ್ಷ ರೂ.ಗಳಿಂದ ಆರಂಭವಾಗವ ಸಾಧ್ಯತೆ ಇದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications